ಕ್ರಿಕೆಟ್

ಆಘಾತಕಾರಿ ದೃಶ್ಯ: ಸಿಕ್ಸರ್ ಸಿಡಿಸಿದ ಬೆನ್ನಲ್ಲೇ ಕುಸಿದುಬಿದ್ದು ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಬ್ಯಾಟರ್, ವಿಡಿಯೋ ವೈರಲ್!

ಮುಂಬೈನ ಮೀರಾ ರೋಡ್ ನಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೈದಾನವೊಂದರಲ್ಲಿ ಬಾಕ್ಸ್ ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನಿಗೆ ಹೃದಯಾಘಾತವಾಗಿ ಕೆಳಗೆ ಬಿದ್ದಿದ್ದಾನೆ. ಇದೆಲ್ಲವೂ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮುಂಬೈನ ಮೀರಾ ರೋಡ್ ನಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೈದಾನವೊಂದರಲ್ಲಿ ಬಾಕ್ಸ್ ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನಿಗೆ ಹೃದಯಾಘಾತವಾಗಿ ಕೆಳಗೆ ಬಿದ್ದಿದ್ದಾನೆ. ಇದೆಲ್ಲವೂ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಕಾಶಿಗಾಂವ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಖಾಸಗಿ ಕಂಪನಿಯೊಂದು ಸ್ಪರ್ಧೆಯನ್ನು ಆಯೋಜಿಸಿತ್ತು. ಆ ಕಂಪನಿಯ ಯುವಕರು ಪರಸ್ಪರ ವಿರುದ್ಧ ಕ್ರಿಕೆಟ್ ಆಡುತ್ತಿದ್ದರು. ಆ ಸಮಯದಲ್ಲಿ ಬ್ಯಾಟರ್ ಚೆಂಡನ್ನು ಬಲವಾಗಿ ಹೊಡೆದಿದ್ದು ನಂತರ ಕೆಳಗೆ ಬೀಳುತ್ತಾನೆ. ಈ ವೇಳೆ ಪಕ್ಕದಲ್ಲಿದ್ದ ಇತರ ಆಟಗಾರರು ಏನಾಯಿತು ಎಂದು ಪರಿಶೀಲಿಸುತ್ತಾರೆ. ಅಲ್ಲದೆ ಕೂಡಲೇ ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು.

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಮತ್ತೊಂದು ಸಾವಿನ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಾವು ಹೃದಯಾಘಾತದಿಂದ ಆಗಿಲ್ಲ. ಪುಣೆಯಲ್ಲಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 11 ವರ್ಷದ ಬಾಲಕನೊಬ್ಬನ ಗುಪ್ತಾಂಗಕ್ಕೆ ಚೆಂಡು ತಗುಲಿ ಸಾವನ್ನಪ್ಪಿದ್ದನು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು. ಚೆಂಡು ಬಿದ್ದ ರಭಸಕ್ಕೆ ಬಾಲಕ ಪ್ರಜ್ಞಾಹೀನನಾಗಿದ್ದನು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರಯೋಜನವಾಗಲಿಲ್ಲ.

2024ರ ಜನವರಿಯಲ್ಲೂ ಮುಂಬೈನ ಮಾಟುಂಗಾದಲ್ಲಿ ಕ್ರಿಕೆಟ್ ಪಂದ್ಯದ ವೇಳೆ 52 ವರ್ಷದ ಉದ್ಯಮಿಯೊಬ್ಬರು ತಲೆಗೆ ಚೆಂಡು ಬಡಿದು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ