ಟೀಂ ಇಂಡಿಯಾ (ಸಾಂದರ್ಭಿಕ ಚಿತ್ರ) 
ಕ್ರಿಕೆಟ್

T20 World Cup 2024: USA ವಿರುದ್ಧದ ಪಂದ್ಯಕ್ಕೂ ಮುನ್ನ ತಂಡದಲ್ಲಿ ಬದಲಾವಣೆ; ಶಿವಂ ದುಬೆ, ರವೀಂದ್ರ ಜಡೇಜಾ ಔಟ್?

ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಅತ್ಯಂತ ಮೌಲ್ಯಯುತ ಆಟಗಾರರಲ್ಲಿ ಒಬ್ಬರಾಗಿದ್ದ ಶಿವಂ ದುಬೆ ಅವರು ಟೀಂ ಇಂಡಿಯಾದ ಮೊದಲ ಎರಡು ಪಂದ್ಯಗಳಲ್ಲಿ ಭಾರತದ ಪರ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ, ಮುಂಬರುವ ಪಂದ್ಯದಲ್ಲಿ ಶಿವಂ ದುಬೆ ಅವರನ್ನು ರೋಹಿತ್ ಶರ್ಮಾ ತಂಡದಿಂದ ಹೊರಗಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಟೀಂ ಇಂಡಿಯಾ ತನ್ನ ಗ್ರೂಪ್ ಎ ಪಂದ್ಯದಲ್ಲಿ ಬುಧವಾರ ನ್ಯೂಯಾರ್ಕ್‌ನಲ್ಲಿ ಆತಿಥೇಯ USA ವಿರುದ್ಧ ಸೆಣಸಲಿದೆ. ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿದ ನಂತರ, ರೋಹಿತ್ ಶರ್ಮಾ ಪಡೆ ಮತ್ತೊಂದು ಗೆಲುವಿನ ತವಕದಲ್ಲಿದೆ. ಮತ್ತೊಂದೆಡೆ, ಟಿ20 ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿರುವ ಯುಎಸ್ಎ, ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ಅಚ್ಚರಿಯ ಗೆಲುವು ಸಾಧಿಸಿದ್ದು, ಮತ್ತೊಮ್ಮೆ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ.

ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಅತ್ಯಂತ ಮೌಲ್ಯಯುತ ಆಟಗಾರರಲ್ಲಿ ಒಬ್ಬರಾಗಿದ್ದ ಶಿವಂ ದುಬೆ ಅವರು ಟೀಂ ಇಂಡಿಯಾದ ಮೊದಲ ಎರಡು ಪಂದ್ಯಗಳಲ್ಲಿ ಭಾರತದ ಪರ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ, ಮುಂಬರುವ ಪಂದ್ಯದಲ್ಲಿ ಶಿವಂ ದುಬೆ ಅವರನ್ನು ರೋಹಿತ್ ಶರ್ಮಾ ತಂಡದಿಂದ ಹೊರಗಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸ್ಪಿನ್ ಬೌಲರ್‌ಗಳನ್ನು ಎದುರಿಸುವಾಗ ಶಿವಂ ದುಬೆ ವಿಶೇಷವಾಗಿ ಫ್ಲಾಟ್ ಮತ್ತು ಬ್ಯಾಟಿಂಗ್‌ಗೆ ಅನುಕೂಲಕರವಾಗಿರುವ ಪಿಚ್‌ಗಳಲ್ಲಿ ಉತ್ತಮವಾಗಿ ಆಡುತ್ತಾರೆ. ಬೌಲಿಂಗ್‌ನಲ್ಲೂ ಶಿವಂ ದುಬೆ ಅವರು ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಆದರೆ, ಟಿ20 ಯಂತಹ ಮಾದರಿಯಲ್ಲಿ, ರಿಂಕು ಸಿಂಗ್ ಬದಲಿಗೆ ದುಬೆ ಅವರನ್ನು ಆಯ್ಕೆ ಮಾಡಿದ ತಂಡದ ಆಡಳಿತವು ದುಬೆ ಅವರು ಇನ್ನಷ್ಟು ಉತ್ತಮ ಪ್ರದರ್ಶನ ನೀಡಬೇಕೆಂದು ಬಯಸುತ್ತದೆ.

ಸ್ಪಿನ್ನರ್‌ಗಳಾದ ಯುಜ್ವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಅವರು ಸೂಪರ್ 8 ಸಮಯದಲ್ಲಿ ಕೆರಿಬಿಯನ್‌ನಲ್ಲಿ ಸ್ಪಿನ್ ಸ್ನೇಹಿ ಪಿಚ್‌ಗಳಿಗೆ ಸಿದ್ಧವಾಗಬೇಕಿದ್ದು, ಈಗಿನಿಂದಲೇ ತಂಡದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ.

USA ವಿರುದ್ಧ ಪ್ಲೇಯಿಂಗ್ ಇಲೆವೆನ್

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT