ಭಾರತ-ಕೆನಡಾ ಆಟಗಾರರು 
ಕ್ರಿಕೆಟ್

T20 World Cup 2024: ಭಾರತ vs ಕೆನಡಾ ಪಂದ್ಯ ರದ್ದು, ಭಾರತ ಅಗ್ರಸ್ಥಾನ

ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವೆ ನಡೆಯಬೇಕಿದ್ದ ಪಂದ್ಯ ರದ್ದುಗೊಂಡಿದೆ.

ಫ್ಲಾರಿಡಾ: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವೆ ನಡೆಯಬೇಕಿದ್ದ ಪಂದ್ಯ ರದ್ದುಗೊಂಡಿದೆ.

ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮೈದಾನ ತೇವಗೊಂಡಿತ್ತು. ಅನೇಕ ಬಾರಿ ಮೈದಾನವನ್ನು ಪರಿಶೀಲಿಸಿದ ಅಧಿಕೃತರು ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧಾರ ಕೈಗೊಂಡರು. ಇದಕ್ಕೆ ಉಭಯ ತಂಡಗಳ ನಾಯಕರು ಒಪ್ಪಿಗೆ ಸೂಚಿಸಿದರು. ಹೀಗಾಗಿ ಉಭಯ ತಂಡಗಳು ಸಮಾನವಾಗಿ ಒಂದು ಅಂಕವನ್ನು ಪಡೆದುಕೊಂಡಿವೆ. ಇದರೊಂದಿಗೆ ಭಾರತ ಸತತ ಮೂರು ಗೆಲುವಿನೊಂದಿಗೆ ಎ' ಗುಂಪಿನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದು, ಸೂಪರ್ ಎಂಟರ ಹಂತಕ್ಕೆ ಪ್ರವೇಶಿಸಿದೆ.

ಇದೇ ಗುಂಪಿನಲ್ಲಿ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಯುಎಸ್ ಎ ಒಟ್ಟು ಐದು ಅಂಕಗಳೊಂದಿಗೆ ಎರಡನೇ ತಂಡವಾಗಿ ಸೂಪರ್ ಎಂಟರ ಹಂತಕ್ಕೆ ಪ್ರವೇಶಿಸಿದೆ. ಪಾಕಿಸ್ತಾನ ಮತ್ತು ಐರ್ಲೆಂಡ್ ತಂಡಗಳು ಟೂರ್ನಿಯಿಂದ ನಿರ್ಗಮಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT