ಆಸ್ಟ್ರೇಲಿಯಾ ಮತ್ತು ಸ್ಕಾಟ್ಲೆಂಡ್ ನಡುವಿನ T20 ವಿಶ್ವಕಪ್ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್‌ ವಿಕೆಟ್ ಕಿತ್ತ ನಂತರ ಸ್ಕಾಟ್ಲೆಂಡ್‌ನ ಮ್ಯಾಥ್ಯೂ ಕ್ರಾಸ್ (ಎಡ) ಸಂಭ್ರಮಿಸಿದರು. 
ಕ್ರಿಕೆಟ್

T20 World Cup 2024: ಸ್ಕಾಟ್ಲೆಂಡ್‌ ವಿರುದ್ಧ ಗೆದ್ದ ಆಸ್ಟ್ರೇಲಿಯಾ; ಸೂಪರ್ 8 ಗೆ ಇಂಗ್ಲೆಂಡ್ ಪ್ರವೇಶ

ಟಿ20 ವಿಶ್ವಕಪ್‌ನಲ್ಲಿ ಸೂಪರ್ 8 ಹಂತಕ್ಕೆ ಪ್ರವೇಶಿಸುವ ಸ್ಕಾಟ್ಲೆಂಡ್ ತಂಡದ ಕನಸು ಭಗ್ನವಾಗಿದ್ದು, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಬಿ ಗುಂಪಿನಿಂದ ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿವೆ. ಸೆಂಟ್ ಲೂಸಿಯಾದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ, ಇಂಗ್ಲೆಂಡ್ ಸೂಪರ್ 8 ಹಂತಕ್ಕೆ ತಲುಪಲು ಸಹಾಯ ಮಾಡಿತು.

ಟಿ20 ವಿಶ್ವಕಪ್‌ನಲ್ಲಿ ಸೂಪರ್ 8 ಹಂತಕ್ಕೆ ಪ್ರವೇಶಿಸುವ ಸ್ಕಾಟ್ಲೆಂಡ್ ತಂಡದ ಕನಸು ಭಗ್ನವಾಗಿದ್ದು, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಬಿ ಗುಂಪಿನಿಂದ ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿವೆ.

ಸೆಂಟ್ ಲೂಸಿಯಾದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ, ಇಂಗ್ಲೆಂಡ್ ಸೂಪರ್ 8 ಹಂತಕ್ಕೆ ತಲುಪಲು ಸಹಾಯ ಮಾಡಿತು. ಸ್ಕಾಟ್ಲೆಂಡ್ ಮತ್ತು ಇಂಗ್ಲೆಂಡ್ ತಲಾ 5 ಅಂಕಗಳನ್ನು ಹೊಂದಿದ್ದರೂ ರನ್‌ ರೇಟ್‌ ಉತ್ತಮವಾಗಿದ್ದ ಕಾರಣ ಇಂಗ್ಲೆಂಡ್ ಮುಂದಿನ ಹಂತಕ್ಕೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆಸ್ಟ್ರೇಕಿಯಾದ ಬಲಿಷ್ಠ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಸ್ಕಾಟ್ಲೆಂಡ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಗಳಿಸುವ ಮೂಲಕ ಸವಾಲಿನ ಗುರಿಯನ್ನು ನೀಡಿತು.

ಬ್ರೆಂಡನ್ ಮೆಕ್‌ಮುಲನ್ 34 ಎಸೆತಗಳಲ್ಲಿ 60 ರನ್ ಗಳಿಸುವ ಮೂಲಕ ಸ್ಕಾಟ್ಲೆಂಡ್ ಉತ್ತಮ ಮೊತ್ತ ಕಲೆಹಾಕಲು ನೆರವಾದರು. ನಾಯಕ ಬೆರ್‍ರಿಂಗ್ಟನ್ ಅಜೇಯ 42 ರನ್ ಗಳಿಸಿದರೆ, ಮುನ್ಸೆ 35 ರನ್ ಗಳಿಸಿದರು.

181 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಆರಂಭಿಕ ಹಂತದಲ್ಲಿ ರನ್ ಗಳಿಸಲು ಪರದಾಡಿತು. ಡೇವಿಡ್ ವಾರ್ನರ್ ಕೇವಲ ಒಂದು ರನ್ ಗಳಿಸಿ ಔಟಾದರೆ, ನಾಯಕ ಮಿಚ್‌ ಮಾರ್ಷ್ 8 ರನ್ ಗಳಿಸಿ ಔಟಾದರು. ಗ್ಲೆನ್ ಮ್ಯಾಕ್ಸ್‌ವೆಲ್‌ 11 ರನ್ ಗಳಿಸಿ ಔಟಾದರು. 50 ರನ್ ಗಳಿಸುವಷ್ಟರಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಆಸರೆಯಾದರು.

ಟ್ರಾವಿಸ್ ಹೆಡ್ 49 ಎಸೆತಗಳಲ್ಲಿ 68 ರನ್ ಗಳಿಸಿದರೆ, ಮಾರ್ಕಸ್ ಸ್ಟೊಯಿನಿಸ್ 29 ಎಸೆತಗಳಲ್ಲಿ 59 ರನ್ ಗಳಿಸಿದರು. ಟಿಮ್ ಡೇವಿಡ್ 14 ಎಸೆತಗಳಲ್ಲಿ ಅಜೇಯ 24 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ತಲುಪಿಸಿದರು. 19.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 186 ರನ್ ಗಳಿಸಿದ ಆಸ್ಟ್ರೇಲಿಯಾ ಲೀಗ್ ಹಂತದಲ್ಲಿ ಅಜೇಯವಾಗಿ ಉಳಿದು, ಸೂಪರ್ 8 ತಲುಪಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT