ಗೌತಮ್ ಗಂಭೀರ್ 
ಕ್ರಿಕೆಟ್

ನೂತನ ಕೋಚ್ ಆಯ್ಕೆ: ಪ್ರತೀ ಮಾದರಿಗೂ ಬೇರೆ ಬೇರೆ ತಂಡ; Gautam Gambhir ಷರತ್ತಿಗೆ BCCI ಒಪ್ಪಿಗೆ?

ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆ ಬಹುತೇಕ ಅಂತಿಮವಾಗಿದ್ದು, ಕೋಚ್ ಆಗಿ ಭಾರತ ಕ್ರಿಕೆಟ್ ತಂಡ ಮಾಜಿ ಸ್ಟಾರ್ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದು ಅವರ ಎಲ್ಲ ಷರತ್ತುಗಳಿಗೆ ಬಿಸಿಸಿಐ ಒಪ್ಪಿದೆ ಎಂದು ಹೇಳಲಾಗಿದೆ.

ಮುಂಬೈ: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆ ಬಹುತೇಕ ಅಂತಿಮವಾಗಿದ್ದು, ಕೋಚ್ ಆಗಿ ಭಾರತ ಕ್ರಿಕೆಟ್ ತಂಡ ಮಾಜಿ ಸ್ಟಾರ್ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದು ಅವರ ಎಲ್ಲ ಷರತ್ತುಗಳಿಗೆ ಬಿಸಿಸಿಐ ಒಪ್ಪಿದೆ ಎಂದು ಹೇಳಲಾಗಿದೆ.

ನಿನ್ನೆಯಷ್ಟೇ ಗೌತಮ್ ಗಂಭೀರ್ ರನ್ನು ಬಿಸಿಸಿಐನ ಸಿಇಸಿ ತಂಡ ಸಂದರ್ಶನ ಮಾಡಿದ್ದು ಈ ವೇಳೆ ಗೌತಮ್ ಗಂಭೀರ್ ತಾವು ತಂಡದ ಕೋಚ್ ಆಗಲು ಇರಿಸಿದ್ದ ಎಲ್ಲ ಷರತ್ತುಗಳನ್ನು ಬಿಸಿಸಿಐ ಒಪ್ಪಿದೆ ಎನ್ನಲಾಗಿದೆ. ಪ್ರಮುಖವಾಗಿ ಕ್ರಿಕೆಟ್ ಮೂರು ಮಾದರಿಗಳಿಗೆ ಮೂರು ಬಗೆಯ ತಂಡ ರಚನೆ ಮಾಡಬೇಕೆಂಬ ಗೌತಿ ನಿರ್ಧಾರಕ್ಕೆ ಬಿಸಿಸಿಐ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಇದೀಗ ಇದೇ ವಿಚಾರವಾಗಿ ಇಂದು ಗೌತಮ್ ಗಂಭೀರ್ ಬಿಸಿಸಿಐ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ನೂತನ ಕೋಚ್ ಹುದ್ದೆಯ ಅವಧಿ ಜುಲೈ 2024 ರಿಂದ ಡಿಸೆಂಬರ್ 2027 ರವರೆಗೆ ಎಲ್ಲಾ ಮೂರು ಸ್ವರೂಪಗಳಿಗೆ-ಟೆಸ್ಟ್, ODI ಮತ್ತು T20I ಗಳಿಗೆ ಹೊಸ ಕೋಚ್‌ನ ಒಪ್ಪಂದವು ಮಾನ್ಯವಾಗಿರುತ್ತದೆ.

ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ವಿಚಾರವಾಗಿ ಬಹು ತಿಂಗಳುಗಳಿಂದ ಭುಗಿಲೆದ್ದಿದ್ದ ಚರ್ಚೆಗೆ ಇಂದೇ ಅಂತಿಮ ತೆರೆ ಬೀಳುವ ಸಾಧ್ಯತೆ ಇದ್ದು, ಹಾಲಿ ಕೋಚ್ ರಾಹುಲ್ ದ್ರಾವಿಡ್ ರ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಆಯ್ಕೆ ಬಹುತೇಕ ಖಚಿತವಾದಂತಾಗಿದೆ.

ಜೂನ್ 18 ರಂದು ಮುಂಬೈನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಲು ಗಂಭೀರ್ ಸಂದರ್ಶನಕ್ಕೆ ಹಾಜರಾಗಿದ್ದರು. ಗಂಭೀರ್ ಅವರು ಮಂಗಳವಾರ ಮಧ್ಯಾಹ್ನ 2-4 ಗಂಟೆಯ ನಡುವೆ ಜಯ್ ಶಾ ಮತ್ತು ಇತರರನ್ನು ಭೇಟಿಯಾಗಿದ್ದು, ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT