ಗೌತಮ್ ಗಂಭೀರ್ 
ಕ್ರಿಕೆಟ್

ನೂತನ ಕೋಚ್ ಆಯ್ಕೆ: ಪ್ರತೀ ಮಾದರಿಗೂ ಬೇರೆ ಬೇರೆ ತಂಡ; Gautam Gambhir ಷರತ್ತಿಗೆ BCCI ಒಪ್ಪಿಗೆ?

ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆ ಬಹುತೇಕ ಅಂತಿಮವಾಗಿದ್ದು, ಕೋಚ್ ಆಗಿ ಭಾರತ ಕ್ರಿಕೆಟ್ ತಂಡ ಮಾಜಿ ಸ್ಟಾರ್ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದು ಅವರ ಎಲ್ಲ ಷರತ್ತುಗಳಿಗೆ ಬಿಸಿಸಿಐ ಒಪ್ಪಿದೆ ಎಂದು ಹೇಳಲಾಗಿದೆ.

ಮುಂಬೈ: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆ ಬಹುತೇಕ ಅಂತಿಮವಾಗಿದ್ದು, ಕೋಚ್ ಆಗಿ ಭಾರತ ಕ್ರಿಕೆಟ್ ತಂಡ ಮಾಜಿ ಸ್ಟಾರ್ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದು ಅವರ ಎಲ್ಲ ಷರತ್ತುಗಳಿಗೆ ಬಿಸಿಸಿಐ ಒಪ್ಪಿದೆ ಎಂದು ಹೇಳಲಾಗಿದೆ.

ನಿನ್ನೆಯಷ್ಟೇ ಗೌತಮ್ ಗಂಭೀರ್ ರನ್ನು ಬಿಸಿಸಿಐನ ಸಿಇಸಿ ತಂಡ ಸಂದರ್ಶನ ಮಾಡಿದ್ದು ಈ ವೇಳೆ ಗೌತಮ್ ಗಂಭೀರ್ ತಾವು ತಂಡದ ಕೋಚ್ ಆಗಲು ಇರಿಸಿದ್ದ ಎಲ್ಲ ಷರತ್ತುಗಳನ್ನು ಬಿಸಿಸಿಐ ಒಪ್ಪಿದೆ ಎನ್ನಲಾಗಿದೆ. ಪ್ರಮುಖವಾಗಿ ಕ್ರಿಕೆಟ್ ಮೂರು ಮಾದರಿಗಳಿಗೆ ಮೂರು ಬಗೆಯ ತಂಡ ರಚನೆ ಮಾಡಬೇಕೆಂಬ ಗೌತಿ ನಿರ್ಧಾರಕ್ಕೆ ಬಿಸಿಸಿಐ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಇದೀಗ ಇದೇ ವಿಚಾರವಾಗಿ ಇಂದು ಗೌತಮ್ ಗಂಭೀರ್ ಬಿಸಿಸಿಐ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ನೂತನ ಕೋಚ್ ಹುದ್ದೆಯ ಅವಧಿ ಜುಲೈ 2024 ರಿಂದ ಡಿಸೆಂಬರ್ 2027 ರವರೆಗೆ ಎಲ್ಲಾ ಮೂರು ಸ್ವರೂಪಗಳಿಗೆ-ಟೆಸ್ಟ್, ODI ಮತ್ತು T20I ಗಳಿಗೆ ಹೊಸ ಕೋಚ್‌ನ ಒಪ್ಪಂದವು ಮಾನ್ಯವಾಗಿರುತ್ತದೆ.

ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ವಿಚಾರವಾಗಿ ಬಹು ತಿಂಗಳುಗಳಿಂದ ಭುಗಿಲೆದ್ದಿದ್ದ ಚರ್ಚೆಗೆ ಇಂದೇ ಅಂತಿಮ ತೆರೆ ಬೀಳುವ ಸಾಧ್ಯತೆ ಇದ್ದು, ಹಾಲಿ ಕೋಚ್ ರಾಹುಲ್ ದ್ರಾವಿಡ್ ರ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಆಯ್ಕೆ ಬಹುತೇಕ ಖಚಿತವಾದಂತಾಗಿದೆ.

ಜೂನ್ 18 ರಂದು ಮುಂಬೈನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಲು ಗಂಭೀರ್ ಸಂದರ್ಶನಕ್ಕೆ ಹಾಜರಾಗಿದ್ದರು. ಗಂಭೀರ್ ಅವರು ಮಂಗಳವಾರ ಮಧ್ಯಾಹ್ನ 2-4 ಗಂಟೆಯ ನಡುವೆ ಜಯ್ ಶಾ ಮತ್ತು ಇತರರನ್ನು ಭೇಟಿಯಾಗಿದ್ದು, ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಮರೀಚಿಕೆ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಇದೇ ಮೊದಲು: UP YouTuber ಮನೆ ಮೇಲೆ ED ದಾಳಿ: ಲಂಬೋರ್ಗಿನಿ, BMW Z4 ಐಷಾರಾಮಿ ಕಾರುಗಳನ್ನು ನೋಡಿ ಅಧಿಕಾರಿಗಳು ದಂಗು!

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ: ಉದ್ಯೋಗ ಖಾತ್ರಿ ಯೋಜನೆಗೆ ಗಾಂಧಿ ಹೆಸರು ಘೋಷಿಸಿದ ದೀದಿ!

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್‌ ಭದ್ರತೆ ಹೆಚ್ಚಳ!

SHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!

SCROLL FOR NEXT