ಗೌತಮ್ ಗಂಭೀರ್ - ಬಿಸಿಸಿಐ 
ಕ್ರಿಕೆಟ್

ಭಾರತ ತಂಡದ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ ಬಹುತೇಕ ಖಚಿತ; ಘೋಷಣೆಯೊಂದೆ ಬಾಕಿ!

ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಮಂಗಳವಾರ ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಹುದ್ದೆಗಾಗಿ ಸಂದರ್ಶನ ಮಾಡಿದೆ. ಗಂಭೀರ್ ವರ್ಚುಯಲ್ ಆಗಿ ಹಾಜರಾಗುವುದರೊಂದಿಗೆ ಜೂಮ್ ಕರೆಯಲ್ಲಿ ಸಿಎಸಿ ಅಧ್ಯಕ್ಷ ಅಶೋಕ್ ಮಲ್ಹೋತ್ರಾ ಅವರೊಂದಿಗೆ ಸಂದರ್ಶನ ನಡೆಯಿತು.

ನವದೆಹಲಿ: ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಮಂಗಳವಾರ ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಹುದ್ದೆಗಾಗಿ ಸಂದರ್ಶನ ಮಾಡಿದೆ.

ಗಂಭೀರ್ ವರ್ಚುಯಲ್ ಆಗಿ ಹಾಜರಾಗುವುದರೊಂದಿಗೆ ಜೂಮ್ ಕರೆಯಲ್ಲಿ ಸಿಎಸಿ ಅಧ್ಯಕ್ಷ ಅಶೋಕ್ ಮಲ್ಹೋತ್ರಾ ಅವರೊಂದಿಗೆ ಸಂದರ್ಶನ ನಡೆಯಿತು.

'ಹೌದು, ಗಂಭೀರ್ ಸಿಎಸಿ ಸಂದರ್ಶನಕ್ಕೆ ಹಾಜರಾಗಿದ್ದರು. ಇಂದು ಒಂದು ಸುತ್ತಿನ ಚರ್ಚೆ ನಡೆದಿದೆ. ನಾಳೆ ಇನ್ನೊಂದು ಸುತ್ತಿನ ಚರ್ಚೆ ನಡೆಯುವ ನಿರೀಕ್ಷೆಯಿದೆ' ಎಂದು ಬಿಸಿಸಿಐ ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ.

ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಗಂಭೀರ್ ಸ್ಪರ್ಧೆಯಲ್ಲಿರುವ ಏಕೈಕ ಅಭ್ಯರ್ಥಿ ಎಂದು ಹೇಳಲಾಗಿದ್ದು, ಅವರ ಹೆಸರನ್ನು ಘೋಷಣೆ ಮಾಡುವುದು ಕೇವಲ ಔಪಚಾರಿಕತೆಯಾಗಿದ್ದು ಅದು ಮುಂದಿನ 48 ಗಂಟೆಗಳಲ್ಲಿ ಸಂಭವಿಸಬಹುದು ಎಂದು ಮೂಲಗಳು ತಿಳಿಸಿವೆ.

ಸಿಎಸಿ ಅಧ್ಯಕ್ಷ ಅಶೋಕ್ ಮಲ್ಹೋತ್ರಾ ಮತ್ತು ಅವರ ಸಹೋದ್ಯೋಗಿಗಳಾದ ಜತಿನ್ ಪರಂಜ್ಪೆ ಮತ್ತು ಸುಲಕ್ಷಣಾ ನಾಯಕ್ ಅವರೊಂದಿಗಿನ ಗಂಭೀರ್ ಸಂವಾದದ ಬಗ್ಗೆ ಸದ್ಯ ವಿವರವಾದ ಮಾಹಿತಿ ಲಭ್ಯವಾಗಿಲ್ಲ.

ಮುಂದಿನ ಮೂರು ವರ್ಷಗಳವರೆಗೆ ಮುಖ್ಯ ಕೋಚ್ ಆಗಿ ಮುಂದುವರಿಯುವ ವಿಚಾರವಾಗಿ ಮಾರ್ಗಸೂಚಿ ಆಧಾರದ ಮೇಲೆ ಈ ಚರ್ಚೆಯು ಕೇಂದ್ರೀಕೃತವಾಗಿದೆ ಎಂದು ನಂಬಲಾಗಿದೆ. ಮುಂಬರುವ ಐಸಿಸಿ ಪಂದ್ಯಾವಳಿಗಳನ್ನು ಗಮನದಲ್ಲಿಟ್ಟುಕೊಂಡು ಗಂಭೀರ್ ಅವರ ಆಯ್ಕೆಗೆ ಬಿಸಿಸಿಐ ಒಲವು ತೋರಿಸಿದೆ ಎನ್ನಲಾಗುತ್ತಿದೆ.

ಗಂಭೀರ್ ಮಾರ್ಗದರ್ಶನದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಎರಡು ವರ್ಷ ಪ್ಲೇಆಫ್ ತಲುಪುವಲ್ಲಿ ಯಶಸ್ವಿಯಾಗಿತ್ತು. ಬಳಿಕ ಐಪಿಎಲ್ 2024ರ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾರ್ಗದರ್ಶಕರಾಗಿ ಮರಳಿದ 42 ವರ್ಷದ ಗಂಭೀರ್ ಅವರು 10 ವರ್ಷಗಳ ಬಳಿಕ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024 ನಂತರ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT