ಕೇನ್ ವಿಲಿಯಮ್ಸನ್ 
ಕ್ರಿಕೆಟ್

ICC T20 WorldCup 2024 ಕಳಪೆ ಪ್ರದರ್ಶನ: ನ್ಯೂಜಿಲೆಂಡ್ ನಾಯಕ ಸ್ಥಾನಕ್ಕೆ Kane Williamson ರಾಜಿನಾಮೆ

ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದ ಮೂಲಕ ಟೂರ್ನಿಯಿಂದಲೇ ನ್ಯೂಜಿಲೆಂಡ್ ತಂಡ ಹೊರಬಿದ್ದಿರುವ ಹಿನ್ನಲೆಯಲ್ಲಿ ತಂಡದ ನಾಯಕ ಕೇನ್ ವಿಲಿಯಮ್ಸನ್ ತಂಡದ ನಾಯಕತ್ವ ತೊರೆದಿದ್ದಾರೆ.

ನವದೆಹಲಿ: ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದ ಮೂಲಕ ಟೂರ್ನಿಯಿಂದಲೇ ನ್ಯೂಜಿಲೆಂಡ್ ತಂಡ ಹೊರಬಿದ್ದಿರುವ ಹಿನ್ನಲೆಯಲ್ಲಿ ತಂಡದ ನಾಯಕ ಕೇನ್ ವಿಲಿಯಮ್ಸನ್ ತಂಡದ ನಾಯಕತ್ವ ತೊರೆದಿದ್ದಾರೆ.

ಹೌದು.. ಈ ಬಾರಿ ಟಿ20 ವಿಶ್ವಕಪ್ ನಲ್ಲಿ ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ನಾಯಕತ್ವ ತೊರೆದಿರುವುದು ಮಾತ್ರವಲ್ಲ ನ್ಯೂಜಿಲೆಂಡ್ ತಂಡದ ಸೆಟ್ರಲ್ ಕಾಂಟ್ರಾಕ್ಟ್ ಅನ್ನೂ ನಿರಾಕರಿಸಿದ್ದಾರೆ.

ಮೂಲಗಳ ಪ್ರಕಾರ ಕೇನ್ ವಿಲಿಯಮ್ಸನ್ ಕೇವಲ ಟಿ20 ಮಾತ್ರವಲ್ಲ, ಏಕದಿನ ತಂಡದ ನಾಯಕತ್ವಕ್ಕೂ ರಾಜೀನಾಮೆ ನೀಡಿದ್ದು ಇದು ತಂಡದ ಆಘಾತಕ್ಕೆ ಕಾರಣವಾಗಿದೆ. ನ್ಯೂಜಿಲೆಂಡ್ ಕಂಡ ಅತ್ಯಂತ ಯಶಸ್ವೀ ನಾಯಕರಲ್ಲಿ ಒಬ್ಬರಾಗಿದ್ದ ಕೇನ್ ವಿಲಿಯಮ್ಸನ್ ಇದೀಗ ತಂಡದ ಕಳಪೆ ಪ್ರದರ್ಶನದಿಂದ ಬೇಸರಗೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಸೆಂಟ್ರಲ್ ಕಾಂಟ್ರಾಕ್ಟ್ ಗೂ ನಿರಾಕರಣೆ!

ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ಲೀಗ್ ಹಂತದಲ್ಲೇ ಹೊರಬಿದ್ದಿದೆ. ಹೀಗಾಗಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಅಲ್ಲದೆ, 2024-25 ರ ಋತುವಿನ ಮಂಡಳಿಯ ಕೇಂದ್ರೀಯ ಗುತ್ತಿಗೆ ಒಪ್ಪಂದವನ್ನೂ ನಿರಾಕರಿಸಿದ್ದಾರೆ.

ನಾಯಕತ್ವ ತ್ಯಜಿಸಿದರೂ ಆಟಗಾರನಾಗಿ ಮುಂದುವರಿಕೆ

ಇದೇ ವೇಳೆ ತಾವು ನಾಯಕತ್ವಕ್ಕೆ ಮಾತ್ರ ರಾಜಿನಾಮೆ ನೀಡಿದ್ದು ಓರ್ವ ಬ್ಯಾಟರ್ ಆಗಿ ಮತ್ತು ಆಟಗಾರನಾಗಿ ತಂಡದಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ. ಇದೇ ವಿಚಾರವಾಗಿ ಕೇವಲ ಬ್ಯಾಟರ್ ನನ್ನ ವೃತ್ತಿ ಜೀವನವನ್ನು ಮುಂದುವರಿಸಲು ಬಯಸುವುದಾಗಿ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಗೆ ಅವರು ತಿಳಿಸಿದ್ದಾರೆ. ಆದರೆ ಟೆಸ್ಟ್ ಕ್ರಿಕೆಟ್ ನಾಯಕತ್ವದ ಬಗ್ಗೆ ಅವರು ಇದುವರೆಗೆ ಏನೂ ಹೇಳಿಲ್ಲ.

ಅಂದಹಾಗೆ ನ್ಯೂಜಿಲೆಂಡ್ ತಂಡವನ್ನು 91 ಏಕದಿನ ಪಂದ್ಯಗಳಲ್ಲಿ ಕೇನ್ ವಿಲಿಯಮ್ಸನ್ ಮುನ್ನಡೆಸಿದ್ದು ಈ ಪೈಕಿ ತಂಡ 46 ಪಂದ್ಯಗಳಲ್ಲಿ ಗೆಲುವು, 40 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇನ್ನು ಟಿ20 ಕ್ರಿಕೆಟ್ ನಲ್ಲಿ 75 ಪಂದ್ಯಗಳಿಗೆ ನಾಯಕರಾಗಿದ್ದು 39 ಗೆಲುವು, 34 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT