ರೋಹಿತ್ ಶರ್ಮಾ ಮತ್ತು ಕುಲದೀಪ್ ಯಾದವ್ (ಸಾಂದರ್ಭಿಕ ಚಿತ್ರ) 
ಕ್ರಿಕೆಟ್

ICC T20 World Cup 2024: ''ಈಗ ತಾನೇ ಬಂದ.. ಆಡ್ಲಿ ಬಿಡೋ... ಔಟ್ ಮಾಡಬೇಡ''; ಕುಲದೀಪ್ ಗೆ Rohit Sharma ವಾರ್ನಿಂಗ್!

ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿ ಸೆಮೀಸ್ ನತ್ತ ಚಿತ್ತ ಹರಿಸಿದ್ದು, ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರ ಒಂದು ಹಾಸ್ಯಾತ್ಮಕ ವಾರ್ನಿಂಗ್ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಆ್ಯಂಟಿಗುವಾ: ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿ ಸೆಮೀಸ್ ನತ್ತ ಚಿತ್ತ ಹರಿಸಿದ್ದು, ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರ ಒಂದು ಹಾಸ್ಯಾತ್ಮಕ ವಾರ್ನಿಂಗ್ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ನಿನ್ನೆ ಆ್ಯಂಟಿಗುವಾ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ವಿರುದ್ಧ ಭಾರತ ತಂಡ 50 ರನ್ ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಮಾಡಿದ ಕುಲದೀಪ್ ಯಾದವ್ ಮೂರು ಪ್ರಮುಖ ವಿಕೆಟ್ ಪಡೆದು ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

ಆದರೆ ಇದೇ ಪಂದ್ಯದಲ್ಲಿ ಕುಲದೀಪ್ ಯಾದವ್ ಗೆ ನಾಯಕ ರೋಹಿತ್ ಶರ್ಮಾ ಹಾಸ್ಯಾತ್ಮಕವಾಗಿ ವಾರ್ನಿಂಗ್ ನೀಡಿದ ಘಟನೆ ಕೂಡ ನಡೆಯಿತು.

ಬಾಂಗ್ಲಾದೇಶ ಇನ್ನಿಂಗ್ಸ್ ನ 14ನೇ ಓವರ್ ನಲ್ಲಿ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಭಾರತದ ಕುಲದೀಪ್ ಯಾದವ್ ಗೆ ಸಿಕ್ಸರ್ ಸಿಡಿಸಿ ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದರು. ಆದರೆ ನಂತರದ ಎಸೆತದಲ್ಲಿ ಶಕೀಬ್ ರನ್ನು ಕುಲದೀಪ್ ಔಟ್ ಮಾಡುವ ಮೂಲಕ ಸೇಡು ತೀರಿಸಿಕೊಂಡರು. ನಂತರ ಕ್ರೀಸ್ ಗೆ ಬಂದ ಮಹಮದುಲ್ಲಾ ಕೂಡ ತಾವು ಎದುರಿಸಿದ ಮೊದಲ ಎಸೆತವನ್ನೇ ಆಕ್ರಮಣಕಾರಿಯಾಗಿ ಆಡಲು ಮುಂದಾದರು.

ಬಳಿಕ ಕುಲದೀಪ್ ಯಾದವ್ ಗೂಗ್ಲಿ ಎಸೆತ ಎಸೆದು ಅವರನ್ನು ಎಲ್ ಬಿ ಬಲೆಗೆ ಕೆಡವುವ ಯತ್ನ ಮಾಡಿದರು. ಇದನ್ನು ಕಂಡ ನಾಯಕ ರೋಹಿತ್ ಶರ್ಮಾ, ಕೂಡಲೇ ''ಯಾಕೋ ಏನಾಯ್ತು..,ಈಗ ತಾನೇ ಬಂದ.. ಆಡ್ಲಿ ಬಿಡೋ... ಆಗಲೇ ಔಟ್ ಮಾಡಬೇಡ.. ಗೆರೆ ದಾಟಿ ಆಡಲಿ..ಈಗಷ್ಟೇ ಕ್ರೀಸ್‌ಗೆ ಬಂದಿದ್ದಾನೆ'' ಎಂದು ಹಾಸ್ಯಾತ್ಮಕವಾಗಿ ಹೇಳಿದ್ದಾರೆ.

ಇವಿಷ್ಟೂ ಮಾತುಗಳು ಸ್ಟಂಪ್ ಮೈಕ್ ನಲ್ಲಿ ದಾಖಲಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT