ರೋಹಿತ್ ಶರ್ಮಾ ಮತ್ತು ಕುಲದೀಪ್ ಯಾದವ್ (ಸಾಂದರ್ಭಿಕ ಚಿತ್ರ) 
ಕ್ರಿಕೆಟ್

ICC T20 World Cup 2024: ''ಈಗ ತಾನೇ ಬಂದ.. ಆಡ್ಲಿ ಬಿಡೋ... ಔಟ್ ಮಾಡಬೇಡ''; ಕುಲದೀಪ್ ಗೆ Rohit Sharma ವಾರ್ನಿಂಗ್!

ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿ ಸೆಮೀಸ್ ನತ್ತ ಚಿತ್ತ ಹರಿಸಿದ್ದು, ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರ ಒಂದು ಹಾಸ್ಯಾತ್ಮಕ ವಾರ್ನಿಂಗ್ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಆ್ಯಂಟಿಗುವಾ: ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿ ಸೆಮೀಸ್ ನತ್ತ ಚಿತ್ತ ಹರಿಸಿದ್ದು, ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರ ಒಂದು ಹಾಸ್ಯಾತ್ಮಕ ವಾರ್ನಿಂಗ್ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ನಿನ್ನೆ ಆ್ಯಂಟಿಗುವಾ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ವಿರುದ್ಧ ಭಾರತ ತಂಡ 50 ರನ್ ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಮಾಡಿದ ಕುಲದೀಪ್ ಯಾದವ್ ಮೂರು ಪ್ರಮುಖ ವಿಕೆಟ್ ಪಡೆದು ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

ಆದರೆ ಇದೇ ಪಂದ್ಯದಲ್ಲಿ ಕುಲದೀಪ್ ಯಾದವ್ ಗೆ ನಾಯಕ ರೋಹಿತ್ ಶರ್ಮಾ ಹಾಸ್ಯಾತ್ಮಕವಾಗಿ ವಾರ್ನಿಂಗ್ ನೀಡಿದ ಘಟನೆ ಕೂಡ ನಡೆಯಿತು.

ಬಾಂಗ್ಲಾದೇಶ ಇನ್ನಿಂಗ್ಸ್ ನ 14ನೇ ಓವರ್ ನಲ್ಲಿ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಭಾರತದ ಕುಲದೀಪ್ ಯಾದವ್ ಗೆ ಸಿಕ್ಸರ್ ಸಿಡಿಸಿ ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದರು. ಆದರೆ ನಂತರದ ಎಸೆತದಲ್ಲಿ ಶಕೀಬ್ ರನ್ನು ಕುಲದೀಪ್ ಔಟ್ ಮಾಡುವ ಮೂಲಕ ಸೇಡು ತೀರಿಸಿಕೊಂಡರು. ನಂತರ ಕ್ರೀಸ್ ಗೆ ಬಂದ ಮಹಮದುಲ್ಲಾ ಕೂಡ ತಾವು ಎದುರಿಸಿದ ಮೊದಲ ಎಸೆತವನ್ನೇ ಆಕ್ರಮಣಕಾರಿಯಾಗಿ ಆಡಲು ಮುಂದಾದರು.

ಬಳಿಕ ಕುಲದೀಪ್ ಯಾದವ್ ಗೂಗ್ಲಿ ಎಸೆತ ಎಸೆದು ಅವರನ್ನು ಎಲ್ ಬಿ ಬಲೆಗೆ ಕೆಡವುವ ಯತ್ನ ಮಾಡಿದರು. ಇದನ್ನು ಕಂಡ ನಾಯಕ ರೋಹಿತ್ ಶರ್ಮಾ, ಕೂಡಲೇ ''ಯಾಕೋ ಏನಾಯ್ತು..,ಈಗ ತಾನೇ ಬಂದ.. ಆಡ್ಲಿ ಬಿಡೋ... ಆಗಲೇ ಔಟ್ ಮಾಡಬೇಡ.. ಗೆರೆ ದಾಟಿ ಆಡಲಿ..ಈಗಷ್ಟೇ ಕ್ರೀಸ್‌ಗೆ ಬಂದಿದ್ದಾನೆ'' ಎಂದು ಹಾಸ್ಯಾತ್ಮಕವಾಗಿ ಹೇಳಿದ್ದಾರೆ.

ಇವಿಷ್ಟೂ ಮಾತುಗಳು ಸ್ಟಂಪ್ ಮೈಕ್ ನಲ್ಲಿ ದಾಖಲಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT