ಟೀಂ ಇಂಡಿಯಾ-ನರೇಂದ್ರ ಮೋದಿ 
ಕ್ರಿಕೆಟ್

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಯ ಮಹಾಪೂರ

ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ ಶುಭಾಶಗಳ ಮಹಾಪೂರವೇ ವ್ಯಕ್ತವಾಗುತ್ತಿದೆ.

ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ ಶುಭಾಶಗಳ ಮಹಾಪೂರವೇ ವ್ಯಕ್ತವಾಗುತ್ತಿದೆ.

ಬ್ರಿಡ್ಜ್‌ಟೌನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಕೊನೆಯ ನಾಲ್ಕು ಓವರ್ ಗಳು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಅಂತಿಮವಾಗಿ ಭಾರತ 7 ರನ್ ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟ್ರೋಫಿಯನ್ನು ಎತ್ತಿಹಿಡಿದಿದೆ. ಇದು ಟೀಂ ಇಂಡಿಯಾದ ಎರಡನೇ ಟಿ20 ವಿಶ್ವಕಪ್ ಟ್ರೋಫಿ ಆಗಿದೆ. ಇನ್ನು 2007ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಮೊದಲ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿತ್ತು.

ಇನ್ನು ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಆಟಗಾರರಿಗೆ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತಂದಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನ ದೊಡ್ಡ ವಿಜಯವಾಗಿದೆ. ಭಾರತೀಯ ಆಟಗಾರರು ವಿಶ್ವಕಪ್ ಟ್ರೋಫಿ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದ್ದಾರೆ. ಒಂದೇ ಒಂದು ಪಂದ್ಯವನ್ನು ಸೋಲದೆ ಈ ದಿಗ್ವಿಜಯವನ್ನು ಸಾಧಿಸಿದ್ದೀರಿ ಎಂದು ಹೇಳಿದ್ದಾರೆ.

ಇದೇ ವೇಳೆ ಟೀಂ ಇಂಡಿಯಾಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೇಶದ ಎಲ್ಲ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!