ರೋಹಿತ್ ಶರ್ಮಾ 
ಕ್ರಿಕೆಟ್

T20 World Cup: ಗೆಲುವಿನ ಸವಿ ನೆನಪಿಗಾಗಿ ಪಿಚ್​ನ ಮಣ್ಣು ತಿಂದು, ಧನ್ಯತೆ ಅರ್ಪಿಸಿದ ರೋಹಿತ್; ವಿಡಿಯೊ ವೈರಲ್​

ಪ್ರತಿ ವಿಂಬಲ್ಡನ್ ಗೆಲುವಿನ ನಂತರ ಟೆನಿಸ್ ದಂತಕಥೆ ನೊವಾಜ್ ಜೊಕೊವಿಕ್ ಮೈದಾನದಲ್ಲಿ ಒಂದೆರಡು ಹುಲ್ಲು ತಿನ್ನುತ್ತಾರೆ.

ಬಾರ್ಬಡೋಸ್​: T-20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ ಎರಡನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತು. ಜೊತೆಗೆ 13 ವರ್ಷಗಳ ಟ್ರೋಪಿ ಬರ ಕೂಡಾ ನೀಗಿದೆ. ಇದಕ್ಕೆ ಕಾರಣವಾದ ಬಾರ್ಬಡೋಸ್ ಕ್ರೀಡಾಂಗಣದ ಪಿಚ್ ನ ಒಂದು ಚಿಟಿಕೆ ಮಣ್ಣನ್ನು ರೋಹಿತ್ ಶರ್ಮಾ ಬಾಯಲ್ಲಿ ಹಾಕುವ ಮೂಲಕ ಧನ್ಯತೆ ಅರ್ಪಿಸಿದ್ದಾರೆ. ಈ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ.

ಪ್ರತಿ ವಿಂಬಲ್ಡನ್ ಗೆಲುವಿನ ನಂತರ ಟೆನಿಸ್ ದಂತಕಥೆ ನೊವಾಜ್ ಜೊಕೊವಿಕ್ ಮೈದಾನದಲ್ಲಿ ಒಂದೆರಡು ಹುಲ್ಲು ತಿನ್ನುತ್ತಾರೆ. ಅವರು 2018 ರಿಂದ ಹುಲ್ಲು ತಿನ್ನುವ ಮೂಲಕ ತಮ್ಮ ವಿಂಬಲ್ಡನ್ ವಿಜಯೋತ್ಸವ ಆಚರಿಸುತ್ತಾರೆ. ಆದೇ ರೀತಿ ಇದೀಗ ರೋಹಿತ್ ಶರ್ಮಾ ಕೂಡಾ ಪಿಚ್ ನ ಮಣ್ಣನ್ನು ತಿನ್ನುವ ಮೂಲಕ ಧನ್ಯತೆ ಅರ್ಪಿಸಿದ್ದಾರೆ.

ಬಳಿಕ ನಾಯಕ ಮತ್ತು ಆಟಗಾರನಾಗಿ ಟಿ-20 ಮಾದರಿಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ-20 ಪಂದ್ಯ. ಈ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಯಕನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ-20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!