ಆರ್ ಸಿಬಿಗೆ ಸತತ 2ನೇ ಸೋಲು 
ಕ್ರಿಕೆಟ್

WPL 2024: ಆರ್ ಸಿಬಿಗೆ ಸತತ 2ನೇ ಸೋಲು, ಮುಂಬೈ ಇಂಡಿಯನ್ಸ್ ಗೆ 7 ವಿಕೆಟ್ ಭರ್ಜರಿ ಜಯ

ಮಹಿಳಾ ಪ್ರೀಮೀಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಸೋಲಿಗೆ ಶರಣಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಹೀನಾಯ ಸೋಲು ಕಂಡಿದೆ.

ಬೆಂಗಳೂರು: ಮಹಿಳಾ ಪ್ರೀಮೀಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಸೋಲಿಗೆ ಶರಣಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಹೀನಾಯ ಸೋಲು ಕಂಡಿದೆ.

ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡ ನೀಡಿದ್ದ 132ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ 15.1 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿ ಗುರಿ ಮುಟ್ಟಿತು. ಆ ಮೂಲಕ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ಕಳೆದುಕೊಂಡು 131ರನ್ ಗಳಿಸಿತು. ಆರ್ ಸಿಬಿ ಪರ ಎಲ್ಲಿಸ್ ಪೆರ್ರಿ 44 ರನ್ ಮತ್ತು ವೇರ್ಹ್ಯಾಮ್ 27 ರನ್ ಗಳಿಸಿದ್ದು ಬಿಟ್ಟರೆ ಉಳಿದಾವ ಬ್ಯಾಟರ್ ನಿಂದಲೂ ಉತ್ತಮ ರನ್ ಗಳಿಕೆ ಮೂಡಿಬರಲಿಲ್ಲ. ನಾಯಕಿ ಸ್ಮೃತಿ ಮಂದಾನ 9 ರನ್ ಗಳಿಗೆ ಔಟಾದರೆ, ರಿಚಾ ಘೋಷ್ 11 ರನ್ ಗಳಿಗೆ ಔಟಾಗಿ ನಿರಾಶೆ ಮೂಡಿಸಿದರು.

ಆರ್ ಸಿಬಿ ನೀಡಿದ 132 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ 15.1 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿ ಗುರಿ ಮುಟ್ಟಿತು. ಮುಂಬೈ ಪರ ಅಮೆಲಿಯಾ ಕೆರ್ ಅಜೇಯ 40 ರನ್ ಮತ್ತು ಯಾಸ್ತಿಕಾ ಭಾಟಿಯಾ 31 ರನ್ ಗಳ ನೆರವಿನಿಂದ 15.1 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿ ಗೆಲುವು ಸಾಧಿಸಿತು.

ಆರ್ ಸಿಬಿಗೆ ಸತತ 2ನೇ ಸೋಲು

ಈ ಪಂದ್ಯದ ಸೋಲಿನೊಂದಿಗೆ ಆರ್ ಸಿಬಿಗೆ ಸತತ 2ನೇ ಸೋಲು ಎದುರಾಗಿದ್ದು, ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ 25 ರನ್ ಗಳ ಅಂತರದಲ್ಲಿ ತಂಡ ಸೋಲು ಕಂಡಿತ್ತು. ಆರ್ ಸಿಬಿಯ ಮುಂದಿನ ಪಂದ್ಯ ಮಾರ್ಚ್ 4 ಸೋಮವಾರ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ