ಸನ್‌‌ರೈಸರ್ಸ್ ಹೈದರಾಬಾದ್ 
ಕ್ರಿಕೆಟ್

ಐಪಿಎಲ್ 2024: ಏಡೆನ್ ಮಾರ್ಕ್ರಾಮ್ ಬದಲಿಗೆ ಸನ್‌ರೈಸರ್ಸ್ ಹೈದರಾಬಾದ್ ಗೆ ಹೊಸ ನಾಯಕನ ನೇಮಕ

2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಎಲ್ಲ ಹತ್ತು ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಸಿದ್ಧಪಡಿಸುತ್ತಿವೆ. ಹೀಗಿರುವಾಗ, ಪಂದ್ಯಾವಳಿ ಆರಂಭಕ್ಕೂ ಮುನ್ನ ಸನ್‌‌ರೈಸರ್ಸ್ ಹೈದರಾಬಾದ್ ತಂಡವು ಹೊಸ ನಾಯಕನನ್ನು ಘೋಷಿಸಿದೆ.

ಹೈದರಾಬಾದ್: 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಎಲ್ಲ ಹತ್ತು ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಸಿದ್ಧಪಡಿಸುತ್ತಿವೆ. ಹೀಗಿರುವಾಗ, ಪಂದ್ಯಾವಳಿ ಆರಂಭಕ್ಕೂ ಮುನ್ನ ಸನ್‌‌ರೈಸರ್ಸ್ ಹೈದರಾಬಾದ್ ತಂಡವು ಹೊಸ ನಾಯಕನನ್ನು ಘೋಷಿಸಿದೆ.

ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮ್ಮಿನ್ಸ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ಸೋಮವಾರ ಪ್ರಕಟಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ 30 ವರ್ಷದ ವೇಗಿ ಕಮ್ಮಿನ್ಸ್ ಅವರನ್ನು ಎಸ್ಆರ್‌ಎಚ್ 20.50 ಕೋಟಿ ರೂ.ಗಳಿಗೆ ಖರೀದಿಸಿತ್ತು. ಈ ಮೂಲಕ ಅವರನ್ನು ಎರಡನೇ ದುಬಾರಿ ಆಟಗಾರನನ್ನಾಗಿ ಮಾಡಿದೆ.

2023ರ ಆವೃತ್ತಿಯಲ್ಲಿ ಎಸ್ಆರ್‌ಎಚ್ ತಂಡವನ್ನು ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಅವರ ಬದಲಿಗೆ ಪ್ಯಾಟ್ ಕಮ್ಮಿನ್ಸ್ ಈ ಬಾರಿ ತಂಡವನ್ನು ಮುನ್ನಡೆಸಲಿದ್ದಾರೆ.

'ನಮ್ಮ ಹೊಸ ನಾಯಕ ಪ್ಯಾಟ್ ಕಮ್ಮಿನ್ಸ್' ಎಂದು ಕಮ್ಮಿನ್ಸ್ ಅವರ ಚಿತ್ರದೊಂದಿಗೆ ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹೇಳಿದೆ.

ಕಮ್ಮಿನ್ಸ್ ಈ ಹಿಂದೆ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!