ಮುಂಬೈ ವಿರುದ್ಧ ಡೆಲ್ಲಿ ಗೆ ಜಯ 
ಕ್ರಿಕೆಟ್

WPL 2024: ಮುಂಬೈ ವಿರುದ್ಧ ಡೆಲ್ಲಿ ಗೆ 29 ರನ್ ಜಯ, 2ನೇ ಸ್ಥಾನಕ್ಕೆ ಜಿಗಿದ RCB

ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 29 ರನ್ ಗಳ ಅಂತರದ ಜಯ ದಾಖಲಿಸಿದ ಬೆನ್ನಲ್ಲೇ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2ನೇ ಸ್ಥಾನಕ್ಕೆ ಜಿಗಿದಿದೆ.

ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 29 ರನ್ ಗಳ ಅಂತರದ ಜಯ ದಾಖಲಿಸಿದ ಬೆನ್ನಲ್ಲೇ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2ನೇ ಸ್ಥಾನಕ್ಕೆ ಜಿಗಿದಿದೆ.

ಹೌದು.. ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಡೆಲ್ಲಿ ತಂಡ ನೀಡಿದ 193 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್ ನಲ್ಲಿ 8 ವಿಕೆಟ್ ಕಳೆದುಕೊಂಡು 163 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 29 ರನ್ ಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿತು. ಅಂತಿಮ ಹಂತದಲ್ಲಿ ಮುಂಬೈನ ಅಮನ್ಜೋತ್ ಕೌರ್ (42 ರನ್) ಗೆಲುವಿಗಾಗಿ ಹರಸಾಹಸ ಪಟ್ಟರಾದರೂ, ಉಳಿದ ಆಟಗಾರ್ತಿಯರಿಂದ ಉತ್ತಮ ಬೆಂಬಲ ದೊರೆಯದೆ ಮುಂಬೈ ತಂಡ ಸೋಲು ಕಂಡಿತು.

ಇದಕ್ಕೂ ಮೊದಲು ಬ್ಯಾಟಿಂಗ್ ನಡೆಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ವನಿತೆಯರ ತಂಡ ನಾಯಕಿ ಮೆಗ್ ಲ್ಯಾನಿಂಗ್ (53 ರನ್), ಜೆಮಿಮಾ ರೋಡ್ರಿಗಸ್ (ಅಜೇಯ 69 ರನ್) ಅಮೋಘ ಬ್ಯಾಟಿಂಗ್ ನೆರವಿನಿಂದ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು.

2ನೇ ಸ್ಥಾನಕ್ಕೆ ಜಿಗಿದ ಆರ್ ಸಿಬಿ

ಇಂದು ಆರ್ ಸಿಬಿ ಪಂದ್ಯವಿಲ್ಲವಾದರೂ ಅಂಕಪಟ್ಟಿಯಲ್ಲಿ ಮಾತ್ರ ಆರ್ ಸಿಬಿ ಮತ್ತೆ ಒಂದು ಸ್ಥಾನ ಮೇಲಕ್ಕೆ ಜಿಗಿದಿದೆ. ಇಂದಿನ ಪಂದ್ಯದಲ್ಲಿ ಪ್ರಬಲ ಮುಂಬೈ ಇಂಡಿಯನ್ಸ್ ತಂಡ ಸೋಲು ಕಂಡ ಪರಿಣಾಮ ಆ ತಂಡ ಒಂದು ಸ್ಥಾನ ಕೆಳಕ್ಕೆ ಕುಸಿದಿದ್ದು, ಆರ್ ಸಿಬಿ ಒಂದು ಸ್ಥಾನ ಅಂದರೆ 2ನೇ ಸ್ಥಾನಕ್ಕೇರಿದೆ. ಪಟ್ಟಿಯಲ್ಲಿ ಒಟ್ಟು 5 ಪಂದ್ಯಗಳಿಂದ 4 ರಲ್ಲಿ ಜಯಗಳಿಸಿ 1ರಲ್ಲಿ ಸೋತು 8 ಅಂಕ ಹೊಂದಿರುವ ಡೆಲ್ಲಿ ತಂಡ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, 5 ಪಂದ್ಯಗಳಲ್ಲಿ 2 ಸೋಲು, 3 ಗೆಲುವಿನೊಂದಿಗೆ 6 ಅಂಕ ಗಳಿಸಿರುವ ಆರ್ ಸಿಬಿ 2ನೇ ಸ್ಥಾನದಲ್ಲಿದೆ. ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಎರಡೂ ತಂಡಗಳ ಆರು ಅಂಕ ಹೊಂದಿದ್ದು, ನೆಟ್ ರನ್ ರೇಟ್ ಆಧಾರದಲ್ಲಿ ಉತ್ತಮ ಸ್ಥಿತಿಯಲ್ಲಿರುವ ಆರ್ ಸಿಬಿ (+0.242) 2ನೇ ಸ್ಥಾನದಲ್ಲಿದ್ದು, ಮುಂಬೈ ಇಂಡಿಯನ್ಸ್ (+0.018) ತಂಡ 3ನೇ ಸ್ಥಾನದಲ್ಲಿದೆ.

ಮಹಿಳಾ ಪ್ರೀಮಿಯರ್ ಲೀಗ್ ಅಂಕಪಟ್ಟಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT