ಗೆಲುವಿನ ಖಾತೆ ತೆರೆದ ಗುಜರಾತ್ ಜೈಂಟ್ಸ್ 
ಕ್ರಿಕೆಟ್

WPL 2024: RCBಗೆ ಮತ್ತೊಂದು ಸೋಲು, ಕೊನೆಗೂ ಗೆಲುವಿನ ಖಾತೆ ತೆರೆದ ಗುಜರಾತ್ ಜೈಂಟ್ಸ್, ಸೋತರೂ ಅಂಕಪಟ್ಟಿಯಲ್ಲಿ ಬದಲಾವಣೆ ಇಲ್ಲ!

ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಸೋಲು ಕಂಡಿದ್ದು, ಈ ವರೆಗೂ ಟೂರ್ನಿಯಲ್ಲಿ ಗೆಲುವೇ ಕಾಣದ ಗುಜರಾತ್ ತಂಡ ಆರ್ ಸಿಬಿ ವಿರುದ್ಧ 19 ರನ್ ಗಳ ಜಯ ದಾಖಲಿಸಿದೆ.

ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಸೋಲು ಕಂಡಿದ್ದು, ಈ ವರೆಗೂ ಟೂರ್ನಿಯಲ್ಲಿ ಗೆಲುವೇ ಕಾಣದ ಗುಜರಾತ್ ತಂಡ ಆರ್ ಸಿಬಿ ವಿರುದ್ಧ 19 ರನ್ ಗಳ ಜಯ ದಾಖಲಿಸಿದೆ.

ನಾಯಕಿ ಬೆತ್ ಮೂನಿ(85*) ಮತ್ತು ಲಾರಾ ವೊಲ್ವಾರ್ಡ್ಟ್(76) ಅವರ ಆಕರ್ಷಕ ಅರ್ಧಶತಕ ನೆರವಿನಿಂದ ಗುಜರಾತ್​ ಜೈಂಟ್ಸ್(Gujarat Giants)​ ತಂಡ ಬಲಿಷ್ಠ ಆರ್​ಸಿಬಿ(Royal Challengers Bangalore) ವಿರುದ್ಧ 19 ರನ್​ಗಳ ಗೆಲುವು ಸಾಧಿಸಿದ್ದು, ಇದು ಟೂರ್ನಿಯಲ್ಲಿ ತಂಡದ ಮೊದಲ ಗೆಲುವಾಗಿದೆ.

ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಗುಜರಾತ್​ ಆರಂಭಿಕ ಆಟಗಾರ್ತಿಯರಾದ ಬೆತ್ ಮೂನಿ ಮತ್ತು ಲಾರಾ ವೊಲ್ವಾರ್ಡ್ಟ್ ಅವರ ಆಕ್ರಮಣಕಾರಿ ಬ್ಯಾಟಿಂಗ್​ನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 199 ರನ್ ಗಳಿಸಿ ಆರ್ ಸಿಬಿಗೆ ಬೃಹತ್ ಗುರಿ ನೀಡಿತು. ಈ ಮೊತ್ತವನ್ನು ಬೆನ್ನು ಹತ್ತಿದ ಆರ್ ಸಿಬಿ ಒಂದು ಹಂತದ ವರೆಗೆ ದಿಟ್ಟ ರೀತಿಯಲ್ಲಿ ಬೆನ್ನಟ್ಟಿತ್ತು. ಆದರೆ ಮಧ್ಯಮ ಕ್ರಮಾಂಕದ ದಿಢೀರ್ ಕುಸಿತ ತಂಡಕ್ಕೆ ದುಬಾರಿಯಾಯಿತು.

ಜಾರ್ಜಿಯಾ ವೇರ್ಹಾಮ್, ಸೋಫಿ ಮೊಲಿನೆಕ್ಸ್ ಮತ್ತು ಸಿಮ್ರಾನ್ ಬಹದ್ದೂರ್ ರನೌಟ್ ತಂಡಕ್ಕೆ ದುಬಾರಿಯಾಗ ತಂಡ ಸೋಲಿನತ್ತ ಸರಿಯುವಂತೆ ಮಾಡಿತು. ಅಂತಿಮವಾಗಿ ಆರ್ ಸಿಬಿ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 180 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಈ ಗೆಲುವಿನ ಮೂಲಕ ಸತತ 4 ಸೋಲಿನಿಂದ ಕಂಗೆಟ್ಟಿದ್ದ ಗುಜರಾತ್​ ಜೈಂಟ್ಸ್ ಮೊದಲ ಗೆಲುವಿನ ನಗೆ ಬೀರಿತು.

ಸೋತರೂ ಅಂಕಪಟ್ಟಿಯಲ್ಲಿ ಬದಲಾವಣೆ ಇಲ್ಲ!

ಇನ್ನು ಇಂದಿನ ಪಂದ್ಯವನ್ನು ಸೋತಿರುವ ಆರ್ ಸಿಬಿ ಅಂಕ ಪಟ್ಟಿಯಲ್ಲಿ ತನ್ನ 2ನೇ ಸ್ಥಾನದಲ್ಲೇ ಮುಂದುವರೆದಿದೆ. 6 ಪಂದ್ಯಗಳಲ್ಲಿ 3 ಸೋಲು, 3 ಗೆಲುವಿನೊಂದಿಗೆ 6 ಅಂಕ ಗಳಿಸಿರುವ ಆರ್ ಸಿಬಿ +0.038 ನೆಟ್ ರನ್ ರೇಟ್ ನೊಂದಿಗೆ 2ನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್