ರಾಯಲ್ ಚಾಲೆಂಜರ್ಸ್ ಬೆಂಗಳೂರು 
ಕ್ರಿಕೆಟ್

2024 ಐಪಿಎಲ್ ಆವೃತ್ತಿ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿದಾಯ!

ಭಾರತದ ವಿಕೆಟ್‌ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಮಾರ್ಚ್ 22 ರಿಂದ ಪ್ರಾರಂಭವಾಗುವ 2024ರ ಐಪಿಎಲ್ ಆವೃತ್ತಿಯಲ್ಲಿ ತಮ್ಮ ಕೊನೆಯ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ. ಈ ಟಿ20 ಲೀಗ್‌ನ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೂ ವಿದಾಯ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಧರ್ಮಶಾಲಾ: ಭಾರತದ ವಿಕೆಟ್‌ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಮಾರ್ಚ್ 22 ರಿಂದ ಪ್ರಾರಂಭವಾಗುವ 2024ರ ಐಪಿಎಲ್ ಆವೃತ್ತಿಯಲ್ಲಿ ತಮ್ಮ ಕೊನೆಯ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ. ಈ ಟಿ20 ಲೀಗ್‌ನ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೂ ವಿದಾಯ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಜೊತೆ ಒಪ್ಪಂದ ಮಾಡಿಕೊಂಡಿರುವ 38 ವರ್ಷದ ದಿನೇಶ್ ಕಾರ್ತಿಕ್ ಅವರು 2008 ರಿಂದ ಐಪಿಎಲ್‌ನ ಎಲ್ಲಾ 16 ಆವೃತ್ತಿಗಳಲ್ಲಿ ಆಡಿದ್ದಾರೆ.

'ಈ 2024ರ ಆವೃತ್ತಿಯು ದಿನೇಶ್ ಕಾರ್ತಿಕ್ ಅವರ ಕೊನೆಯ ಐಪಿಎಲ್ ಆಗಿರುತ್ತದೆ. ಐಪಿಎಲ್ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸುವ ಬಗ್ಗೆ ನಿರ್ಧರಿಸಲಿದ್ದಾರೆ' ಎಂದು ಹೆಸರು ಹೇಳಲಿಚ್ಛಿಸದ ಬಿಸಿಸಿಐ ಮೂಲವೊಂದು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದೆ.

ಐಪಿಎಲ್‌ನಲ್ಲಿ ಅತ್ಯಂತ ಅನುಭವಿ ವಿಕೆಟ್ ಕೀಪರ್ ಬ್ಯಾಟರ್‌ಗಳಲ್ಲಿ ಒಬ್ಬರಾದ ಕಾರ್ತಿಕ್ ಅವರು ಲೀಗ್‌ನಲ್ಲಿ ಆರು ತಂಡಗಳನ್ನು ಪ್ರತಿನಿಧಿಸಿದ್ದಾರೆ. 2008 ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಈಗ ಕ್ಯಾಪಿಟಲ್ಸ್) ತಂಡಕ್ಕೆ ಸೇರ್ಪಡೆಯಾದ ಅವರು 2011 ರಲ್ಲಿ ಕಿಂಗ್ಸ್ XI ಪಂಜಾಬ್‌ ತಂಡಕ್ಕೆ ಸೇರಿದರು. 2012 ಮತ್ತು 2013ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಾಂಚೈಸಿ ಅವರನ್ನು 2015 ರಲ್ಲಿ 10.5 ಕೋಟಿ ರೂ.ಗೆ ಖರೀದಿಸಿತ್ತು. ನಂತರ ಅವರು 2016 ಮತ್ತು 2017ರಲ್ಲಿ ಗುಜರಾತ್ ಲಯನ್ಸ್ ತಂಡಕ್ಕೆ ಆಡಿದ್ದರು. ನಂತರ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದೊಂದಿಗೆ ನಾಲ್ಕು ಆವೃತ್ತಿಗಳಲ್ಲಿ ಆಡಿದ್ದರು. 2018 ರಲ್ಲಿ ಕೋಲ್ಕತ್ತಾ ತಂಡವನ್ನು ಐಪಿಎಲ್ ಪ್ಲೇಆಫ್‌ಗೆ ಮುನ್ನಡೆಸಿದ್ದರು ಮತ್ತು ಅವರು 2019 ರಲ್ಲಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದರು.

2022 ರ ಐಪಿಎಲ್ ಆವೃತ್ತಿಗೂ ಮುನ್ನವೇ ದಿನೇಶ್ ಕಾರ್ತಿಕ್ ಅವರನ್ನು ಕೆಕೆಆರ್ ಬಿಡುಗಡೆ ಮಾಡಿತು. ಬಳಿಕ ಆರ್‌ಸಿಬಿ ಎರಡನೇ ಬಾರಿಗೆ 5.5 ಕೋಟಿ ರೂ.ಗೆ ಖರೀದಿಸಿತು. 2022ರಲ್ಲಿ ಅವರು ಆರ್‌ಸಿಬಿಯ ಫಿನಿಶರ್ ಪಾತ್ರವನ್ನು ನಿರ್ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT