ಅಂತಿಮ ಟೆಸ್ಟ್​ ಗೆದ್ದು ಇತಿಹಾಸ ನಿರ್ಮಿಸಿದ ಭಾರತ 
ಕ್ರಿಕೆಟ್

5ನೇ ಟೆಸ್ಟ್: ಅಶ್ವಿನ್ ಗೆ ಐದು ವಿಕೆಟ್, ಅಂತಿಮ ಟೆಸ್ಟ್​ ಗೆದ್ದು ಇತಿಹಾಸ ನಿರ್ಮಿಸಿದ ಭಾರತ!

ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತ ತಂಡ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತ ತಂಡ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಹೌದು.. ಅಂತಿಮ ಟೆಸ್ಟ್(India vs England 5th Test)​ ಪಂದ್ಯದಲ್ಲಿ ಆತಿಥೇಯ ಭಾರತ ಇನಿಂಗ್ಸ್​ ಮತ್ತು 64 ರನ್​ಗಳ ಅಂತರದ ಗೆಲುವು ಸಾಧಿಸುವ ಮೂಲಕ ಸರಣಿಯನ್ನು 4-1ರೊಂದಿಗೆ ಮುಕ್ತಾಯಗೊಳಿಸಿದೆ.

ಗುರುವಾರ ಆರಂಭಗೊಂಡ ಈ ಟೆಸ್ಟ್​ ಪಂದ್ಯ ಕೇವಲ ಮೂರು ದಿನಕ್ಕೆ ಅಂತ್ಯಕಂಡಿದೆ. ಮೂರನೇ ದಿನವಾದ ಶನಿವಾರ 8 ವಿಕೆಟ್​ಗೆ 473 ರನ್​ ಗಳಿಸಿದ್ದಲ್ಲಿಂದ ಬ್ಯಾಟಿಂಗ್​ ಮುಂದುವರಿಸಿ ಭಾರತ ಕೇವಲ ನಾಲ್ಕು ರನ್​ ಗಳಿಸಲಷ್ಟೇ ಶಕ್ತವಾಗಿ 477ರನ್​ಗೆ ಆಲೌಟ್​ ಆಯಿತು.

2ನೇ ಇನ್ನಿಂಗ್ಸ್ ನಲ್ಲೂ ಕಾಡಿದ ಅಶ್ವಿನ್

259 ರನ್​ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಬ್ಯಾಟಿಂಗ್​ ಆರಂಭಿಸಿದ ಇಂಗ್ಲೆಂಡ್​ಗೆ 100ನೇ ಟೆಸ್ಟ್​ ಆಡಿದ ಆರ್​.ಅಶ್ವಿನ್​ ಅವಳಿ ಆಘಾತ ನೀಡಿದರು. ಜಾಕ್​ ಕ್ರಾಲಿ ಅವರನ್ನು ಶೂನ್ಯಕ್ಕೆ ಮತ್ತು ಬೆನ್​ ಡಕೆಟ್​ ಅವರನ್ನು ಕೇವಲ 2 ರನ್​ಗೆ ಔಟ್​ ಮಾಡಿ ಪೆವಿಲಿಯನ್​ಗೆ ಅಟ್ಟಿದರು. ಆ ಬಳಿಕ ಕುಲ್​ದೀಪ್​ ಯಾದವ್​ ಕೂಡ ತಮ್ಮ ಸ್ಪಿನ್ ಜಾದು ಮೂಲಕ 2 ವಿಕೆಟ್​ ಕಿತ್ತರೆ, ಜಸ್ ಪ್ರೀತ್ ಬುಮ್ರಾ ಕೂಡ 2 ಮತ್ತು ಜಡೇಜಾ 1 ವಿಕೆಟ್ ಪಡೆದು ಆಂಗ್ಲರನ್ನು ಹಡೆಮುರಿ ಕಟ್ಟಿದರು.

ಅಂತಿಮವಾಗಿ ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡ 195 ರನ್ ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ವಿರುದ್ಧ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ವ್ಯರ್ಥವಾದ ರೂಟ್​ ಏಕಾಂಗಿ ಹೋರಾಟ

ಒಂದೆಡೆ ಇಂಗ್ಲೆಂಡ್ ತಂಡದ ವಿಕೆಟ್ ಗಳು ಬೀಳುತ್ತಿದ್ದರೆ ಮತ್ತೊಂದೆಡೆ ಕ್ರೀಸ್ ನಲ್ಲಿ ಗಟ್ಟಿಯಾಗಿ ನೆಲೆಯೂರಿದ್ದ ಜೋರೂಟ್ ಏಕಾಂಗಿ ಹೋರಾಟ ನಡೆಸಿದ್ದರು. 84 ರನ್​ ಗಳಿಸಿದ ವೇಳೆ ಇವರ ವಿಕೆಟ್​ ಕೂಡ ಪತನಗೊಂಡಿತು. ಈ ವಿಕೆಟ್​ ಬೀಳುತ್ತಿದ್ದಂತೆ ಇಂಗ್ಲೆಂಡ್​ ಇನಿಂಗ್ಸ್​ ಕೂಡ ಮುಕ್ತಾಯಕಂಡಿತು. ಆರ್​.ಅಶ್ವಿನ್​ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್​ ಕಿತ್ತು ತಮ್ಮ 100ನೇ ಟೆಸ್ಟ್​ ಪಂದ್ಯವನ್ನು ಸ್ಮರಣೀಯಗೊಳಿಸಿದರು. ಕುಲ್​ದೀಪ್​ ಮತ್ತು ಜಸ್​ಪ್ರೀತ್​ ಬುಮ್ರಾ ತಲಾ 2 ವಿಕೆಟ್​ ಪಡೆದರು. ಅಂತಿಮವಾಗಿ ಇಂಗ್ಲೆಂಡ್​ 195 ರನ್​ಗೆ ಆಲೌಟ್​ ಆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT