ಅಂತಿಮ ಟೆಸ್ಟ್​ ಗೆದ್ದು ಇತಿಹಾಸ ನಿರ್ಮಿಸಿದ ಭಾರತ 
ಕ್ರಿಕೆಟ್

5ನೇ ಟೆಸ್ಟ್: ಅಶ್ವಿನ್ ಗೆ ಐದು ವಿಕೆಟ್, ಅಂತಿಮ ಟೆಸ್ಟ್​ ಗೆದ್ದು ಇತಿಹಾಸ ನಿರ್ಮಿಸಿದ ಭಾರತ!

ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತ ತಂಡ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತ ತಂಡ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಹೌದು.. ಅಂತಿಮ ಟೆಸ್ಟ್(India vs England 5th Test)​ ಪಂದ್ಯದಲ್ಲಿ ಆತಿಥೇಯ ಭಾರತ ಇನಿಂಗ್ಸ್​ ಮತ್ತು 64 ರನ್​ಗಳ ಅಂತರದ ಗೆಲುವು ಸಾಧಿಸುವ ಮೂಲಕ ಸರಣಿಯನ್ನು 4-1ರೊಂದಿಗೆ ಮುಕ್ತಾಯಗೊಳಿಸಿದೆ.

ಗುರುವಾರ ಆರಂಭಗೊಂಡ ಈ ಟೆಸ್ಟ್​ ಪಂದ್ಯ ಕೇವಲ ಮೂರು ದಿನಕ್ಕೆ ಅಂತ್ಯಕಂಡಿದೆ. ಮೂರನೇ ದಿನವಾದ ಶನಿವಾರ 8 ವಿಕೆಟ್​ಗೆ 473 ರನ್​ ಗಳಿಸಿದ್ದಲ್ಲಿಂದ ಬ್ಯಾಟಿಂಗ್​ ಮುಂದುವರಿಸಿ ಭಾರತ ಕೇವಲ ನಾಲ್ಕು ರನ್​ ಗಳಿಸಲಷ್ಟೇ ಶಕ್ತವಾಗಿ 477ರನ್​ಗೆ ಆಲೌಟ್​ ಆಯಿತು.

2ನೇ ಇನ್ನಿಂಗ್ಸ್ ನಲ್ಲೂ ಕಾಡಿದ ಅಶ್ವಿನ್

259 ರನ್​ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಬ್ಯಾಟಿಂಗ್​ ಆರಂಭಿಸಿದ ಇಂಗ್ಲೆಂಡ್​ಗೆ 100ನೇ ಟೆಸ್ಟ್​ ಆಡಿದ ಆರ್​.ಅಶ್ವಿನ್​ ಅವಳಿ ಆಘಾತ ನೀಡಿದರು. ಜಾಕ್​ ಕ್ರಾಲಿ ಅವರನ್ನು ಶೂನ್ಯಕ್ಕೆ ಮತ್ತು ಬೆನ್​ ಡಕೆಟ್​ ಅವರನ್ನು ಕೇವಲ 2 ರನ್​ಗೆ ಔಟ್​ ಮಾಡಿ ಪೆವಿಲಿಯನ್​ಗೆ ಅಟ್ಟಿದರು. ಆ ಬಳಿಕ ಕುಲ್​ದೀಪ್​ ಯಾದವ್​ ಕೂಡ ತಮ್ಮ ಸ್ಪಿನ್ ಜಾದು ಮೂಲಕ 2 ವಿಕೆಟ್​ ಕಿತ್ತರೆ, ಜಸ್ ಪ್ರೀತ್ ಬುಮ್ರಾ ಕೂಡ 2 ಮತ್ತು ಜಡೇಜಾ 1 ವಿಕೆಟ್ ಪಡೆದು ಆಂಗ್ಲರನ್ನು ಹಡೆಮುರಿ ಕಟ್ಟಿದರು.

ಅಂತಿಮವಾಗಿ ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡ 195 ರನ್ ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ವಿರುದ್ಧ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ವ್ಯರ್ಥವಾದ ರೂಟ್​ ಏಕಾಂಗಿ ಹೋರಾಟ

ಒಂದೆಡೆ ಇಂಗ್ಲೆಂಡ್ ತಂಡದ ವಿಕೆಟ್ ಗಳು ಬೀಳುತ್ತಿದ್ದರೆ ಮತ್ತೊಂದೆಡೆ ಕ್ರೀಸ್ ನಲ್ಲಿ ಗಟ್ಟಿಯಾಗಿ ನೆಲೆಯೂರಿದ್ದ ಜೋರೂಟ್ ಏಕಾಂಗಿ ಹೋರಾಟ ನಡೆಸಿದ್ದರು. 84 ರನ್​ ಗಳಿಸಿದ ವೇಳೆ ಇವರ ವಿಕೆಟ್​ ಕೂಡ ಪತನಗೊಂಡಿತು. ಈ ವಿಕೆಟ್​ ಬೀಳುತ್ತಿದ್ದಂತೆ ಇಂಗ್ಲೆಂಡ್​ ಇನಿಂಗ್ಸ್​ ಕೂಡ ಮುಕ್ತಾಯಕಂಡಿತು. ಆರ್​.ಅಶ್ವಿನ್​ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್​ ಕಿತ್ತು ತಮ್ಮ 100ನೇ ಟೆಸ್ಟ್​ ಪಂದ್ಯವನ್ನು ಸ್ಮರಣೀಯಗೊಳಿಸಿದರು. ಕುಲ್​ದೀಪ್​ ಮತ್ತು ಜಸ್​ಪ್ರೀತ್​ ಬುಮ್ರಾ ತಲಾ 2 ವಿಕೆಟ್​ ಪಡೆದರು. ಅಂತಿಮವಾಗಿ ಇಂಗ್ಲೆಂಡ್​ 195 ರನ್​ಗೆ ಆಲೌಟ್​ ಆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT