ಟೆಸ್ಟ್‌ನಲ್ಲೂ ಅಗ್ರ ಸ್ಥಾನಕ್ಕೇರಿದ ರೋಹಿತ್ ಬಳಗ 
ಕ್ರಿಕೆಟ್

ICC Rankings: ಇಂಗ್ಲೆಂಡ್ ವಿರುದ್ಧದ ಸರಣಿ ಜಯದ ಬೆನ್ನಲ್ಲೇ ಟೆಸ್ಟ್‌ನಲ್ಲೂ ಅಗ್ರ ಸ್ಥಾನಕ್ಕೇರಿದ Rohit Sharma ಬಳಗ, ಎಲ್ಲ ಮಾದರಿಯಲ್ಲೂ ಭಾರತವೇ ನಂ.1

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಗೆದ್ದು 4-1ರಲ್ಲಿ ಟೆಸ್ಟ್ ಸರಣಿ ಕೈವಶ ಮಾಡಿಕೊಂಡ ಭಾರತ ತಂಡ ಇದೀಗ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲೂ ಅಗ್ರ ಸ್ಥಾನಕ್ಕೇರಿದ್ದು, ಆ ಮೂಲಕ ಎಲ್ಲ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ನಂಬರ್ 1 ಸ್ಥಾನಕ್ಕೇರಿದೆ.

ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಗೆದ್ದು 4-1ರಲ್ಲಿ ಟೆಸ್ಟ್ ಸರಣಿ ಕೈವಶ ಮಾಡಿಕೊಂಡ ಭಾರತ ತಂಡ ಇದೀಗ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲೂ ಅಗ್ರ ಸ್ಥಾನಕ್ಕೇರಿದ್ದು, ಆ ಮೂಲಕ ಎಲ್ಲ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ನಂಬರ್ 1 ಸ್ಥಾನಕ್ಕೇರಿದೆ.

ಹೌದು.. ಪ್ರವಾಸಿ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 4-1ರ ಅಂತರದಲ್ಲಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ, ಐಸಿಸಿ ಟೆಸ್ಟ್ ತಂಡ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದು, ಇದರೊಂದಿಗೆ ಎಲ್ಲ ಮೂರು ಮಾದರಿಗಳಲ್ಲೂ (ಟೆಸ್ಟ್, ಏಕದಿನ ಹಾಗೂ ಟ್ವೆಂಟಿ-20) ಅಗ್ರಪಟ್ಟ ಅಲಂಕರಿಸಿದಂತಾಗಿದೆ.

ಈ ಪಟ್ಟಿಯಲ್ಲಿ ಪ್ರಬಲ ಆಸ್ಟೇಲಿಯಾ ತಂಡವನ್ನು ಹಿಂದಿಕ್ಕಿರುವ ರೋಹಿತ್ ಶರ್ಮಾ ಬಳಗ, ಟೆಸ್ಟ್ ರ‍್ಯಾಂಕಿಂಗ್‌‌ನಲ್ಲಿ ಅಗ್ರಸ್ಥಾನಕ್ಕೇರಿದೆ. ಭಾರತ ಈಗ 122 ರೇಟಿಂಗ್ ಪಾಯಿಂಟ್ ಹೊಂದಿದ್ದು, 117 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನಕ್ಕೆ ಕುಸಿದಿದೆ. ಮತ್ತೊಂದೆಡೆ ಭಾರತ ವಿರುದ್ಧದ ಸರಣಿಯಲ್ಲಿ ಹೀನಾಯ ಸೋಲು ಕಂಡಿರುವ ಇಂಗ್ಲೆಂಡ್ ಮೂರನೇ ಸ್ಥಾನದಲ್ಲಿ ಮುಂದುವರೆದಿದ್ದು, ಆ ತಂಡ 111 ರೇಟಿಂಗ್ ಪಾಯಿಂಟ್ ಹೊಂದಿದೆ.

ಪ್ರಸ್ತುತ ಕ್ರೈಸ್ಟ್‌ಚರ್ಚ್‌ನಲ್ಲಿ ಸಾಗುತ್ತಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ನಡುವಣ ಪಂದ್ಯದ ಫಲಿತಾಂಶ ಏನೇ ಬಂದರೂ ಭಾರತವೇ ಅಗ್ರಸ್ಥಾನದಲ್ಲಿ ಉಳಿದುಕೊಳ್ಳಲಿದೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

ಐಸಿಸಿ ರ್ಯಾಂಕಿಂಗ್ ಪಟ್ಟಿ

ಏಕದಿನ, ಟ್ವೆಂಟಿ-20ಯಲ್ಲೂ ಭಾರತಕ್ಕೆ ಅಗ್ರ ಸ್ಥಾನ

ಏಕದಿನ ಹಾಗೂ ಟ್ವೆಂಟಿ-20 ರ‍್ಯಾಂಕಿಂಗ್‌ ಪಟ್ಟಿಯಲ್ಲೂ ಭಾರತವೇ ಅಗ್ರಸ್ಥಾನದಲ್ಲಿದ್ದು, ಏಕದಿನದಲ್ಲಿ ಭಾರತ 121 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದೆ. 118 ರೇಟಿಂಗ್ ಪಾಯಿಂಟ್ ಗಳನ್ನು ಹೊಂದಿರುವ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಇನ್ನು ಚುಟುಕು ಕ್ರಿಕೆಟ್‌ನಲ್ಲಿ ಭಾರತ 266 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, 256 ರೇಟಿಂಗ್ ಹೊಂದಿರುವ ಇಂಗ್ಲೆಂಡ್ ಹಾಗೂ 255 ರೇಟಿಂಗ್ ಹೊಂದಿರುವ ಆಸ್ಟ್ರೇಲಿಯಾ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT