ಆರ್ ಸಿಬಿ ತಂಡ 
ಕ್ರಿಕೆಟ್

WPL 2024: ಮುಂಬೈನ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ RCB

ಡಬ್ಲ್ಯುಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ತಂಡವನ್ನು ಐದು ರನ್ ಗಳಿಂದ ಮಣಿಸಿ RCB ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.

ನವದೆಹಲಿ: ಡಬ್ಲ್ಯುಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ತಂಡವನ್ನು ಐದು ರನ್ ಗಳಿಂದ ಮಣಿಸಿ RCB ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.

ದೆಹಲಿಯಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 5 ರನ್​ಗಳಿಂದ ಮಣಿಸಿದ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೇ ಮೊದಲ ಬಾರಿಗೆ ಮಹಿಳೆಯರ ಪ್ರೀಮಿಯರ್ ಲೀಗ್ ಫೈನಲ್​ ತಲುಪಿದೆ.

ಮೊದಲು ಬ್ಯಾಟ್ ಮಾಡಿದ ಬೆಂಗಳೂರು 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 135 ರನ್ ಗಳಿಸಿತು. ಇನ್ನು 136 ರನ್ ಗುರಿ ಬೆನ್ನಟ್ಟಿದ ಮುಂಬೈ 6 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಲಷ್ಟೇ ಶಕ್ತವಾಯಿತು.

ಗುರಿ ಬೆನ್ನಟ್ಟಿದ ಮುಂಬೈ ಉತ್ತಮ ಆರಂಭ ಪಡೆದಿತ್ತು. ಆರ್‌ಸಿಬಿಗೆ ಮೊದಲ ಯಶಸ್ಸು ತಂದುಕೊಟ್ಟ ಶ್ರೇಯಾಂಕಾ ಪಾಟೀಲ್. ಹೇಲಿ ಮ್ಯಾಥ್ಯೂಸ್ ಔಟಾಗಿ ಮುಂಬೈಗೆ ಮೊದಲ ಪೆಟ್ಟು ನೀಡಿದರು. ಇದಾದ ನಂತರ ಯಾಸ್ತಿಕಾ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಎಲಿಸ್ ಪೆರ್ರಿ ಮತ್ತೊಂದು ಹೊಡೆತ ನೀಡಿದರು.

ನೇಟ್ ಸಿವರ್ ಬ್ರಂಟ್ 23 ರನ್ ಗಳ ಇನಿಂಗ್ಸ್ ಆಡಿದರು. ಅದೇ ಸಮಯದಲ್ಲಿ ಅಮೆಲಿಯಾ ಕೆರ್ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ ನಡುವೆ ಅರ್ಧಶತಕದ ಜೊತೆಯಾಟವಿತ್ತು. ಆದಾಗ್ಯೂ, ಹರ್ಮನ್‌ಪ್ರೀತ್ ಕೌರ್ ಅವರನ್ನು ಔಟ್ ಮಾಡುವ ಮೂಲಕ ಶ್ರೇಯಾಂಕಾ ಈ ಜೊತೆಯಾಟವನ್ನು ಮುರಿದು RCB ಅನ್ನು ಪಂದ್ಯಕ್ಕೆ ಮರಳಿ ತಂದರು. ಅಮೆಲಿಯಾ ಕೆರ್ 27 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.

ಇದಕ್ಕೂ ಮುನ್ನ ಆರ್‌ಸಿಬಿ ಪರ ಎಲ್ಲಿಸ್ ಪೆರ್ರಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ 66 ರನ್ ಗಳಿಸಿದ್ದರು. ಆದರೆ, ಬೌಲಿಂಗ್‌ನಲ್ಲಿ ಮುಂಬೈ ಪರ ಹ್ಯಾಲಿ ಮ್ಯಾಥ್ಯೂಸ್ ಮತ್ತು ನ್ಯಾಟ್ ಸಿವರ್ ಬ್ರಂಟ್ ತಲಾ ಎರಡು ವಿಕೆಟ್ ಪಡೆದರು.

ಟೂರ್ನಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಗೆ ಲಗ್ಗೆ ಇಟ್ಟಿದ್ದು ಇದೀಗ ಆರ್ ಸಿಬಿಮತ್ತು ಡೆಲ್ಲಿ ಕ್ಯಾಪಿಟಲ್ಸ್ ಚಾಂಪಿಯನ್ ಪಟ್ಟಕ್ಕಾಗಿ ಸೆಣೆಸಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT