ಸ್ಮೃತಿ ಮಂದಾನ-ರಶ್ಮಿಕಾ ಮಂದಣ್ಣ 
ಕ್ರಿಕೆಟ್

ನಮಗೆ ಸ್ಮೃತಿ ಮಂದಾನ ಬೇಕೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ: RCB ಮ್ಯಾನೇಜ್​ಮೆಂಟ್ ವಿರುದ್ಧ ಅಭಿಮಾನಿಗಳು ಗರಂ

15 ವರ್ಷಗಳಿಂದ ಈ ಸಲ ಕಪ್ ನಮ್ದೆ, ಈ ಸಲ ಕಪ್ ನಮ್ದೆ ಎಂದು ಹೇಳಿಕೊಂಡು ಬರುತ್ತಿದ್ದ RCB ಅಭಿಮಾನಿಗಳಿಗೆ ಆರ್ ಸಿಬಿ ವನಿತೆಯರ ತಂಡ ಚೊಚ್ಚಲ ಕಪ್ ಗೆದ್ದು ಎಲ್ಲರ ಮುಂದೆ ಕಾಲರ್ ಎತ್ತಿಕೊಂಡು ಓಡಾಡುವಂತೆ ಮಾಡಿದೆ ಎಂದರೆ ಅತಿಶಯೋಕ್ತಿ ಅಲ್ಲ.

15 ವರ್ಷಗಳಿಂದ ಈ ಸಲ ಕಪ್ ನಮ್ದೆ, ಈ ಸಲ ಕಪ್ ನಮ್ದೆ ಎಂದು ಹೇಳಿಕೊಂಡು ಬರುತ್ತಿದ್ದ RCB ಅಭಿಮಾನಿಗಳಿಗೆ ಆರ್ ಸಿಬಿ ವನಿತೆಯರ ತಂಡ ಚೊಚ್ಚಲ ಕಪ್ ಗೆದ್ದು ಎಲ್ಲರ ಮುಂದೆ ಕಾಲರ್ ಎತ್ತಿಕೊಂಡು ಓಡಾಡುವಂತೆ ಮಾಡಿದೆ ಎಂದರೆ ಅತಿಶಯೋಕ್ತಿ ಅಲ್ಲ.

ಆದರೆ ಈ ಮಧ್ಯೆ ಆರ್ ಸಿಬಿ ಫ್ರಾಂಚೈಸಿಯ ಒಂದು ನಡೆ ಇದೀಗ ಅಭಿಮಾನಿಗಳು ಕೆರಳುವಂತೆ ಮಾಡಿದೆ. ಹೌದು ಅದಕ್ಕೆ ಕಾರಣವಾಗಿರುವುದು ನಟಿ ರಶ್ಮಿಕಾ ಮಂದಣ್ಣ. ತುಂಬಾ ವರ್ಷಗಳಿಂದ ಅಭಿಮಾನಿಗಳು ಆರ್ ಸಿಬಿ ಹೆಸರನ್ನು ಬದಲಿಸುವಂತೆ ಒತ್ತಾಯಿಸುತ್ತಾ ಬಂದಿದ್ದರು. ಅದಕ್ಕೆ ಪ್ರತಿಯಾಗಿ ಫ್ರಾಂಚೈಸಿ ಸಹ ಇದೀಗ ಇಂಗ್ಲಿಷ್ ನಲ್ಲಿ (Royal Challengers Bangalore) ಬದಲಿಗೆ (Royal Challengers Bengaluru) ಮಾಡಲು ಉದ್ದೇಶಿಸಿದೆ.

ಅದರಂತೆ ಐಪಿಎಲ್​ ಆರಂಭಕ್ಕೂ ಮುನ್ನ ಅನೇಕ ಸೆಲೆಬ್ರಿಟಿಗಳ ಜೊತೆ ಆರ್​ಸಿಬಿ ಸಹಯೋಗ ಮಾಡಿಕೊಂಡಿದೆ. ರಶ್ಮಿಕಾ ಮಂದಣ್ಣ ಜೊತೆ RCB ಮ್ಯಾನೇಜ್​ಮೆಂಟ್​ ಕೈ ಜೋಡಿಸಿರುವುದಕ್ಕೆ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಇದು ಆರ್​ಸಿಬಿ ತೆಗೆದುಕೊಂಡ ಅತಿ ಕೆಟ್ಟ ನಿರ್ಧಾರ ಎಂದು ಅಭಿಮಾನಿಗಳು ಗರಂ ಆಗಿದ್ದಾರೆ.

ಆರ್​ಸಿಬಿ ಅನ್​ಬಾಕ್ಸ್ ವಿಡಿಯೋದಲ್ಲಿ ಈಗಾಗಲೇ ನಟರಾದ ಶಿವರಾಜ್​ಕುಮಾರ್​, ರಿಷಬ್​ ಶೆಟ್ಟಿ, ಕಿಚ್ಚ ಸುದೀಪ್​ ಮುಂತಾದ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಪ್ರೋಮೋದಲ್ಲಿ ಈ ಎಲ್ಲಾ ನಟರು ಹೆಸರು ಬದಲಾವಣೆಯ ಕುರಿತು ಹಿಂಟ್ ನೀಡುತ್ತಿದ್ದಾರೆ. ಅಂತೆ ರಶ್ಮಿಕಾ ಮಂದಣ್ಣ ಸಹ ಅನ್​ಬಾಕ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕಕ್ಕೆ ಸ್ಮೃತಿ ಮಂಧಾನ ಬೇಕೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ ಎಂದು ಕೂಡ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ಅಷ್ಟು ಒಳ್ಳೆಯ ಮನುಷ್ಯರ ಮಧ್ಯೆ ಈ ಕಹಿ ಯಾಕೆ ಎಂದು ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್