ದಿನೇಶ್ ಕಾರ್ತಿಕ್ 
ಕ್ರಿಕೆಟ್

IPL 2024: ಚೆನ್ನೈ ವಿರುದ್ಧ ಪಂದ್ಯ ಸೋತ ಬೆನ್ನಲ್ಲೇ ನಿವೃತ್ತಿಯ ಸುಳಿವು ನೀಡಿದ RCB ಆಟಗಾರ

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 38 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಆದರೂ ಈ ಪಂದ್ಯದಲ್ಲಿ RCB ತಂಡ ಸೋತಿತ್ತು.

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 38 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಆದರೂ ಈ ಪಂದ್ಯದಲ್ಲಿ RCB ತಂಡ ಸೋತಿತ್ತು.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ವೇಳೆ ಕಾಮೆಂಟರಿ ಮಾಡುವುದರಲ್ಲಿ ನಿರತರಾಗಿದ್ದಾರೆ. ಈ ಅವಧಿಯಲ್ಲಿ ಅಭ್ಯಾಸಕ್ಕೆ ಸಮಯ ಕಂಡುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು ಎಂದು ಅವರು ಒಪ್ಪಿಕೊಂಡರು. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಬ್ಯಾಟ್ಸ್‌ಮನ್ ಕಾರ್ತಿಕ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 26 ಎಸೆತಗಳಲ್ಲಿ ಅಜೇಯ 38 ರನ್ ಗಳಿಸಿದರು. ಈ ಕಾರಣದಿಂದಾಗಿ ಅವರ ತಂಡವು 6 ವಿಕೆಟ್‌ಗೆ 173 ರನ್‌ಗಳ ಗೌರವಾನ್ವಿತ ಸ್ಕೋರ್ ಗಳಿಸುವಲ್ಲಿ ಯಶಸ್ವಿಯಾಗಿತ್ತು.

ಪಂದ್ಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ತಿಕ್, “ಕಾಮೆಂಟರಿ ಮಾಡುವಾಗ ಟೆಸ್ಟ್ ಪಂದ್ಯಗಳ ನಡುವೆ ಕ್ರಿಕೆಟ್ ಆಡಲು ಸಮಯವನ್ನು ಹುಡುಕುವುದು ತುಂಬಾ ಸವಾಲಿನ ಸಂಗತಿಯಾಗಿದೆ. ಸಿಕ್ಕ ಸಮಯದಲ್ಲಿ ಕಷ್ಟಪಟ್ಟು ದುಡಿಯುತ್ತಿದ್ದೆ. ಹಾಗಾಗಿ ಮೊದಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾದದ್ದು ಖುಷಿ ತಂದಿದೆ ಎಂದರು.

38ರ ಹರೆಯದ ಆಟಗಾರ ತಮ್ಮ ತಂಡ ಪ್ಲೇಆಫ್‌ಗೆ ತಲುಪಬೇಕು ಮತ್ತು ಚೆಪಾಕ್‌ನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡುವ ಅವಕಾಶ ಸಿಗುತ್ತದೆ ಎಂದು ಆಶಿಸಿದ್ದಾರೆ. ಚೆನ್ನೈನಲ್ಲಿ ಇಂದು ತಮ್ಮ ಕೊನೆಯ ಪಂದ್ಯವನ್ನು ಆಡಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ಅದನ್ನು ಸಮಯ ಮಾತ್ರ ಹೇಳುತ್ತದೆ. ಆದರೆ ನಾನು ಅದನ್ನು ನಿಜವಾಗಿಯೂ ಬಯಸುವುದಿಲ್ಲ. ಏಕೆಂದರೆ ಪ್ಲೇಆಫ್ ಪಂದ್ಯಗಳನ್ನು ಇಲ್ಲಿ ಆಡಲಾಗುತ್ತದೆ. ನಾನು ಮತ್ತೊಮ್ಮೆ ಚೆಪಕ್ ಕ್ರೀಡಾಂಗಣದಲ್ಲಿ ಆಡಬೇಕಾದರೆ ನಮ್ಮ ತಂಡ ಪ್ಲೇ ಆಫ್ ಗೆ ಬರಲಿ ಎಂದು ಆಶಿಸುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!