ಆರ್ ಸಿಬಿ ಬ್ಯಾಟಿಂಗ್ 
ಕ್ರಿಕೆಟ್

IPL 2024: ಕೊಹ್ಲಿ ಭರ್ಜರಿ ಬ್ಯಾಟಿಂಗ್, KKR ಗೆಲ್ಲಲು 183 ರನ್ ಗುರಿ ನೀಡಿದ RCB

ರನ್ ಮೆಷಿನ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 183 ರನ್ ಗಳ ಬೃಹತ್ ಗುರಿ ನೀಡಿದೆ.

ಬೆಂಗಳೂರು: ರನ್ ಮೆಷಿನ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 183 ರನ್ ಗಳ ಬೃಹತ್ ಗುರಿ ನೀಡಿದೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ತಂಡ, ವಿರಾಟ್ ಕೊಹ್ಲಿ (ಅಜೇಯ 83 ರನ್) ಭರ್ಜರಿ ಅರ್ಧಶತಕ, ಕ್ಯಾಮೆರಾನ್ ಗ್ರೀನ್ (33), ಗ್ಲೇನ್ ಮ್ಯಾಕ್ಸ್ ವೆಲ್ (28 ರನ್) ಮತ್ತು ದಿನೇಶ್ ಕಾರ್ತಿಕ್ (20 ರನ್) ಅಮೋಘ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು.

ಆರ್ ಸಿಬಿ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ 4 ಸಿಕ್ಸರ್, 4 ಬೌಂಡರಿಗಳ ನೆರವಿನಿಂದ ಅಜೇಯ 83ರನ್ ಭಾರಿಸಿದರೆ, ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ದಿನೇಶ್ ಕಾರ್ತಿಕ್ ಕೇವಲ 8 ಎಸೆತಗಳಲ್ಲಿ 3 ಸಿಕ್ಸರ್ ಗಳ ನೆರವಿನಿಂದ 20 ರನ್ ಪೇರಿಸಿ ತಂಡದ ಮೊತವನ್ನು ಹಿಗ್ಗಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಕ್ಯಾಮೆರಾನ್ ಗ್ರೀನ್ (33), ಗ್ಲೇನ್ ಮ್ಯಾಕ್ಸ್ ವೆಲ್ (28 ರನ್) ತಂಡಕ್ಕೆ ಒಂದಷ್ಟು ರನ್ ಗಳನ್ನು ತಂದುಕೊಟ್ಟರಾದರೂ ಅವರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲ್ಲಿಲ್ಲ. ನಾಯಕ ಮತ್ತು ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್ ಕೇವಲ 8 ರನ್ ಗಳಿಗೆ ನಿರ್ಗಮಿಸುವ ಮೂಲಕ ನಿರಾಶೆ ಮೂಡಿಸಿದರು. ರಜತ್ ಪಾಟೀದಾರ್ (3 ರನ್) ಮತ್ತು ಅನುಜ್ ರಾವತ್ (3 ರನ್) ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಆದರೆ ಅಂತಿಮ ಹಂತದಲ್ಲಿ ಪ್ರೇಕ್ಷಕರಿಗೆ ದಿನೇಶ್ ಕಾರ್ತಿಕ್ ಮತ್ತು ವಿರಾಟ್ ಕೊಹ್ಲಿ ರನ್ ಗಳ ರಸದೌತಣ ಉಣಬಡಿಸಿದರು. ದಿನೇಶ್ ಕಾರ್ತಿಕ್ ಕೇವಲ 8 ಎಸೆತಗಳಲ್ಲಿ 3 ಸಿಕ್ಸರ್ ಗಳ ನೆರವಿನಿಂದ 20 ರನ್ ಪೇರಿಸಿದರೆ, ಕೊಹ್ಲಿ ಕೂಡ ಸಿಕ್ಸರ್ ಬೌಂಡರಿಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಆ ಮೂಲಕ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 183 ರನ್ ಗಳ ಬೃಹತ್ ಗುರಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT