ಆರ್ ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಾಂದರ್ಭಿಕ ಚಿತ್ರ 
ಕ್ರಿಕೆಟ್

IPL 2024: ನಾಳೆ ಬೆಂಗಳೂರಿನಲ್ಲಿ ಆರ್ ಸಿಬಿ- ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಿರ್ಣಾಯಕ ಪಂದ್ಯ!

ಹಿಂದಿನ ಪಂದ್ಯದಲ್ಲಿ ನಿರ್ಣಾಯಕ ಗೆಲುವು ಸಾಧಿಸಿದ ಡೆಲ್ಲಿ ಕಾಪಿಟಲ್ಸ್ ತಂಡ ನಾಳೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಣಸಲಿದೆ. ನಿಧಾನಗತಿಯ ಓವರ್ ರೇಟ್ ನಿಂದಾಗಿ ರಿಷಭ್ ಪಂತ್ ಅಮಾನತುಗೊಂಡಿದ್ದು, ಅಕ್ಸರ್ ಪಟೇಲ್ ತಂಡವನ್ನು ಮುನ್ನಡೆಸಲಿದ್ದಾರೆ.

ಬೆಂಗಳೂರು: ಹಿಂದಿನ ಪಂದ್ಯದಲ್ಲಿ ನಿರ್ಣಾಯಕ ಗೆಲುವು ಸಾಧಿಸಿದ ಡೆಲ್ಲಿ ಕಾಪಿಟಲ್ಸ್ ತಂಡ ನಾಳೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಣಸಲಿದೆ. ನಿಧಾನಗತಿಯ ಓವರ್ ರೇಟ್ ನಿಂದಾಗಿ ರಿಷಭ್ ಪಂತ್ ಅಮಾನತುಗೊಂಡಿದ್ದು, ಅಕ್ಸರ್ ಪಟೇಲ್ ತಂಡವನ್ನು ಮುನ್ನಡೆಸಲಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ ತಂಡದ ಮುಖ್ಯ ಕೋಚ್ ರಿಕ್ಕಿ ಪಾಟಿಂಗ್, ಕಳೆದ ಕೆಲವು ಸೀಸನ್ ಗಳಿಗೆ ಉಪ ನಾಯಕರಾಗಿದ್ದ ಅಕ್ಸರ್ ಪಟೇಲ್, ಅನುಭವಿ ಐಪಿಎಲ್ ಆಟಗಾರರಾಗಿದ್ದಾರೆ. ಸಂವೇದನಾಶೀಲ ವ್ಯಕ್ತಿಯಾಗಿದ್ದು, ಆಟವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ಈ ಪಂದ್ಯದ ಬಗ್ಗೆ ಅವರು ಉತ್ಸುಕರಾಗಿದ್ದಾರೆ. ಬೌಲರ್ ಗಳೊಂದಿಗೆ ಇಂದು ಸಭೆ ಮಾಡಿದ್ದೇವೆ. ಇಂದು ರಾತ್ರಿ ಎಲ್ಲಾ ಆಟಗಾರರೊಂದಿಗೆ ಪಂದ್ಯದ ಯೋಜನೆ ಕುರಿತು ಮಾತುಕತೆ ನಡೆಸಲಿದ್ದು, ನಾಳಿನ ಪಂದ್ಯವನ್ನು ಎದುರಿಸಲು ಸಿದ್ದರಿದ್ದಾರೆ ಎಂದರು.

ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳಲ್ಲಿ 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಆದರೆ ಆರ್ ಸಿಬಿ ನಾಲ್ಕು ಪಂದ್ಯ ಗೆದಿದ್ದು, ನಾಳಿನ ಪಂದ್ಯ ಕಠಿಣ ಅಥವಾ ಸಮಬಲದ ಹೋರಾಟದಿಂದ ಕೂಡಿರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಿಕ್ಕಿ ಪಾಟಿಂಗ್, ಐಪಿಎಲ್ ನಲ್ಲಿ ಎಲ್ಲಾ ಪಂದ್ಯಗಳು ಕಠಿಣ ಆಟಗಳಾಗಿವೆ. ಎರಡು ವಾರದ ಹಿಂದೆ RCB ಅತ್ಯುತ್ತಮವಾಗಿ ಆಡಿದ ನಿದರ್ಶನಗಳಿಲ್ಲ. ಅದೇ ರೀತಿಯಲ್ಲಿ ನಾಳಿನ ಪಂದ್ಯ ಆಡಬಹುದು ಎಂದರು. ಕಳೆದ ಪಂದ್ಯದಲ್ಲಿ ಆಡದ ಡೇವಿಡ್ ವಾರ್ನಿರ್ ಆರ್ ಸಿಬಿ ವಿರುದ್ಧ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT