ಮಳೆಯಿಂದಾಗಿ ಒದೆಯಾದ ಮೈದಾನ 
ಕ್ರಿಕೆಟ್

IPL 2024: ಮಳೆಯಿಂದ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಗುಜರಾತ್ ಪ್ಲೇ ಆಫ್ ಕನಸು ಭಗ್ನ!

ಸೋಮವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೆಕೆಆರ್ ವಿರುದ್ದದ ಪಂದ್ಯ ಮಳೆಯಿಂದ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗುಜರಾತ್ ಟೈಟನ್ಸ್ ತಂಡ ಪ್ಲೇ ಆಫ್ ರೇಸ್ ನಿಂದ ಹೊರಬಿತ್ತು.

ಅಹಮದಾಬಾದ್‌: ಸೋಮವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೆಕೆಆರ್ ವಿರುದ್ದದ ಪಂದ್ಯ ಮಳೆಯಿಂದ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗುಜರಾತ್ ಟೈಟನ್ಸ್ ತಂಡ ಪ್ಲೇ ಆಫ್ ರೇಸ್ ನಿಂದ ಹೊರಬಿತ್ತು.

ಕಳೆದ ವರ್ಷದ ರನ್ನರ್ಸ್ ಅಪ್ ಮತ್ತು 2022 ರ ಚಾಂಪಿಯನ್ ಗುಜರಾತ್ ತಂಡ 13 ಪಂದ್ಯಗಳಿಂದ 11 ಅಂಕಗಳನ್ನು ಗಳಿಸುವ ಮೂಲಕ ಪ್ಲೇ-ಆಫ್ ರೇಸ್‌ನಿಂದ ಹೊರ ಬಿದ್ದಿತು. ಕೆಕೆಆರ್ 13 ಪಂದ್ಯಗಳಿಂದ 19 ಅಂಕಗಳೊಂದಿಗೆ ಕ್ವಾಲಿಫೈಯರ್ 1 ರಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ.

ಸೋವಾರ ನಿಗದಿತ ಸಮಯದಲ್ಲಿ ರಾತ್ರಿ 7 ಗಂಟೆಗೆ ಟಾಸ್ ಆಗಲಿಲ್ಲ. ಸ್ವಲ್ಪ ಸಮಯ ಕಳೆದಂತೆ ನಿರಂತರ ಮಿಂಚಿನಿಂದಾಗಿ ತುಂತುರು ಮಳೆಯು ಹೆಚ್ಚಾಯಿತು. ಆದರೆ, ಮತ್ತೆ ಮತ್ತೆ ಮಳೆ ಬರುತ್ತಿದ್ದರಿಂದ ಕೊನೆಗೆ ರಾತ್ರಿ 10-56 ರ ಸುಮಾರಿಗೆ ಪಂದ್ಯವನ್ನು ರದ್ದುಗೊಳಿಸಿ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು. ಒಟ್ಟು 13 ಪಂದ್ಯಗಳನ್ನಾಡಿ, 5 ಪಂದ್ಯ ಗೆದ್ದು 7ರಲ್ಲಿ ಸೋತಿರುವ ಗುಜರಾತ್ ಒಟ್ಟು 11 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮೇ 16 ರಂದು ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ದ ಕೊನೆಯ ಲೀಗ್ ಪಂದ್ಯವನ್ನು ಗಿಲ್ ಬಳಗ ಆಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT