ಕೋಲ್ಕತಾ vs ರಾಜಸ್ತಾನ ಪಂದ್ಯ ಮಳೆಗಾಹುತಿ 
ಕ್ರಿಕೆಟ್

IPL 2024: ಕೋಲ್ಕತಾ vs ರಾಜಸ್ತಾನ ಪಂದ್ಯ ಮಳೆಗಾಹುತಿ; ಎಲಿಮಿನೇಟರ್ ನಲ್ಲಿ RCB vs RR ಮುಖಾಮುಖಿ!

17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು, ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳ ಪಂದ್ಯ ಒಂದೂ ಎಸೆತ ಕಾಣದೇ ರದ್ದಾಗಿದೆ.

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು, ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳ ಪಂದ್ಯ ಒಂದೂ ಎಸೆತ ಕಾಣದೇ ರದ್ದಾಗಿದೆ.

ಮಳೆಯಿಂದಾಗಿ ಪಂದ್ಯ ಒಂದೂ ಎಸೆತ ಕಾಣದೆ ರದ್ದಾದ ಹಿನ್ನಲೆಯಲ್ಲಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದ್ದು, ಅದರಂತೆ ಪಟ್ಟಿಯಲ್ಲಿ ಕೋಲ್ಕತಾ 20 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಇನ್ನು ಇಂದಿನ ಗೆಲುವಿನ ಮೂಲಕ ತನ್ನ ಅಂಕ ಗಳಿಕೆಯನ್ನು 17ಕ್ಕೇರಿಸಿಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ 2ನೇ ಸ್ಥಾನಕ್ಕೇರಿದ್ದು, 2ನೇ ಸ್ಥಾನದಲ್ಲಿದ್ದ ರಾಜಸ್ಥಾನ ಮೂರನೇ ಸ್ಥಾನಕ್ಕೆ ಕುಸಿದಿದೆ.

ನಿರಂತರವಾಗಿ ಸುರಿದ ಮಳೆಯಿಂದ ಪಂದ್ಯ ರದ್ದು

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು. ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು.

ಎಲಿಮಿನೇಟರ್ ನಲ್ಲಿ RCB vs RR ಮುಖಾಮುಖಿ!

ಇದೀಗ ರಾಜಸ್ಥಾನ ಮೂರನೇ ಸ್ಥಾನಕ್ಕೆ ಕುಸಿದಿರುವ ಹಿನ್ನಲೆಯಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಗೆದ್ದು ಮುಂದಿನ ಹಂತಕ್ಕೇರುವ ವಿಶ್ವಾಸದಲ್ಲಿದೆ.

ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT