ಸ್ಟೇಡಿಯಂನಲ್ಲಿ ಭದ್ರತಾ ಸಿಬ್ಬಂದಿ ನಿಯೋಜನೆ 
ಕ್ರಿಕೆಟ್

“ಅಹಮದಾಬಾದ್‌ನಲ್ಲಿ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ: 3,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಎಸ್ ಉಗ್ರರ ಬಂಧನದ ನಂತರ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಎಸ್ ಉಗ್ರರ ಬಂಧನದ ನಂತರ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ನಡುವಿನ ಕಾಳಗ ಸಾವಿರಾರು ಅಭಿಮಾನಿಗಳನ್ನು ಆಕರ್ಷಿಸುವ ನಿರೀಕ್ಷೆಯಿದ್ದು, ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಕ್ರಮಗಳನ್ನು ಪೊಲೀಸರು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು. ಐದು ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಮತ್ತು 10 ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಸೇರಿದಂತೆ 3,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಹೆಚ್ಚುವರಿಯಾಗಿ, 800 ಕ್ಕೂ ಹೆಚ್ಚು ಖಾಸಗಿ ಭದ್ರತಾ ಸಿಬ್ಬಂದಿ ಕ್ರೀಡಾಂಗಣದ ಆವರಣದಲ್ಲಿ ಇರುತ್ತಾರೆ. ಪಂದ್ಯದ ವೇಳೆ ಯಾವುದೇ ಘಟನೆಗಳನ್ನು ತಡೆಗಟ್ಟಲು ಪೊಲೀಸ್ ಬೆಂಗಾವಲು ಪಡೆಯನ್ನು ಕ್ರೀಡಾಂಗಣದಲ್ಲಿ ಇರಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡರು.

ಮೇ 20 ರಂದು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ IS ಭಯೋತ್ಪಾದಕರ ಬಂಧನಕ್ಕೆ ಪ್ರತಿಕ್ರಿಯೆಯಾಗಿ ಹೆಚ್ಚಿನ ಭದ್ರತೆಯನ್ನು ಮಾಡಲಾಗಿದೆ. ಈ ವ್ಯಕ್ತಿಗಳನ್ನು ಶ್ರೀಲಂಕಾದ ಪ್ರಜೆಗಳೆಂದು ಗುರುತಿಸಲಾಗಿದೆ. ಐಪಿಎಲ್ ಟೂರ್ನಿ ಸಂದರ್ಭದಲ್ಲಿ ಅವರು ಯಾವುದೇ ಯೋಜನೆ ಕಾರ್ಯಗತಗೊಳಿಸುವ ಮೊದಲು ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಂಕಿತರು ಶ್ರೀಲಂಕಾದಿಂದ ಚೆನ್ನೈಗೆ ಮತ್ತು ನಂತರ ಅಹಮದಾಬಾದ್‌ಗೆ ಪ್ರಯಾಣಿಸಿದ್ದಾರೆ ಎಂದು ತಿಳಿದುಬಂದಿದೆ. ಅವರ ಬಂಧನವು ಇಂದಿನ ಪಂದ್ಯಕ್ಕೆ ಹಾಜರಾಗುವ ಅಭಿಮಾನಿಗಳು ಮತ್ತು ಆಟಗಾರರನ್ನು ರಕ್ಷಿಸಲು ಹೆಚ್ಚಿನ ಜಾಗರೂಕತೆ ಮತ್ತು ಸಮಗ್ರ ಭದ್ರತಾ ವ್ಯವಸ್ಥೆಗಳಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT