ಭುವನೇಶ್ವರ್ ಕುಮಾರ್ 
ಕ್ರಿಕೆಟ್

IPL 2024: ನಾಳೆ ಕೆಕೆಆರ್ ವಿರುದ್ಧ ಫೈನಲ್ ಪಂದ್ಯ: ಖಂಡಿತವಾಗಿಯೂ ಟ್ರೋಫಿ ಗೆಲ್ಲುತ್ತೇವೆ- ಭುವನೇಶ್ವರ್ ಕುಮಾರ್

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಕೆಕೆಆರ್ ವಿರುದ್ಧದ ಫೈನಲ್ ಹಣಾಹಣಿಗೆ ಸಜ್ಜಾಗಿರುವ ಸನ್‌ರೈಸರ್ಸ್ ಹೈದರಾಬಾದ್ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ನವದೆಹಲಿ: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಕೆಕೆಆರ್ ವಿರುದ್ಧದ ಫೈನಲ್ ಹಣಾಹಣಿಗೆ ಸಜ್ಜಾಗಿರುವ ಸನ್‌ರೈಸರ್ಸ್ ಹೈದರಾಬಾದ್ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಶುಕ್ರವಾರ ನಡೆದ ಕ್ವಾಲಿಫೈಯರ್‌ 2ರ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ 36 ರನ್‌ಗಳಿಂದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಸೋಲಿಸಿ ಫೈನಲ್‌ ತಲುಪಿತು. ಆದಾಗ್ಯೂ, ಅವರು ಕ್ವಾಲಿಫೈಯರ್ 1ರ ಪಂದ್ಯದಲ್ಲಿ ಕೆಕೆಆರ್ ವಿರುದ್ಧ 8 ವಿಕೆಟ್ ಗಳಿಂದ ಸೋತಿತ್ತು. ಆರು ಸೀಸನ್ ಗಳಲ್ಲಿ ಇದೇ ಮೊದಲ ಬಾರಿಗೆ ಹೈದ್ರಾಬಾದ್ ಫೈನಲ್ ಪಂದ್ಯವನ್ನಾಡಲಿದೆ. 2018ರಲ್ಲಿ ಫೈನಲ್ ತಲುಪಿ ಚೆನ್ನೈ ವಿರುದ್ಧ ಸೋತಿದ್ದರು. ಕಳೆದ ಮೂರು ಸೀಸನ್ ಗಳಲ್ಲಿ ಅವರು ಪ್ಲೇ ಆಫ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ.

ಈ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವುದಾಗಿ ಭುವನೇಶ್ವರ್ ಕುಮಾರ್ ಹೇಳಿದ್ದಾರೆ. "ಕಳೆದ ಮೂರು ಸೀಸನ್‌ಗಳಲ್ಲಿ ನಾವು ಪ್ಲೇಆಫ್‌ನಲ್ಲಿ ಆಡದ ಕಾರಣ ಇದು ವಿಭಿನ್ನ ಭಾವನೆಯಾಗಿದೆ. ಇದು ಒಂದು ಉತ್ತಮ ಭಾವನೆಯಾಗಿದೆ. ಈ ಆವೃತ್ತಿಯಲ್ಲಿ ನಾವು ಆಡುತ್ತಿರುವ ಹಾದಿ ಗಮನಿಸಿದರೆ ನಾವು ಫೈನಲ್‌ಗೆ ತಲುಪುತ್ತೇವೆ ಎಂಬ ಭಾವನೆಯನ್ನು ಹೊಂದಿದ್ದೇವೆ. ಪಂದ್ಯದ ಸನ್ನಿವೇಶದಲ್ಲಿ ಪ್ರತಿಯೊಬ್ಬರೂ ನೀಡಿರುವ ಕೊಡುಗೆ ಬಗ್ಗೆ ಎಲ್ಲರಿಗೂ ಸಂತೋಷವಾಗಿದೆ, ಇದು ಅದ್ಭುತ ತಂಡದ ಕೆಲಸವಾಗಿದೆ. ಐಪಿಎಲ್ ಪ್ರಶಸ್ತಿ ಗೆಲ್ಲುವುದು ನಿಜವಾಗಿಯೂ ವಿಶೇಷವಾಗಿದೆ ಮತ್ತು ಈಗ ನಾವು ಫೈನಲ್‌ಗೆ ತಲುಪಿದ್ದು, ಖಂಡಿತವಾಗಿಯೂ ಟ್ರೋಫಿ ಗೆಲ್ಲುತ್ತೇವೆ ಎಂದು ಭುವನೇಶ್ವರ್ ಕುಮಾರ್ ಜಿಯೋಸಿನೆಮಾಗೆ ತಿಳಿಸಿದರು.

ರಾಜಸ್ಥಾನ ವಿರುದ್ಧ 37 ರನ್‌ಗಳ ಕೊಡುಗೆ ನೀಡಿದ ರಾಹುಲ್ ತ್ರಿಪಾಠಿ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ತಿಳಿಸಿದರು. ಅವರು ಈ ಆವೃತ್ತಿಯಲ್ಲಿ ಕೇವಲ ಐದು ಪಂದ್ಯಗಳನ್ನು ಆಡಿದ್ದು, ಒಂದು ಅರ್ಧಶತಕ ಸೇರಿದಂತೆ 156 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT