ಭುವನೇಶ್ವರ್ ಕುಮಾರ್ 
ಕ್ರಿಕೆಟ್

IPL 2024: ನಾಳೆ ಕೆಕೆಆರ್ ವಿರುದ್ಧ ಫೈನಲ್ ಪಂದ್ಯ: ಖಂಡಿತವಾಗಿಯೂ ಟ್ರೋಫಿ ಗೆಲ್ಲುತ್ತೇವೆ- ಭುವನೇಶ್ವರ್ ಕುಮಾರ್

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಕೆಕೆಆರ್ ವಿರುದ್ಧದ ಫೈನಲ್ ಹಣಾಹಣಿಗೆ ಸಜ್ಜಾಗಿರುವ ಸನ್‌ರೈಸರ್ಸ್ ಹೈದರಾಬಾದ್ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ನವದೆಹಲಿ: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಕೆಕೆಆರ್ ವಿರುದ್ಧದ ಫೈನಲ್ ಹಣಾಹಣಿಗೆ ಸಜ್ಜಾಗಿರುವ ಸನ್‌ರೈಸರ್ಸ್ ಹೈದರಾಬಾದ್ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಶುಕ್ರವಾರ ನಡೆದ ಕ್ವಾಲಿಫೈಯರ್‌ 2ರ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ 36 ರನ್‌ಗಳಿಂದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಸೋಲಿಸಿ ಫೈನಲ್‌ ತಲುಪಿತು. ಆದಾಗ್ಯೂ, ಅವರು ಕ್ವಾಲಿಫೈಯರ್ 1ರ ಪಂದ್ಯದಲ್ಲಿ ಕೆಕೆಆರ್ ವಿರುದ್ಧ 8 ವಿಕೆಟ್ ಗಳಿಂದ ಸೋತಿತ್ತು. ಆರು ಸೀಸನ್ ಗಳಲ್ಲಿ ಇದೇ ಮೊದಲ ಬಾರಿಗೆ ಹೈದ್ರಾಬಾದ್ ಫೈನಲ್ ಪಂದ್ಯವನ್ನಾಡಲಿದೆ. 2018ರಲ್ಲಿ ಫೈನಲ್ ತಲುಪಿ ಚೆನ್ನೈ ವಿರುದ್ಧ ಸೋತಿದ್ದರು. ಕಳೆದ ಮೂರು ಸೀಸನ್ ಗಳಲ್ಲಿ ಅವರು ಪ್ಲೇ ಆಫ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ.

ಈ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವುದಾಗಿ ಭುವನೇಶ್ವರ್ ಕುಮಾರ್ ಹೇಳಿದ್ದಾರೆ. "ಕಳೆದ ಮೂರು ಸೀಸನ್‌ಗಳಲ್ಲಿ ನಾವು ಪ್ಲೇಆಫ್‌ನಲ್ಲಿ ಆಡದ ಕಾರಣ ಇದು ವಿಭಿನ್ನ ಭಾವನೆಯಾಗಿದೆ. ಇದು ಒಂದು ಉತ್ತಮ ಭಾವನೆಯಾಗಿದೆ. ಈ ಆವೃತ್ತಿಯಲ್ಲಿ ನಾವು ಆಡುತ್ತಿರುವ ಹಾದಿ ಗಮನಿಸಿದರೆ ನಾವು ಫೈನಲ್‌ಗೆ ತಲುಪುತ್ತೇವೆ ಎಂಬ ಭಾವನೆಯನ್ನು ಹೊಂದಿದ್ದೇವೆ. ಪಂದ್ಯದ ಸನ್ನಿವೇಶದಲ್ಲಿ ಪ್ರತಿಯೊಬ್ಬರೂ ನೀಡಿರುವ ಕೊಡುಗೆ ಬಗ್ಗೆ ಎಲ್ಲರಿಗೂ ಸಂತೋಷವಾಗಿದೆ, ಇದು ಅದ್ಭುತ ತಂಡದ ಕೆಲಸವಾಗಿದೆ. ಐಪಿಎಲ್ ಪ್ರಶಸ್ತಿ ಗೆಲ್ಲುವುದು ನಿಜವಾಗಿಯೂ ವಿಶೇಷವಾಗಿದೆ ಮತ್ತು ಈಗ ನಾವು ಫೈನಲ್‌ಗೆ ತಲುಪಿದ್ದು, ಖಂಡಿತವಾಗಿಯೂ ಟ್ರೋಫಿ ಗೆಲ್ಲುತ್ತೇವೆ ಎಂದು ಭುವನೇಶ್ವರ್ ಕುಮಾರ್ ಜಿಯೋಸಿನೆಮಾಗೆ ತಿಳಿಸಿದರು.

ರಾಜಸ್ಥಾನ ವಿರುದ್ಧ 37 ರನ್‌ಗಳ ಕೊಡುಗೆ ನೀಡಿದ ರಾಹುಲ್ ತ್ರಿಪಾಠಿ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ತಿಳಿಸಿದರು. ಅವರು ಈ ಆವೃತ್ತಿಯಲ್ಲಿ ಕೇವಲ ಐದು ಪಂದ್ಯಗಳನ್ನು ಆಡಿದ್ದು, ಒಂದು ಅರ್ಧಶತಕ ಸೇರಿದಂತೆ 156 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT