ವಿರಾಟ್ ಕೊಹ್ಲಿ-ಸೈಮನ್ ಡೌಲ್ 
ಕ್ರಿಕೆಟ್

Virat Kohli ಕಂಡರೆ ಉದ್ಧಟತನವೇಕೆ? ಕೊಹ್ಲಿಯನ್ನು ಟೀಕಿಸಿದ್ದ ಸೈಮನ್ ಡೌಲ್‌ಗೆ ಜೀವ ಬೆದರಿಕೆ!

ಐಪಿಎಲ್ 2024ರಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ RCB ತಂಡದ ಆಟಗಾರ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್‌ ಗಳಿಸಿದ್ದಾರೆ. ಆದರೆ ಸೀಸನ್ ಉದ್ದಕ್ಕೂ, ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಟೀಕೆಗಳು ಎದುರಾಯಿತು.

ಐಪಿಎಲ್ 2024ರಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ RCB ತಂಡದ ಆಟಗಾರ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್‌ ಗಳಿಸಿದ್ದಾರೆ. ಆದರೆ ಸೀಸನ್ ಉದ್ದಕ್ಕೂ, ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಟೀಕೆಗಳು ಎದುರಾಯಿತು. ಇದರಲ್ಲಿ ಸುನಿಲ್ ಗವಾಸ್ಕರ್ ಅವರಂತಹ ದಿಗ್ಗಜ ಆಟಗಾರರೂ ಇದ್ದಾರೆ. ಅಲ್ಲದೆ, ಮಾಜಿ ನ್ಯೂಜಿಲೆಂಡ್ ವೇಗದ ಬೌಲರ್ ಮತ್ತು ವೀಕ್ಷಕ ವಿವರಣೆಗಾರ ಸೈಮನ್ ಡೌಲ್ ಕೂಡ ವಿರಾಟ್ ಕೊಹ್ಲಿಯ ಸ್ಟ್ರೈಕ್ ರೇಟ್ ಅನ್ನು ಟೀಕಿಸಿದ್ದರು. ಇದೀಗ ಅವರು ಆಘಾತಕಾರಿ ಸಂಗತಿಯೊಂದನ್ನು ಬಹಿರಂಗಪಡಿಸಿದ್ದಾರೆ.

ನ್ಯೂಜಿಲೆಂಡ್‌ನ ಮಾಜಿ ವೇಗದ ಬೌಲರ್ ಮತ್ತು ಕಾಮೆಂಟೇಟರ್ ಸೈಮನ್ ಡೌಲ್ ಅವರು ವಿರಾಟ್ ಕೊಹ್ಲಿಯ ಸ್ಟ್ರೈಕ್ ರೇಟ್ ಅನ್ನು ಟೀಕಿಸಿದ ನಂತರ ಅವರು ಪಡೆದ ಪ್ರತಿಕ್ರಿಯೆಗಳ ಬಗ್ಗೆ ಬಹಿರಂಗಪಡಿಸಿದ್ದಾರೆ. ಕೊಹ್ಲಿ ಬಗ್ಗೆ ಹೇಳಲು ಸಾವಿರಾರು ಒಳ್ಳೆಯ ಸಂಗತಿಗಳು ಇದ್ದರೂ, ತಮ್ಮ ಕೆಲವು ಟೀಕೆಗಳಿಗೆ "ಜೀವ ಬೆದರಿಕೆ" ಬಂದಿವೆ ಎಂದು ಡೌಲ್ ಹೇಳಿದರು.

ಕ್ರಿಕ್‌ಬಝ್‌ನೊಂದಿಗೆ ಮಾತನಾಡುತ್ತಾ, ಡೌಲ್, ನಾನು ಒಬ್ಬ ಶ್ರೇಷ್ಠ ಆಟಗಾರನನ್ನು ನೋಡುತ್ತಿದ್ದೇನೆ. ಮೊದಲಿಗಿಂತ ಹೆಚ್ಚು ಪ್ರಾಬಲ್ಯ ಸಾಧಿಸಬೇಕಾದ ಆಟಗಾರನನ್ನು ನಾನು ನೋಡುತ್ತಿದ್ದೇನೆ ಎಂದರು. ವಿರಾಟ್ ಕೊಹ್ಲಿ ಬಗ್ಗೆ ನಾನು ಒಂದು ಮಿಲಿಯನ್ ಒಳ್ಳೆಯ ಮಾತುಗಳನ್ನು ಹೇಳಿದ್ದೇನೆ. ಆದರೆ ನಾನು ಎಂದಿಗೂ ಒಂದೇ ಒಂದು ಋಣಾತ್ಮಕ ವಿಷಯವನ್ನು ಹೇಳಿಲ್ಲ ಅಥವಾ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿಲ್ಲ. ಹೀಗಿದ್ದರೂ ನನಗೆ ಕೊಲೆ ಬೆದರಿಕೆಗಳು ಬರುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ಐಪಿಎಲ್ 2024ರಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನ

ವಿರಾಟ್ ಕೊಹ್ಲಿ ಐಪಿಎಲ್ 2024 ರಲ್ಲಿ ಆರೆಂಜ್ ಕ್ಯಾಪ್‌ ಗೆದ್ದಿದ್ದಾರೆ. ಈ ಋತುವಿನಲ್ಲಿ ಕೊಹ್ಲಿ 15 ಪಂದ್ಯಗಳನ್ನು ಆಡಿದ್ದಾರೆ. ಈ 15 ಪಂದ್ಯಗಳಲ್ಲಿ ಅವರು 154.70 ಸ್ಟ್ರೈಕ್ ರೇಟ್‌ನಲ್ಲಿ 741 ರನ್ ಗಳಿಸಿದ್ದಾರೆ. ಇದರಲ್ಲಿ ಐದು ಅರ್ಧ ಶತಕ ಮತ್ತು ಒಂದು ಶತಕ ಸೇರಿದೆ. ಈ ಋತುವಿನಲ್ಲಿ ಅವರ ಐಪಿಎಲ್ ವೃತ್ತಿಜೀವನದ ಅತ್ಯುತ್ತಮ ಸ್ಕೋರ್ ಅಜೇಯ 113 ರನ್. ವಿರಾಟ್ ಕೊಹ್ಲಿ ಐಪಿಎಲ್ 2024 ರಲ್ಲಿ 62 ಬೌಂಡರಿ ಮತ್ತು 38 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT