ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2025: ಹರಾಜಿಗೂ ಮೊದಲೇ ಅಭಿಮಾನಿಗಳಿಗೆ RCB ಫ್ರಾಂಚೈಸಿ ಶಾಕ್; Virat Kohli ಗೆ ನಾಯಕತ್ವದ ಕುರಿತು ಮಹತ್ವದ ಹೇಳಿಕೆ!

ಈ ಹಿಂದೆ ತಂಡದ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್ ರನ್ನೇ ತಂಡದಿಂದ ಕೈಬಿಡಲಾಗಿದ್ದು, ಇದೀಗ ಆರ್ ಸಿಬಿ ನಾಯಕನ ಸ್ಥಾನ ಖಾಲಿಯಾಗಿದೆ.

ಬೆಂಗಳೂರು: ಐಪಿಎಲ್ 2025ರ ಆಟಗಾರರ ಹರಾಜು ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕರು ಆರ್ ಸಿಬಿ ಅಭಿಮಾನಿಗಳಿಗೆ ಬಿಕ್ ಶಾಕ್ ನೀಡಿದ್ದಾರೆ.

ಈ ಹಿಂದೆ ತಂಡದ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್ ರನ್ನೇ ತಂಡದಿಂದ ಕೈಬಿಡಲಾಗಿದ್ದು, ಇದೀಗ ಆರ್ ಸಿಬಿ ನಾಯಕನ ಸ್ಥಾನ ಖಾಲಿಯಾಗಿದೆ. ಹೀಗಾಗಿ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನೇ ಮತ್ತೆ ಆರ್ ಸಿಬಿ ತಂಡದ ನಾಯಕನಾಗಿ ಮಾಡುತ್ತಾರೆ ಎಂದು ಲೆಕ್ಕಾಚಾರ ಹಾಕಿದ್ದರು.

ಆದರೆ ಇದೀಗ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರೆರಚಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್, ಈ ವಿಷಯದಲ್ಲಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ವದಂತಿಗೇನು ಕಾರಣ?

ಆರ್ ಸಿಬಿಯ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಅವರು 2022 ರಿಂದ 2024ರ ವರೆಗೆ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದರು. ಎರಡು ಬಾರಿ ಆರ್ ಸಿಬಿ ತಂಡ ಪ್ಲೇ ಆಫ್‌ ಹಂತ ತಲುಪಿದ್ದರೂ, ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿತ್ತು. ಇದರ ನಡುವೆಯೇ ಈ ಬಾರಿ ಆರ್‌ಸಿಬಿ ರಿಟೇನ್‌ ಆಟಗಾರರ ಪಟ್ಟಿಯಿಂದ ಡುಪ್ಲೆಸಿ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

ಈ ಬೆಳವಣಿಗೆ ಬಳಿಕ ಮತ್ತೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ತಂಡದ ಮ್ಯಾನೇಜ್‌ಮೆಂಟ್ ನಾಯಕತ್ವದ ಬದಲಾವಣೆಯ ಬಗ್ಗೆ ಈಗಾಗಲೇ ಚರ್ಚಿಸಿದೆ. ನಾಯಕತ್ವದ ಸ್ಥಾನ ಅಲಂಕರಿಸಲು ಕೊಹ್ಲಿ ಉತ್ಸುಕರಾಗಿದ್ದಾರೆ ಎಂಬ ವದಂತಿ ಹರಿದಾಡಿತ್ತು.

ಇದೀಗ ಎಲ್ಲ ವದಂತಿಗಳಿಗೆ ಆರ್ ಸಿಬಿ ತಂಡ ತೆರೆ ಎಳೆದಿದೆ.

ಅಂದಹಾಗೆ ವಿರಾಟ್ ಕೊಹ್ಲಿ ಈ ಹಿಂದೆ 2013 ರಿಂದ 2021 ರವರೆಗೆ ಆರ್‌ಸಿಬಿ ನಾಯಕತ್ವ ವಹಿಸಿದ್ದರು. ತಂಡವನ್ನು ನಾಲ್ಕು ಬಾರಿ ಪ್ಲೇ ಆಫ್‌ಗೆ ತಲುಪಿಸುವಲ್ಲಿ ಶ್ರಮಿಸಿದ್ದರು. ಇದೀಗ 18ನೇ ಆವೃತ್ತಿಗೂ ಕೊಹ್ಲಿ ಆರ್‌ಸಿಬಿ ತಂಡವನ್ನೇ ಪ್ರತಿನಿಧಿಸಿದ್ದಾರೆ. ಮುಂದಿನ ಐಪಿಎಲ್‌ಗೆ ಕೊಹ್ಲಿಯನ್ನು ಫ್ರಾಂಚೈಸಿ 21 ಕೋಟಿ ರೂ.ಗಳಿಗೆ ಏರಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT