ಕೆಎಲ್ ರಾಹುಲ್ 
ಕ್ರಿಕೆಟ್

KL Rahul ಗೆ ಬ್ಯಾಟಿಂಗ್ ಮರೆತೋಯ್ತಾ? ಬೌಲ್ಡ್ ಆಗಿ ಕಕ್ಕಾಬಿಕ್ಕಿಯಾಗಿ ನಿಂತ ಆಟಗಾರ, ವಿಡಿಯೋ ವೈರಲ್!

ಕೆಎಲ್ ರಾಹುಲ್ ಅವರ ಫ್ಲಾಪ್ ಶೋ ಮುಂದುವರೆದಿದೆ. ಮೊದಲ ಇನ್ನಿಂಗ್ಸ್ ನಂತರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲೂ ದಯನೀಯವಾಗಿ ವಿಫಲರಾಗಿದ್ದಾರೆ. ಅವರ ನಿರಾಶಾದಾಯಕ ಪ್ರದರ್ಶನವು ಭಾರತ ಎ ಜೊತೆಗೆ ಟೀಂ ಇಂಡಿಯಾದ ನಿರ್ವಹಣೆಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಭಾರತ ಎ ಮತ್ತು ಆಸ್ಟ್ರೇಲಿಯಾ ಎ ನಡುವಿನ ಎರಡು ಅನಧಿಕೃತ ಟೆಸ್ಟ್ ಪಂದ್ಯಗಳ ಸರಣಿಯ ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದೆ. ಮುಂಬರುವ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಗಮನದಲ್ಲಿಟ್ಟುಕೊಂಡು ಸರಣಿಯ ಎರಡನೇ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಧ್ರುವ್ ಜುರೆಲ್ ಅವರಿಗೆ ಅವಕಾಶ ನೀಡಲಾಗಿದೆ.

ಧ್ರುವ್ ಜುರೆಲ್ ಮೊದಲ ಇನ್ನಿಂಗ್ಸ್‌ನಲ್ಲಿ 80 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾದ ಪರಿಸ್ಥಿತಿಗಳಿಗೆ ಹೊಂದಿಕೊಂಡಿದ್ದಾರೆ. ಆದರೆ ಕೆಎಲ್ ರಾಹುಲ್ ಅವರ ಫ್ಲಾಪ್ ಶೋ ಮುಂದುವರೆದಿದೆ. ಮೊದಲ ಇನ್ನಿಂಗ್ಸ್ ನಂತರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲೂ ದಯನೀಯವಾಗಿ ವಿಫಲರಾಗಿದ್ದಾರೆ. ಅವರ ನಿರಾಶಾದಾಯಕ ಪ್ರದರ್ಶನವು ಭಾರತ ಎ ಜೊತೆಗೆ ಟೀಂ ಇಂಡಿಯಾದ ನಿರ್ವಹಣೆಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಆಸ್ಟ್ರೇಲಿಯಾ ಎ ವಿರುದ್ಧದ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅತ್ಯಂತ ಕಳಪೆಯಾಗಿ ಔಟಾದರು. ಇವರನ್ನು ನೋಡಿದರೆ ಆಸ್ಟ್ರೇಲಿಯಾ ತಲುಪಿದ ನಂತರ ಅವರ ಫಾರ್ಮ್ ಜೊತೆಗೆ ಆತ್ಮವಿಶ್ವಾಸವೂ ಕಡಿಮೆಯಾಗಿದೆ ಎಂಬುದು ಕಾಣುತ್ತಿದೆ. ಕೆಎಲ್ ರಾಹುಲ್ ಅವರು ಸ್ಪಿನ್ನರ್ ರೊಚ್ಚಿಚೋಲಿ ಅವರ ಚೆಂಡನ್ನು ಲೆಗ್ ಸೈಡ್‌ನಲ್ಲಿ ಹೊಡೆಯಲು ಬಯಸಿದ್ದರು. ಆದರೆ ಅವರಿಗೆ ಚೆಂಡಿನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಚೆಂಡು ಅವನ ಕಾಲುಗಳ ನಡುವೆ ಹಾದು ಹೋಗಿ ವಿಕೆಟ್‌ಗೆ ಬಡಿಯಿತು. ಒಬ್ಬ ಬ್ಯಾಟ್ಸ್‌ಮನ್ ಈ ರೀತಿ ಔಟಾಗುವುದನ್ನು ನೀವು ಬಹಳ ಅಪರೂಪವಾಗಿ ನೋಡಿರಬಹುದು.

ಇನ್ನು ಪಂದ್ಯದ ಬಗ್ಗೆ ಮಾತನಾಡುವುದಾದರೆ, ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ ಕೇವಲ 161 ರನ್ ಗಳಿಸಿತ್ತು. ಈ 161 ರನ್‌ಗಳಲ್ಲಿ 80 ಧ್ರುವ್ ಜುರೆಲ್ ಅವರದ್ದಾಗಿತ್ತು. ಜುರೆಲ್ ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್ ಮೊದಲ ಇನ್ನಿಂಗ್ಸ್‌ನಲ್ಲಿ 30 ರನ್‌ಗಳ ಗಡಿಯನ್ನು ಮುಟ್ಟಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 223 ರನ್ ಗಳಿಸಿ 62 ರನ್‌ಗಳ ಮುನ್ನಡೆ ಸಾಧಿಸಿದೆ. ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಈ ಮುನ್ನಡೆಯನ್ನು ತೆಗೆದುಹಾಕುವಲ್ಲಿ ಯಶಸ್ವಿಯಾಯಿತು. ಆದರೆ 73 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT