ಅಲ್ಜಾರಿ ಜೋಸೆಫ್ Associated Press
ಕ್ರಿಕೆಟ್

ಮೈದಾನದಲ್ಲಿ ನಾಯಕನೊಂದಿಗೆ ಜಗಳ: ಮುಂದಿನ 2 ಪಂದ್ಯಗಳಿಗೆ ಅಲ್ಜಾರಿ ಜೋಸೆಫ್ ಅಮಾನತು, ವಿಡಿಯೋ ನೋಡಿ!

ಈ ಪಂದ್ಯದ ವೇಳೆ ಜೋಸೆಫ್ ಫೀಲ್ಡಿಂಗ್ ಬಗ್ಗೆ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದು ಅಲ್ಲದೆ ಸ್ವಲ್ಪ ಸಮಯದಲ್ಲೇ ಮೈದಾನದಿಂದ ನಿರ್ಗಮಿಸಿದರು.

ಬ್ರಿಡ್ಜ್‌ಟೌನ್: ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ವಿಚಾರಕ್ಕೆ ನಾಯಕ ಶಾಯ್ ಹೋಪ್ ಜೊತೆ ವಾಗ್ವಾದ ಮತ್ತು ಅಸಭ್ಯ ನಡವಳಿಕೆಯಿಂದಾಗಿ ಕ್ರಿಕೆಟ್ ವೆಸ್ಟ್ ಇಂಡೀಸ್ ವೇಗದ ಬೌಲರ್ ಅಲ್ಜಾರಿ ಜೋಸೆಫ್ ಅವರನ್ನು ಎರಡು ಪಂದ್ಯಗಳಿಗೆ ಅಮಾನತುಗೊಳಿಸಿದೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯ ನಿರ್ದೇಶಕ ಮೈಲ್ಸ್ ಬಾಸ್ಕೊಂಬೆ, ಅಲ್ಜಾರಿ ಅವರ ನಡವಳಿಕೆಯು ಕ್ರಿಕೆಟ್ ವೆಸ್ಟ್ ಇಂಡೀಸ್ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಈ ರೀತಿಯ ನಡವಳಿಕೆಯನ್ನು ನಿರ್ಲಕ್ಷಿಸಲಾಗುವುದಿಲ್ಲ. ಪರಿಸ್ಥಿತಿಯ ಗಂಭೀರತೆಯನ್ನು ಸಂಪೂರ್ಣವಾಗಿ ಒಪ್ಪಿಕೊಂಡಿದ್ದರಿಂದ ನಾವು ಕ್ರಮ ಕೈಗೊಂಡಿದ್ದೇವೆ. ಅಲ್ಜಾರಿ ಕೂಡ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಕ್ಯಾಪ್ಟನ್ ಹೋಪ್ ಮತ್ತು ಕ್ರಿಕೆಟ್ ವೆಸ್ಟ್ ಇಂಡೀಸ್‌ಗೆ ಕ್ಷಮೆಯಾಚಿಸಿ ಶಿಕ್ಷೆಯನ್ನು ಸ್ವೀಕರಿಸಿದರು ಎಂದು ಹೇಳಿದರು.

ಬುಧವಾರ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಎಂಟು ವಿಕೆಟ್ ಗಳಿಂದ ಗೆದ್ದು ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದ ವೇಳೆ ಜೋಸೆಫ್ ಫೀಲ್ಡಿಂಗ್ ಬಗ್ಗೆ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದು ಅಲ್ಲದೆ ಸ್ವಲ್ಪ ಸಮಯದಲ್ಲೇ ಮೈದಾನದಿಂದ ನಿರ್ಗಮಿಸಿದರು. ನಾಲ್ಕನೇ ಓವರ್‌ಗೂ ಮುನ್ನ ಜೋಸೆಫ್ ಮತ್ತು ಹೋಪ್ ನಡುವೆ ಸುದೀರ್ಘ ವಾಗ್ವಾದ ನಡೆಯಿತು. ಪಂದ್ಯವನ್ನು ಪುನರಾರಂಭಿಸುವಂತೆ ಅಂಪೈರ್‌ಗಳಿಗೆ ಮನವಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಓವರ್‌ನಲ್ಲಿ ಆಫ್‌ಸೈಡ್‌ನಲ್ಲಿ ಬಾಲ್ ಆಡಿದ ನಂತರ ಜೋಸೆಫ್ ಹೋಪ್ ಮೇಲೆ ಕೋಪಗೊಂಡರು. ಓವರ್ ಮುಗಿದ ನಂತರ ಜೋಸೆಫ್ ಪೆವಿಲಿಯನ್ ಸೇರಿದರು. ಹೀಗಾಗಿ ಕೆಲ ಕಾಲ ವೆಸ್ಟ್ ಇಂಡೀಸ್ ತಂಡ ಕೇವಲ 10 ಆಟಗಾರರೊಂದಿಗೆ ಆಡಬೇಕಾಯಿತು. ಅಲ್ಜಾರಿ ಸ್ವಲ್ಪ ಸಮಯ ವಿರಾಮ ತೆಗೆದುಕೊಂಡ ನಂತರ ಆಟಕ್ಕೆ ಮರಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT