ಕೋಚ್ ಗೌತಮ್ ಗಂಭೀರ್ ಚಿತ್ರಕೃಪೆ: BCCI
ಕ್ರಿಕೆಟ್

BGT 2025 ಟೂರ್ನಿ ನಡುವೆಯೇ ಕೋಚ್ Gautam Gambhir ಭಾರತಕ್ಕೆ ದೌಡು!

ಅನಿವಾರ್ಯ ವೈಯಕ್ತಿಕ ತುರ್ತುಸ್ಥಿತಿಯಿಂದಾಗಿ ಗಂಭೀರ್ ಅವರು ಬಿಸಿಸಿಐ ಅನುಮತಿ ಮೇರೆಗೆ ಮಂಗಳವಾರ ಮುಂಜಾನೆ ತಮ್ಮ ಕುಟುಂಬದೊಂದಿಗೆ ಭಾರತಕ್ಕೆ ವಾಪಸ್ ಆಗಿದ್ದಾರೆ.

ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿ ಚಾಲ್ತಿಯಲ್ಲಿರುವಂತೆಯೇ ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ದೌಡಾಯಿಸಿದ್ದಾರೆ.

ವೈಯುಕ್ತಿಕ ತುರ್ತು ಸನ್ನಿವೇಶದ ಹಿನ್ನಲೆಯಲ್ಲಿ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ವಾಪಸಾಗಿದ್ದು, ಕುಟುಂಬ ಸಮೇತರಾಗಿ ಭಾರತಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು "ವೈಯಕ್ತಿಕ ತುರ್ತು" ಕಾರಣದಿಂದ ತಮ್ಮ ಕುಟುಂಬದೊಂದಿಗೆ ಭಾರತಕ್ಕೆ ಮರಳಿದ್ದಾರೆ ಎಂದು ಹೇಳಲಾಗಿದ್ದು, ನವೆಂಬರ್ 30 ರಿಂದ ಕ್ಯಾನ್‌ಬೆರಾದಲ್ಲಿ ಪ್ರಾರಂಭವಾಗುವ ಎರಡು ದಿನಗಳ ಪಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ ಎನ್ನಲಾಗಿದೆ.

ಡಿಸೆಂಬರ್ 6 ರಿಂದ ಪ್ರಾರಂಭವಾಗುವ 'ಪಿಂಕ್ ಬಾಲ್ ಟೆಸ್ಟ್' ಮೊದಲು ಅಡಿಲೇಡ್‌ನಲ್ಲಿರುವ ತಂಡದೊಂದಿಗೆ ನೇರವಾಗಿ ಗಂಭೀರ್ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಗಂಭೀರ್ ತಮ್ಮ ವಾಪಸಾತಿಗೆ ಸಂಬಂಧಿಸಿದಂತೆ ಬಿಸಿಸಿಐನ ಅನುಮತಿ ಕೋರಿದ್ದಾರೆ ಎಂದು ತಿಳಿದುಬಂದಿದೆ.

ಅನಿವಾರ್ಯ ವೈಯಕ್ತಿಕ ತುರ್ತುಸ್ಥಿತಿಯಿಂದಾಗಿ ಗಂಭೀರ್ ಅವರು ಬಿಸಿಸಿಐ ಅನುಮತಿ ಮೇರೆಗೆ ಮಂಗಳವಾರ ಮುಂಜಾನೆ ತಮ್ಮ ಕುಟುಂಬದೊಂದಿಗೆ ಭಾರತಕ್ಕೆ ವಾಪಸ್ ಆಗಿದ್ದಾರೆ. ಅವರು ಎರಡನೇ ಟೆಸ್ಟ್ ಪಂದ್ಯದ ಆರಂಭದ ಮೊದಲು ಅಡಿಲೇಡ್‌ಗೆ ಹಿಂತಿರುಗುತ್ತಾರೆ" ಎಂದು BCCI ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವೆಂಬರ್ 27 ರ ಬುಧವಾರದಂದು ಭಾರತೀಯ ತಂಡವು ಕ್ಯಾನ್‌ಬೆರಾಗೆ ತೆರಳಲಿದೆ, ಅಲ್ಲಿ ಇಡೀ ತಂಡವು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಅವರು ಆಯೋಜಿಸಿರುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬಳಿಕ ಎರಡು ದಿನಗಳ ಪಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲಿ ತಂಡ ಪಾಲ್ಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT