ಸಂಜಯ್ ಮಂಜ್ರೇಕರ್ 
ಕ್ರಿಕೆಟ್

ICC Womens T20 World Cup 2024: ಮತ್ತೆ ವಿವಾದಕ್ಕೆ ಸಿಲುಕಿದ Sanjay Manjrekar

ಶುಕ್ರವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮಹಿಳಾ ಟಿ 20 ವಿಶ್ವಕಪ್ ಪಂದ್ಯದ ಸಂದರ್ಭದಲ್ಲಿ ಕಾಮೆಂಟರಿ ಮಾಡುವಾಗ, ಸಂಜಯ್ ಮಂಜ್ರೇಕರ್ ನೀಡಿದ್ದ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.

ದುಬೈ: ಸದಾ ಒಂದಿಲ್ಲೊಂದು ವಿವಾದದಿಂದ ಸುದ್ದಿಯಲ್ಲಿರುವ ಕಮೆಂಟೇಟರ್ ಸಂಜಯ್ ಮಂಜ್ರೇಕರ್ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಶುಕ್ರವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮಹಿಳಾ ಟಿ 20 ವಿಶ್ವಕಪ್ (Women’s T20 World Cup) ಪಂದ್ಯದ ಸಂದರ್ಭದಲ್ಲಿ ಕಾಮೆಂಟರಿ ಮಾಡುವಾಗ, ಸಂಜಯ್ ಮಂಜ್ರೇಕರ್ ನೀಡಿದ್ದ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ಕೋಚಿಂಗ್ ಘಟಕದ ಬಗ್ಗೆ ಮಂಜ್ರೇಕರ್ ಮಾತನಾಡುತ್ತಿದ್ದಾಗ ಉತ್ತರ ಭಾರತದ ಆಟಗಾರರ ಬಗ್ಗೆ ತನಗೆ ಆಳವಾದ ಜ್ಞಾನವಿಲ್ಲ ಎಂದು ಹೇಳಿದ್ದಾರೆ. ಸಹವರ್ತಿ ವೀಕ್ಷಕ ವಿವರಣೆಗಾರರು ಮಾಜಿ ಪಂಜಾಬ್ ಆಟಗಾರ ಮತ್ತು ತಂಡದ ಫೀಲ್ಡಿಂಗ್ ತರಬೇತುದಾರ ಮುನೀಶ್ ಬಾಲಿ ಅವರ ಬಗ್ಗೆ ಮಾತನಾಡಿದಾಗ ಮಾಂಜ್ರೇಕರ್ ಬಾಲಿ ಅವರ ಪರಿಚಯ ಇಲ್ಲ ಎಂದು ಹೇಳಿದ್ದಾರೆ.

“ಕ್ಷಮಿಸಿ, ನನಗೆ ಅವರ ಪರಿಚಯವಿಲ್ಲ. ಉತ್ತರ ಭಾರತದ ಆಟಗಾರರ ಬಗ್ಗೆ ನಾನು ಹೆಚ್ಚು ಗಮನ ಹರಿಸುವುದಿಲ್ಲ” ಎಂದು ನೇರ ಪ್ರಸಾರದಲ್ಲಿಯೇ ಮಂಜ್ರೇಕರ್‌ ಹೇಳಿದ್ದಾರೆ.

ಮಂಜ್ರೇಕರ್ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದು, ಸಂಜಯ್‌ ಮಂಜ್ರೇಕರ್‌ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗಳು ವ್ಯಕ್ತವಾಗುತ್ತಿವೆ. ಇಂತಹ ಜನಾಂಗೀಯವಾದಿಯನ್ನು ಹೇಗೆ ಕಾಮೆಂಟರಿ ಪ್ಯಾನೆಲ್‌ ನಲ್ಲಿ ಕೂರಿಸಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಂಜ್ರೇಕರ್ ಈ ಹಿಂದೆಯೂ ಸಾಕಷ್ಟು ಸಂದರ್ಭಗಳಲ್ಲಿ ವಿವಾದಿತ ಹೇಳಿಕೆ ನೀಡಿ ಸುದ್ದಿಯಾಗಿದ್ದರು. 2019 ರ ಭಾರತದ ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಸಹ-ವಿಶ್ಲೇಷಕ ಹರ್ಷಾ ಭೋಗ್ಲೆ ಅವರ ಬಗ್ಗೆ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT