ಭಾರತಕ್ಕೆ ಜಯ 
ಕ್ರಿಕೆಟ್

1st T20I: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿಯಲ್ಲಿ 1-0 ಮುನ್ನಡೆ

ಬಾಂಗ್ಲಾದೇಶ ನೀಡಿದ್ದ 128 ರನ್ ಗುರಿಯನ್ನು ಭಾರತ ತಂಡ ಕೇವಲ 11.5 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿ ಗುರಿ ತಲುಪಿತು.

ಗ್ವಾಲಿಯರ್: ಬಾಂಗ್ಲಾದೇಶದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, 3 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ 128 ರನ್ ಗುರಿಯನ್ನು ಭಾರತ ತಂಡ ಕೇವಲ 11.5 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿ ಗುರಿ ತಲುಪಿತು.

ಭಾರತ ತಂಡದ ಪರ ಸಂಜು ಸ್ಯಾಮ್ಸನ್ 29 ರನ್ ಗಳಿಸಿದರೆ, ಅಭಿಷೇರ್ ಶರ್ಮಾ 16 ರನ್, ನಾಯಕ ಸೂರ್ಯ ಕುಮಾರ್ ಯಾದವ್ 29 ರನ್, ನಿತೀಶ್ ರೆಡ್ಡಿ ಅಜೇಯ 16 ರನ್ ಮತ್ತು ಹಾರ್ದಿಕ್ ಪಾಂಡ್ಯಾ ಅಜೇಯ 39 ರನ್ ಗಳಿಸಿದರು.

ಹಾರ್ದಿಕ್ ಭರ್ಜರಿ ಬ್ಯಾಟಿಂಗ್

ಇನ್ನು ಸೂರ್ಯಕುಮಾರ್ ಯಾದವ್ ವಿಕೆಟ್ ಪತನದ ಬಳಿಕ ಕ್ರೀಸ್ ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಎಂದಿನಂತೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಕೇವಲ 16 ಎಸೆತಗಳಲ್ಲಿ ಹಾರ್ದಿಕ್ 2 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 39 ರನ್ ಚಚ್ಚಿ ತಂಡ ಇನ್ನೂ ವೇಗವಾಗಿ ಜಯ ದಾಖಲಿಸುವಂತೆ ಮಾಡಿದರು.

ಇನ್ನು ಬಾಂಗ್ಲಾದೇಶ ಪರ ಮುಸ್ತಫಿದುರ್ ರೆಹಮಾನ್ ಮತ್ತು ಮೆಹ್ದಿ ಹಸನ್ ಮಿರಾಜ್ ತಲಾ ಒಂದು ವಿಕೆಟ್ ಪಡೆದರು. 3 ವಿಕೆಟ್ ಪಡೆದು ಬಾಂಗ್ಲಾ ಬ್ಯಾಟರ್ ಗಳನ್ನು ಕಾಡಿದ್ದ ಭಾರತದ ಅರ್ಶ್ ದೀಪ್ ಸಿಂಗ್ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!