ಭಾರತಕ್ಕೆ ಜಯ 
ಕ್ರಿಕೆಟ್

1st T20I: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿಯಲ್ಲಿ 1-0 ಮುನ್ನಡೆ

ಬಾಂಗ್ಲಾದೇಶ ನೀಡಿದ್ದ 128 ರನ್ ಗುರಿಯನ್ನು ಭಾರತ ತಂಡ ಕೇವಲ 11.5 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿ ಗುರಿ ತಲುಪಿತು.

ಗ್ವಾಲಿಯರ್: ಬಾಂಗ್ಲಾದೇಶದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, 3 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ 128 ರನ್ ಗುರಿಯನ್ನು ಭಾರತ ತಂಡ ಕೇವಲ 11.5 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿ ಗುರಿ ತಲುಪಿತು.

ಭಾರತ ತಂಡದ ಪರ ಸಂಜು ಸ್ಯಾಮ್ಸನ್ 29 ರನ್ ಗಳಿಸಿದರೆ, ಅಭಿಷೇರ್ ಶರ್ಮಾ 16 ರನ್, ನಾಯಕ ಸೂರ್ಯ ಕುಮಾರ್ ಯಾದವ್ 29 ರನ್, ನಿತೀಶ್ ರೆಡ್ಡಿ ಅಜೇಯ 16 ರನ್ ಮತ್ತು ಹಾರ್ದಿಕ್ ಪಾಂಡ್ಯಾ ಅಜೇಯ 39 ರನ್ ಗಳಿಸಿದರು.

ಹಾರ್ದಿಕ್ ಭರ್ಜರಿ ಬ್ಯಾಟಿಂಗ್

ಇನ್ನು ಸೂರ್ಯಕುಮಾರ್ ಯಾದವ್ ವಿಕೆಟ್ ಪತನದ ಬಳಿಕ ಕ್ರೀಸ್ ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಎಂದಿನಂತೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಕೇವಲ 16 ಎಸೆತಗಳಲ್ಲಿ ಹಾರ್ದಿಕ್ 2 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 39 ರನ್ ಚಚ್ಚಿ ತಂಡ ಇನ್ನೂ ವೇಗವಾಗಿ ಜಯ ದಾಖಲಿಸುವಂತೆ ಮಾಡಿದರು.

ಇನ್ನು ಬಾಂಗ್ಲಾದೇಶ ಪರ ಮುಸ್ತಫಿದುರ್ ರೆಹಮಾನ್ ಮತ್ತು ಮೆಹ್ದಿ ಹಸನ್ ಮಿರಾಜ್ ತಲಾ ಒಂದು ವಿಕೆಟ್ ಪಡೆದರು. 3 ವಿಕೆಟ್ ಪಡೆದು ಬಾಂಗ್ಲಾ ಬ್ಯಾಟರ್ ಗಳನ್ನು ಕಾಡಿದ್ದ ಭಾರತದ ಅರ್ಶ್ ದೀಪ್ ಸಿಂಗ್ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT