ಟಾಸ್ ಗೆದ್ದ ಬಾಂಗ್ಲಾದೇಶ 
ಕ್ರಿಕೆಟ್

2nd T20I: ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ; ಸರಣಿ ಗೆಲುವಿನತ್ತ ಭಾರತ ಚಿತ್ತ; ಬಾಂಗ್ಲಾಗೆ 'ಮಾಡು ಇಲ್ಲವೇ ಮಡಿ' ಪಂದ್ಯ!

ದೆಹಲಿ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ನವದೆಹಲಿ: 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಸರಣಿ ಸಮಬಲ ಮಾಡಿಕೊಳ್ಳಲು ಯೋಜಿಸಿದೆ.

ದೆಹಲಿ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಈಗಾಗಲೇ ಮೊದಲ ಪಂದ್ಯದ ಸೋಲಿನ ಮೂಲಕ ಸರಣಿ ಸೋಲಿನ ಭೀತಿಯಲ್ಲಿರುವ ಬಾಂಗ್ಲಾದೇಶ 2ನೇ ಟಿ20 ಪಂದ್ಯಗೆದ್ದು ಸರಣಿ ಸಮಬಲ ಮಾಡಿಕೊಳ್ಳುವ ತವಕದಲ್ಲಿದೆ.

ಹೀಗಾಗಿ ಇಂದು ಬಾಂಗ್ಲಾದೇಶಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಈ ಮಹತ್ವದ ಪಂದ್ಯಕ್ಕಾಗಿ ಬಾಂಗ್ಲಾದೇಶ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ.

ಬಾಂಗ್ಲಾ ಆಟಗಾರ ಶೋರಿಫುಲ್ ಬದಲಿಗೆ ತಾಂಜಿಮ್ ಶಕೀಬ್ ಸ್ಥಾನ ಪಡೆದಿದ್ದಾರೆ.

ಸರಣಿ ಗೆಲುವಿನತ್ತ ಭಾರತ ಚಿತ್ತ

ಮೊದಲ ಪಂದ್ಯ ಗೆದ್ದು ಸರಣಿ ಗೆಲುವಿನ ಮೇಲೆ ಚಿತ್ತ ಹರಿಸಿರುವ ಭಾರತ ತಂಡ ಮೊದಲ ಪಂದ್ಯವಾಡಿದ್ದ ಅದೇ ತಂಡವನ್ನು 2ನೇ ಪಂದ್ಯಕ್ಕೂ ಕಣಕ್ಕಿಳಿಸಿದೆ. ದೆಹಲಿಯಲ್ಲಿ ಬಿಸಿಲು ಹೆಚ್ಚಿರುವುದರಿಂದ dew ಪಂದ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಭಾರತದ ಬೌಲರ್ ಗಳಿಗೆ ಇಂದಿನ ಪಂದ್ಯ ಸವಾಲಿನದ್ದಾಗಿರಲಿದೆ ಎಂದು ಹೇಳಲಾಗಿದೆ.

ತಂಡಗಳು ಇಂತಿವೆ

ಭಾರತ: ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ನಿತೀಶ್ ರೆಡ್ಡಿ, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.

ಬಾಂಗ್ಲಾದೇಶ: ಪರ್ವೇಜ್ ಹೊಸೈನ್ ಎಮನ್, ಲಿಟ್ಟನ್ ದಾಸ್(ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ(ನಾಯಕ), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ಜೇಕರ್ ಅಲಿ, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ತಂಝಿಮ್ ಹಸನ್ ಸಾಕಿಬ್, ಮುಸ್ತಾಫಿಜುರ್ ರಹ್ಮಾನ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT