ರೋಹಿತ್ ಶರ್ಮಾ- ಜಸ್ಪ್ರೀತ್ ಬುಮ್ರಾ  online desk
ಕ್ರಿಕೆಟ್

ಟೆಸ್ಟ್ ಟೀಂ ಗೆ ಉಪನಾಯಕನಾಗಿ ಜಸ್ಪ್ರೀತ್ ಬೂಮ್ರಾ ಆಯ್ಕೆ: ಕಾರಣ ಬಹಿರಂಗಪಡಿಸಿದ ರೋಹಿತ್ ಶರ್ಮಾ

ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಮುಂದುವರಿದಿದ್ದರೆ, ಉಪನಾಯಕನನ್ನಾಗಿ ಜಸ್ಪ್ರೀತ್ ಬೂಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಬೂಮ್ರಾ ಭಾರತದ ಅತ್ಯಂತ ಮುಖ್ಯ ಆಟಗಾರರಾಗಿದ್ದಾರೆ.

ಬೆಂಗಳೂರು: ನ್ಯೂ ಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ತಂಡ ಘೋಷಣೆಯಾಗಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಿರುವ ತನ್ನ ಆದ್ಯತೆಯನ್ನು ಬಿಸಿಸಿಐ ಸ್ಪಷ್ಟಪಡಿಸಿದೆ.

ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಮುಂದುವರಿದಿದ್ದರೆ, ಉಪನಾಯಕನನ್ನಾಗಿ ಜಸ್ಪ್ರೀತ್ ಬೂಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಬೂಮ್ರಾ ಭಾರತದ ಅತ್ಯಂತ ಮುಖ್ಯ ಆಟಗಾರರಾಗಿದ್ದಾರೆ.

ಬೂಮ್ರಾ ಅವರಿಗೆ ನಾಯಕತ್ವದ ವಿಭಾಗದಲ್ಲಿ ಈ ವರೆಗೆ ಯಾವುದೇ ಅನುಭವವಿಲ್ಲವಾದರೂ ನಾಯಕತ್ವದ ಗುಂಪಿನ ಭಾಗವಾಗಿದ್ದರು.

ನ್ಯೂ ಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ರೋಹಿತ್ ಶರ್ಮಾಗೆ ಬೂಮ್ರಾ ಅವರನ್ನು ಉಪನಾಯಕನನ್ನಾಗಿ ನೇಮಕ ಮಾಡಿರುವುದರ ಬಗ್ಗೆ ಪ್ರಶ್ನೆ ಕೇಳಲಾಯಿತು. ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿರುವ ರೋಹಿತ್ ಶರ್ಮಾ, ಬುಮ್ರಾ ಅವರು ಯಾವುದೇ ಮಟ್ಟದಲ್ಲಿ ನಾಯಕತ್ವದ ಅನುಭವವನ್ನು ಹೊಂದಿಲ್ಲದಿದ್ದರೂ ಸಹ ಪಂದ್ಯಗಳ ಸಮಯದಲ್ಲಿ ಅವರ ಸಲಹೆಗಳನ್ನು ಅವರು ಎಷ್ಟು ಸ್ವಾಗತಿಸಿದ್ದಾರೆ ಎಂಬುದನ್ನು ರೋಹಿತ್ ಶರ್ಮಾ ವಿವರಿಸಿದ್ದಾರೆ.

“ನೋಡಿ, ಬುಮ್ರಾ ಸಾಕಷ್ಟು ಕ್ರಿಕೆಟ್ ಆಡಿದ್ದಾರೆ. ಅವರ ಜತೆ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ. ಅವರು ಆಟವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. ಅವರು ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ನೀವು ಅವರೊಂದಿಗೆ ಮಾತನಾವಾಗ, ಅವರು ಆಟವನ್ನು ಅರ್ಥಮಾಡಿಕೊಳ್ಳುತ್ತಾರೆ ”ಎಂದು ರೋಹಿತ್ ಹೇಳಿದ್ದಾರೆ. “ತಾಂತ್ರಿಕವಾಗಿ, ಅವರು ಹೆಚ್ಚು ನಾಯಕತ್ವ ವಹಿಸದ ಕಾರಣ ನಾನು ಹೆಚ್ಚು ಹೇಳಲಾರೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

"ನೀವು ಹೆಜ್ಜೆ ಹಾಕಲು ನಾಯಕನ ಅಗತ್ಯವಿರುವ ಪರಿಸ್ಥಿತಿಯಲ್ಲಿರುವಾಗ, ನಾಯಕನಾದವರು ಏನು ಬೇಕು ಎಂದು ಅರ್ಥಮಾಡಿಕೊಳ್ಳುತ್ತಾರೆ. ಬುಮ್ರಾ ಅಂತಹವರಲ್ಲಿ ಒಬ್ಬರು ಎಂದು ನಾನು ಭಾವಿಸುತ್ತೇನೆ. ಆದ್ದರಿಂದ, ಹಿಂದಿನಿಂದಲೂ, ಅವರು ಯಾವಾಗಲೂ ನಮ್ಮ ನಾಯಕತ್ವದ ಗುಂಪಿನಲ್ಲಿದ್ದರು,” ಎಂದು ರೋಹಿತ್ ಹೇಳಿದರು.

ತಂಡದಲ್ಲಿ ಅತ್ಯಂತ ಅನುಭವಿ ವೇಗಿಯಾಗಿರುವ ಬುಮ್ರಾ ತಂಡದಲ್ಲಿರುವ ಯುವ ವೇಗಿಗಳಿಗೆ ನೆರವಾಗುವ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT