ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ 
ಕ್ರಿಕೆಟ್

IND vs NZ, 1st test Match; ಮಳೆಯಿಂದಾಗಿ ಮೊದಲ ದಿನದಾಟ ರದ್ದು

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಟಾಸ್ ಕೂಡ ಕಾಣದೇ ರದ್ದಾಗಿದೆ.

ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಟಾಸ್ ಕೂಡ ಕಾಣದೇ ರದ್ದಾಗಿದೆ.

ಬೆಂಗಳೂರಿನಲ್ಲಿ ನಿನ್ನೆಯಿಂದ ಸುರಿಯುತ್ತಿರುವ ನಿರಂತರ ಮಳೆ ಮೊದಲ ಟೆಸ್ಟ್ ಪಂದ್ಯಕ್ಕೆ ಅಡ್ಡಿಯಾಗಿದ್ದು, ಇಂದೂ ಕೂಡ ಮಳೆ ಮುಂದುವರೆದಿತ್ತು.

ಇಂದು ಬೆಳಗ್ಗೆ ಮಳೆ ನಿಂತು ಆಟ ಆರಂಭವಾಗುವ ವಿಶ್ವಾಸವಿತ್ತು. ಆದರೆ ಮಳೆ ನಿರಂತರವಾಗಿ ಬೀಳುತ್ತಿರುವುದರಿಂದ ಸತತ ಮೂರನೇ ಬಾರಿಯ ಪರಿಶೀಲನೆ ಬಳಿಕ ಅಂಪೈರ್ ಗಳು ಮೊದಲ ದಿನದಾಟವನ್ನು ರದ್ದು ಮಾಡಿದರು.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಇಲ್ಲಿ ಅತ್ಯುತ್ತಮ ವಾಟರ್ ಡ್ರೈನ್ ವ್ಯವಸ್ಥೆ ಇದೆ. ಹೀಗಾಗಿ ಎಂತಹ ದೊಡ್ಡ ಮಳೆಯೇ ಬಂದರೂ ಮಳೆ ನಿಂತ ಕೇವಲ 7 ನಿಮಿಷದಲ್ಲಿ ಇಡೀ ಮೈದಾನವನ್ನು ಒಣಗಿಸುವ ಅತ್ಯಾಧುನಿಕ ವ್ಯವಸ್ಥೆ ಇದೆ.

ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆ ಆಟಕ್ಕೆ ಅಡ್ಡಿಯಾದ ಪರಿಣಾಮ ಅಂಪೈರ್ ಗಳು ದಿನದಾಟ ರದ್ದು ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT