ರಿಷಬ್ ಪಂತ್ ಮತ್ತು ಸರ್ಫರಾಜ್ ಖಾನ್ ಬ್ಯಾಟಿಂಗ್ 
ಕ್ರಿಕೆಟ್

1st test, 2nd innings: 150 ರನ್ ಗಳಿಸಿ ಸರ್ಫರಾಜ್ ಔಟ್, ಪಂತ್ ಶತಕ ಮಿಸ್; ಭಾರತಕ್ಕೆ 77 ರನ್ ಮುನ್ನಡೆ

ನಿನ್ನೆ 3ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿದ್ದ ಭಾರತ ತಂಡ ಇಂದು 4ನೇ ದಿನ ಬ್ಯಾಟಿಂಗ್ ಮುಂದುವರೆಸಿದ್ದು, ಇಂದು ಸರ್ಫರಾಜ್ ಖಾನ್ ಮತ್ತು ರಿಷಬ್ ಪಂತ್ ಭಾರತ ಬ್ಯಾಟಿಂಗ್ ಮುನ್ನಡೆಸಿದರು.

ಬೆಂಗಳೂರು: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 4ನೇ ದಿನ ಬ್ಯಾಟಿಂಗ್ ಮುಂದುವರೆಸಿರುವ ಭಾರತ ತಂಡ 4 ವಿಕೆಟ್ ಕಳೆದುಕೊಂಡು 408 ರನ್ ಪೇರಿಸಿದ್ದು, 150 ರನ್ ಗಳಿಸಿದ್ದ ಸರ್ಫರಾಜ್ ಖಾನ್ ಔಟಾಗಿದ್ದಾರೆ.

ನಿನ್ನೆ 3ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿದ್ದ ಭಾರತ ತಂಡ ಇಂದು 4ನೇ ದಿನ ಬ್ಯಾಟಿಂಗ್ ಮುಂದುವರೆಸಿದ್ದು, ಇಂದು ಸರ್ಫರಾಜ್ ಖಾನ್ ಮತ್ತು ರಿಷಬ್ ಪಂತ್ ಭಾರತ ಬ್ಯಾಟಿಂಗ್ ಮುನ್ನಡೆಸಿದರು. ಈ ಜೋಡಿ ಶತಕದ ಜೊತೆಯಾಟವಾಡಿದ್ದು, ಸರ್ಫರಾಜ್ ಖಾನ್ 195 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 18 ಬೌಂಡರಿಗಳ ನೆರವಿನಿಂದ 150ರನ್ ಗಳಿಸಿ ಟಿಮ್ ಸೌಥಿ ಬೌಲಿಂಗ್ ನಲ್ಲಿ ಔಟಾದರು.

ಶತಕದಂಚಿನಲ್ಲಿ ಮುಗ್ಗರಿಸಿದ ಪಂತ್

ಇನ್ನು ಸರ್ಫರಾಜ್ ಖಾನ್ ಗೆ ಉತ್ತಮ ಸಾಥ್ ನೀಡಿದ್ದ ರಿಷಬ್ ಪಂತ್ ಕೂಡ ಭರ್ಜರಿ ಶತಕ ಸಿಡಿಸುವ ಹುಮ್ಮಸ್ಸಿನಲ್ಲಿದ್ದೃರು. 105 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 99 ರನ್ ಸಿಡಿಸಿದ್ದ ಪಂತ್ ವಿಲಿಯಮ್ ಓರೌರ್ಕೆ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆಗಿ ಕೇವಲ 1 ರನ್ ಅಂತರದಲ್ಲಿ ಶತಕ ಮಿಸ್ ಮಾಡಿಕೊಂಡರು.

ರವೀಂದ್ರ ಜಡೇಜಾರನ್ನು ಕೆಎಲ್ ರಾಹುಲ್ ಜೊತೆಗೂಡಿದ್ದು, ರಾಹುಲ್ ಕೂಡ ಬಿರುಸಿನ ಬ್ಯಾಟಿಂಗ್ ನಡೆಸಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಭಾರತ 5 ವಿಕೆಟ್ ನಷ್ಟಕ್ಕೆ 433ರನ್ ಗಳಿಸಿದ್ದು, 11 ರನ್ ಗಳಿಸಿರುವ ಕೆಎಲ್ ರಾಹುಲ್ ಮತ್ತು ಈಗಷ್ಟೇ ಕ್ರೀಸ್ ಗೆ ಬಂದಿರುವ ರವೀಂದ್ರ ಜಡೇಜಾ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇನ್ನು ನ್ಯೂಜಿಲೆಂಡ್ ಪರ ಎಜಾಜ್ ಪಟೇಲ್ 2 ಮತ್ತು ಗ್ಲೆನ್ ಫಿಲಿಪ್ಸ್, ವಿಲಿಯಮ್ ಓರೌರ್ಕೆ ಮತ್ತು ಟಿಮ್ ಸೌಥಿ ತಲಾ ಒಂದು ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT