ಭಾರತ-ನ್ಯೂಜಿಲೆಂಡ್ ಪಂದ್ಯ 
ಕ್ರಿಕೆಟ್

1st test, Day 4; 2ನೇ ಇನ್ನಿಂಗ್ಸ್ ನಲ್ಲಿ ಭಾರತ 462 ರನ್ ಗೆ ಆಲೌಟ್, ಕಿವೀಸ್ ಗೆ ಗೆಲ್ಲಲು 107 ರನ್ ಗುರಿ!

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 46 ರನ್ ಗಳಿಗೆ ಆಲೌಟ್ ಆಗಿದ್ದ ಭಾರತ ತಂಡ 2ನೇ ಇನ್ನಿಂಗ್ಸ್ ನಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, 462 ರನ್ ಗಳನ್ನು ಪೇರಿಸಿ ಆಲೌಟ್ ಆಗಿದೆ.

ಬೆಂಗಳೂರು: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತ 462 ರನ್ ಗಳಿಗೆ ಆಲೌಟ್ ಆಗಿದ್ದು, ಕಿವೀಸ್ ಪಡೆಗೆ ಗೆಲ್ಲಲು ಕೇವಲ 107ರನ್ ಗಳ ಸಾಧಾರಣ ಗುರಿ ನೀಡಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 46 ರನ್ ಗಳಿಗೆ ಆಲೌಟ್ ಆಗಿದ್ದ ಭಾರತ ತಂಡ 2ನೇ ಇನ್ನಿಂಗ್ಸ್ ನಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, 462 ರನ್ ಗಳನ್ನು ಪೇರಿಸಿ ಆಲೌಟ್ ಆಗಿದೆ. ಆ ಮೂಲಕ ನ್ಯೂಜಿಲೆಂಡ್ ತಂಡಕ್ಕೆ ಕೇವಲ 107 ರನ್ ಗಳ ಅಲ್ಪ ಗುರಿ ನೀಡಿದೆ.

ಇನ್ನು 2ನೇ ಇನ್ನಿಂಗ್ಸ್ ನಲ್ಲಿ ಭಾರತದ ಪರ ರೋಹಿತ್ ಶರ್ಮಾ (52 ರನ್), ವಿರಾಟ್ ಕೊಹ್ಲಿ (70 ರನ್) ಮತ್ತು ರಿಷಬ್ ಪಂತ್ (99 ರನ್) ಅರ್ಧಶತಕ ಸಿಡಿಸಿದರೆ, ಉದಯೋನ್ಮುಖ ಆಟಗಾರ ಸರ್ಫರಾಜ್ ಖಾನ್ (150 ರನ್) ಶತಕ ಸಿಡಿಸಿದರು.

ಕಿವೀಸ್ ಪರ ಮ್ಯಾಟ್ ಹೆನ್ರಿ ಮತ್ತು ವಿಲಿಯಂ ಓರೌರ್ಕೆ ತಲಾ 3 ವಿಕೆಟ್ ಪಡೆದರೆ, ಎಜಾಜ್ ಪಟೇಲ್ 2 ಮತ್ತು ಟಿಮ್ ಸೌಥಿ, ಗ್ಲೆನ್ ಫಿಲಿಪ್ಸ್ ತಲಾ 1 ವಿಕೆಟ್ ಪಡೆದರು.

ದಿನದಾಟ ಅಂತ್ಯ: ನ್ಯೂಜಿಲೆಂಡ್ 0/0

ಇನ್ನು ಭಾರತ ನೀಡಿದ 107 ರನ್ ಗಳ ಸಾಧಾರಾಣ ಗುರಿ ಬೆನ್ನು ಹತ್ತಿರುವ ನ್ಯೂಜಿಲೆಂಡ್ ತಂಡ 4 ಎಸೆಗಳನ್ನು ಎದುರಿಸಿದ್ದಾಗ ಮಂದ ಬೆಳಕಿನ ಕಾರಣ ಆಟ ನಿಂತಿತು. ಬಳಿಕ ಜೋರಾಗಿ ಮಳೆ ಬಂದ ಕಾರಣ ದಿನದಾಟವನ್ನು ಅಂತ್ಯಗೊಳಿಸಲಾಯಿತು. ಹೀಗಾಗಿ ನಾಳೆ ಪಂದ್ಯ ಮುಂದುವರೆಯಲಿದ್ದು, ಭಾರತ ಗೆಲ್ಲಬೇಕಿದ್ದರೆ 107ರನ್ ನೊಳಗೆ ನ್ಯೂಜಿಲೆಂಡ್ ಪಡೆಯನ್ನು ಆಲೌಟ್ ಮಾಡಬೇಕು. ಅಥವಾ ಇಡೀ ದಿನ ಮಳೆ ಬಂದು ಆಟ ನಿಲ್ಲಬೇಕು. ಆಗ ಪಂದ್ಯ ಡ್ರಾ ಆಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT