ನ್ಯೂಜಿಲ್ಯಾಂಡ್ ಮಹಿಳಾ ಕ್ರಿಕೆಟ್ ತಂಡ online desk
ಕ್ರಿಕೆಟ್

Women’s T20 World Cup 2024: ನ್ಯೂಜಿಲೆಂಡ್ ಗೆ ಚೊಚ್ಚಲ ಟಿ20 ವಿಶ್ವಕಪ್!

ಕಳೆದ ವಿಶ್ವಕಪ್ ನಲ್ಲೂ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡ, ಆಸ್ಟ್ರೇಲಿಯಾ ವಿರುದ್ಧ ಸೋತು ಪ್ರಶಸ್ತಿಯಿಂದ ವಂಚಿತವಾಗಿತ್ತು.

ದುಬೈ: ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಚೊಚ್ಚಲ ವಿಶ್ವಕಪ್ ನ್ನು ಮುಡಿಗೇರಿಸಿಕೊಂಡಿದೆ. ದುಬೈ ನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ಈ ಪಂದ್ಯ ನಡೆದಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 32 ರನ್​ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದೆ. ಈ ಪಂದ್ಯದಲ್ಲಿ ಸೋಲೊಪ್ಪಿಕೊಳ್ಳುವ ಮೂಲಕ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಸತತ 2ನೇ ಬಾರಿಗೆ ವಿಶ್ವಕಪ್ ವಂಚಿತವಾಗಿದೆ.

ಕಳೆದ ವಿಶ್ವಕಪ್ ನಲ್ಲೂ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡ, ಆಸ್ಟ್ರೇಲಿಯಾ ವಿರುದ್ಧ ಸೋತು ಪ್ರಶಸ್ತಿಯಿಂದ ವಂಚಿತವಾಗಿತ್ತು. ಇದೀಗ ಸತತ ಎರಡನೇ ಬಾರಿಯೂ ಪ್ರಶಸ್ತಿ ಎತ್ತಿ ಹಿಡಿಯುವಲ್ಲಿ ವಿಫಲವಾಗಿದೆ. ಇನ್ನು 2010 ರ ಬಳಿಕ ಇದೇ ಮೊದಲ ಬಾರಿಗೆ ಫೈನಲ್​ಗೇರಿದ್ದ ನ್ಯೂಜಿಲೆಂಡ್ ತಂಡ ಸೋಫಿ ಡಿವೈನ್ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಟಾಸ್ ಸೋತ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಿ ದಕ್ಷಿಣ ಆಫ್ರಿಕಾಕ್ಕೆ 159 ರನ್​ಗಳ ಗುರಿ ನೀಡಿತ್ತು. ಅಮೆಲಿಯಾ ಕೆರ್ 43 ರನ್, ಸುಜಿ ಬೇಟ್ಸ್ 32 ರನ್ ಮತ್ತು ಬ್ರೂಕ್ ಹ್ಯಾಲಿಡೇ 38 ರನ್‌ಗಳನ್ನು ಕಲೆ ಹಾಕಿ ಪ್ರಬಲ ಟಾರ್ಗೆಟ್ ನೀಡಿತ್ತು.

ದಕ್ಷಿಣ ಆಫ್ರಿಕಾ ಬೌಲಿಂಗ್​ ವಿಭಾಗದಲ್ಲಿ ಮ್ಲಾಬಾ ಎರಡು ವಿಕೆಟ್ ಪಡೆದರೆ, ಟ್ರೇಯಾನ್, ಕ್ಲರ್ಕ್ ಮತ್ತು ಖಾಕಾ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಮೊದಲ ವಿಕೆಟ್​ಗೆ ಅತ್ಯುತ್ತಮ ಜೊತೆಯಾಟ ಲಭಿಸಿ 51 ರನ್​ಗಳನ್ನು ಕಲೆಹಾಕಿತು. ಈ ಜೊತೆಯಾಟದ ಬಳಿಕ ತಂಡದಲ್ಲಿ ಪೆವಿಲಿಯನ್ ಪರೇಡ್ ಆರಂಭವಾಯಿತು. ಅನುಭವಿ, ಭರವಸೆಯ ಬ್ಯಾಟರ್ ಗಳು ನ್ಯೂ ಜಿಲ್ಯಾಂಡ್ ತಂಡವನ್ನು ಎದುರಿಸಲು ವಿಫಲರಾದರು. ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 126 ರನ್ ಗಳಿಗೆ ಸೋಲೊಪ್ಪಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT