ವಾಷಿಂಗ್ಟನ್ ಸುಂದರ್ ಮಾರಕ ಬೌಲಿಂಗ್ 
ಕ್ರಿಕೆಟ್

2nd Test: Washington Sunder ಮಾರಕ ಬೌಲಿಂಗ್, ಮೊದಲ ಇನ್ನಿಂಗ್ಸ್ ನಲ್ಲಿ ನ್ಯೂಜಿಲೆಂಡ್ 259 ರನ್ ಗೆ ಆಲೌಟ್!

ಆರಂಭದಲ್ಲಿ ಭಾರತದ ಆರ್ ಅಶ್ವಿನ್ ಆರಂಭಿಕ ಆಘಾತ ನೀಡಿದರು. ಆರಂಭಿಕ ಆಟಗಾರ ಹಾಗೂ ನಾಯಕ ಟಾಮ್ ಲಾಥಮ್ (15 ರನ್) ಎಲ್ ಬಿ ಬಲೆಗೆ ಕೆಡವಿದ ಅಶ್ವಿನ್ ಬಳಿಕ ವಿಲ್ ಯಂಗ್ (18 ರನ್) ರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಪುಣೆ: 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ವಾಷಿಂಗ್ಟನ್ ಸುಂದರ್ ಮಾರಕ ಬೌಲಿಂಗ್ ಗೆ ತತ್ತರಿಸಿದ ನ್ಯೂಜಿಲೆಂಡ್ ತಂಡ 259ರನ್ ಗಳಿಗೆ ಆಲೌಟ್ ಆಗಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 259 ರನ್ ಗೆ ಆಲೌಟ್ ಆಗಿದೆ. ನ್ಯೂಜಿಲೆಂಡ್ ದಾಂಡಿಗರನ್ನು ಭಾರತದ ಬೌಲರ್ ವಾಷಿಂಗ್ಟನ್ ಸುಂದರ್ ಬಿಟ್ಟೂ ಬಿಡದೇ ಕಾಡಿ ಒಟ್ಟು 7 ವಿಕೆಟ್ ಕಬಳಿಸಿದರು.

ಆರಂಭದಲ್ಲಿ ಭಾರತದ ಆರ್ ಅಶ್ವಿನ್ ಆರಂಭಿಕ ಆಘಾತ ನೀಡಿದರು. ಆರಂಭಿಕ ಆಟಗಾರ ಹಾಗೂ ನಾಯಕ ಟಾಮ್ ಲಾಥಮ್ (15 ರನ್) ಎಲ್ ಬಿ ಬಲೆಗೆ ಕೆಡವಿದ ಅಶ್ವಿನ್ ಬಳಿಕ ವಿಲ್ ಯಂಗ್ (18 ರನ್) ರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಈ ಹಂತದಲ್ಲಿ ಡೆವಾನ್ ಕಾನ್ವೆ (76 ರನ್) ಮತ್ತು ರಚಿನ್ ರವೀಂದ್ರ (65 ರನ್) ನ್ಯೂಜಿಲೆಂಡ್ ಇನ್ನಿಂಗ್ಸ್ ಗೆ ಜೀವ ತುಂಬಿದರು. ಆದರೆ ಈ ಹಂತದಲ್ಲಿ 76 ರನ್ ಗಳಿಸಿದ್ದ ಕಾನ್ವೆ ಮತ್ತದೇ ಅಶ್ವಿನ್ ಬೌಲಿಂಗ್ ನಲ್ಲಿ ಔಟಾದರು. ರಚಿನ್ ರವೀಂದ್ರ ಕೂಡ ವಾಷಿಂಗ್ಟನ್ ಸುಂದರ್ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆಗಿ ಹೊರ ನಡೆದರು.

ವಾಷಿಂಗ್ಟನ್ ಸುಂದರ್ ಮಾರಕ ಬೌಲಿಂಗ್

ಆ ಬಳಿಕ ಮೈದಾನದಲ್ಲಿ ನಡೆದದ್ದು ವಾಷಿಂಗ್ಟನ್ ಸುಂದರ್ ರ ಅದ್ಭುತ ಬೌಲಿಂಗ್ ಪ್ರದರ್ಶನ. ರವೀಂದ್ರ ವಿಕೆಟ್ ಪಡೆದ ಬಳಿಕ ಲಯ ಕಂಡುಕೊಂಡ ವಾಷಿಂಗ್ಟನ್ ಸುಂದರ್ ಒಬ್ಬರ ನಂತರ ಒಬ್ಬರಂತೆ ನ್ಯೂಜಿಲೆಂಡ್ ಬ್ಯಾಟರ್ ಗಳನ್ನು ಪೆವಿಲಿಯನ್ ಗೆ ಅಟ್ಟಿದರು. ಈ ಪೈಕಿ ಕೆಳ ಕ್ರಮಾಂಕದಲ್ಲಿ ಮಿಚೆಲ್ ಸ್ಯಾಂಥ್ನರ್ ಮಾತ್ರ 33 ರನ್ ಗಳಿಸಿ ನ್ಯೂಜಿಲೆಂಡ್ ಇನ್ನಿಂಗ್ಸ್ ಗೆ ಜೀವ ತುಂಬುವ ಕೆಲಸ ಮಾಡಿದರು.

ಆದರೆ ಉಳಿದಾವ ಆಟಗಾರರೂ ಗಟ್ಟಿಯಾಗಿ ಕ್ರೀಸ್ ನಲ್ಲಿ ನಿಲ್ಲುವ ಕೆಲಸ ಮಾಡಲಿಲ್ಲ. ವಿಲ್ ಯಂಗ್ (18 ರನ್), ಡರಿಲ್ ಮೆಚೆಲ್ (18), ಟಾಮ್ ಬ್ಲಂಡಲ್ (3), ಗ್ಲೇನ್ ಫಿಲಿಪ್ಸ್ (9), ಟಿಮ್ ಸೌಥಿ (5) ಮತ್ತು ಎಜಾಜ್ ಪಟೇಲ್ (4) ಕೂಡ ವಾಷಿಂಗ್ಟನ್ ಸುಂದರ್ ಗೆ ವಿಕೆಟ್ ಒಪ್ಪಿಸಿದರು.

ಅಂತಿಮವಾಗಿ ನ್ಯೂಜಿಲೆಂಡ್ ತಂಡ 79.1 ಓವರ್ ನಲ್ಲಿ 259 ರನ್ ಗಳಿಗೆ ಆಲೌಟ್ ಆಗಿದೆ. ಭಾರತದ ಪರ ಆರ್ ಅಶ್ವಿನ್ 3 ಮತ್ತು ವಾಷಿಂಗ್ಟನ್ ಸುಂದರ್ 7 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT