ಮೈಸೂರು ವಾರಿಯರ್ಸ್ ಚಾಂಪಿಯನ್ 
ಕ್ರಿಕೆಟ್

Maharaja Trophy 2024: ಮೈಸೂರು ವಾರಿಯರ್ಸ್ ಚಾಂಪಿಯನ್, ಬೆಂಗಳೂರು ವಿರುದ್ಧ 45 ರನ್ ಭರ್ಜರಿ ಜಯ

ಮೈಸೂರು ತಂಡ, ಬೆಂಗಳೂರು ತಂಡವನ್ನು 45 ರನ್​ಗಳಿಂದ ಮಣಿಸಿ ಮೊದಲ ಬಾರಿಗೆ ಮಹಾರಾಜ ಟ್ರೋಫಿಯನ್ನು ಎತ್ತಿಹಿಡಿದಿದೆ.

ಬೆಂಗಳೂರು: ಮೈಸೂರು ವಾರಿಯರ್ಸ್ ಮತ್ತು ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ನಡೆದ Maharaja Trophy 2024 ಫೈನಲ್ ಪಂದ್ಯದಲ್ಲಿ ಮೈಸೂರು ತಂಡ ಜಯಭೇರಿ ಭಾರಿಸಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ಹಾಗೂ ಬೆಂಗಳೂರು ಬ್ಲಾಸ್ಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಮೈಸೂರು ತಂಡ, ಬೆಂಗಳೂರು ತಂಡವನ್ನು 45 ರನ್​ಗಳಿಂದ ಮಣಿಸಿ ಮೊದಲ ಬಾರಿಗೆ ಮಹಾರಾಜ ಟ್ರೋಫಿಯನ್ನು ಎತ್ತಿಹಿಡಿದಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೈಸೂರು ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಲಷ್ಟೆ ಶಕ್ತವಾಯಿತು.

ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಕರುಣ್ ನಾಯರ್ ನಾಯಕತ್ವದ ಮೈಸೂರು ತಂಡ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು. ಮೈಸೂರು ಪರ ಕಾರ್ತಿಕ್ 71 ರನ್ ಗಳಿಸಿದರೆ, ನಾಯಕ ಕರುಣ್ ನಾಯರ್ 66 ರನ್ ಗಳಿಸಿದರು. ಎಂ ಎಸ್ ಭಾಂಡಗೆ 44ರನ್ ಗಳಿಸಿ ಮೈಸೂರು ತಂಡ ಸ್ಕೋರ್ 200ರ ಗಡಿ ದಾಟುವಂತೆ ನೋಡಿಕೊಂಡರು. ಅಂತಿಮವಾಗಿ ಮೈಸೂರು ತಂಡ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು.

ಬೃಹತ್ ಗುರಿಯನ್ನು ಬೆನ್ನು ಹತ್ತಿದ ಬೆಂಗಳೂರು ತಂಡ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಬೆಂಗಳೂರು ಪರ ಚೇತನಾ ಎಲ್ ಆರ್ 51 ರನ್ ಗಳಿಸಿದರೆ, ಕ್ರಾಂತಿಕುಮಾರ್ 39 ರನ್ ಗಳಿಸಿದರು. ಮೈಸೂರು ಪರ ವಿದ್ಯಾಧರ್ ಪಾಟೀಲ್ 3 ವಿಕೆಟ್ ಪಡೆದರೆ, ಕಾರ್ತಿಕ್, ಧನುಷ್ ಗೌಡ, ಕೆ ಗೌತಮ್ ಮತ್ತು ಕಾರ್ತಿಕ್ ಎಸ್ ಯು ತಲಾ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT