ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ 
ಕ್ರಿಕೆಟ್

ಕೈಕೊಟ್ಟ 'Rohit-Kohli'; ಆಸರೆಯಾದ ಜಡೇಜಾ; ಶತಕ ಸಿಡಿಸಿದ ಅಶ್ವಿನ್; ದಿನದಾಟ ಅಂತ್ಯಕ್ಕೆ ಭಾರತ 339/6

ಇಂದು ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ಅಕ್ಷರಶಃ ಬಾಂಗ್ಲಾ ಬೌಲರ್ ಗಳ ಎದುರು ಪರದಾಡಿತು.

ಚೆನ್ನೈ: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆಲ್ರೌಂಡರ್ ಆರ್ ಅಶ್ವಿನ್ ಭರ್ಜರಿ ಶತಕ ಸಿಡಿಸಿದ್ದು, ಭಾರತವನ್ನು ಅಪಾಯದಿಂದ ಮೇಲೆತ್ತಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ಅಕ್ಷರಶಃ ಬಾಂಗ್ಲಾ ಬೌಲರ್ ಗಳ ಎದುರು ಪರದಾಡಿತು.

ಕೇವಲ 96 ರನ್ ಗಳನ್ನು ಸೇರಿಸುವಷ್ಟರಲ್ಲಿ ಭಾರತದ ಪ್ರಮುಖ 4 ವಿಕೆಟ್ ಗಳು ಪತನವಾದವು. ನಾಯಕ ರೋಹಿತ್ ಶರ್ಮಾ 6 ರನ್ ಗಳಿಸಿ ಔಟಾದರೆ, ಶುಭಮನ್ ಗಿಲ್ ಶೂನ್ಯ ಸುತ್ತಿದರು. ವಿರಾಟ್ ಕೊಹ್ಲಿ ರನ್ ಗಳಿಕೆ ಕೂಡ 6 ರನ್ ಗೇ ಸೀಮಿತವಾಯಿತು. ಈ ಹಂತದಲ್ಲಿ ಜೊತೆಗೂಡಿದ ಜೈಸ್ವಾಲ್ ಮತ್ತು ರಿಷಬ್ ಪಂತ್ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತಿದರು.

ಜೈಸ್ವಾಲ್ 56 ರನ್ ಗಳಿಸಿದರೆ, ಪಂತ್ 39 ರನ್ ಗಳಿಸಿ ಔಟಾದರು. ಬಳಿಕ ಬಂದ ಕೆಎಲ್ ರಾಹುಲ್ 16 ರನ್ ಗಳಿಸಿ ಮೆಹ್ದಿ ಹಸನ್ ಗೆ ವಿಕೆಟ್ ಒಪ್ಪಿಸಿದರು. ಈ ವೇಳೆ ಭಾರತದ ಮಧ್ಯಮ ಕ್ರಮಾಂಕ ಕೂಡ ಅಪಾಯಕ್ಕೆ ಸಿಲುಕಿತ್ತು. ಆದರೆ 7 ವಿಕೆಟ್ ಗೆ ಜೊತೆಗೂಡಿದ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಜೋಡಿ ಬಾಂಗ್ಲಾ ಬೌಲರ್ ಗಳನ್ನು ಕ್ರಮೇಣ ಕಾಡಲು ಆರಂಭಿಸಿದರು. ಯಾವ ಹಂತದಲ್ಲೂ ವಿಕೆಟ್ ಬಿಟ್ಟುಕೊಡದ ಈ ಜೋಡಿ 192 ರನ್ ಗಳ ಅಮೋಘ ಜೊತೆಯಾಟವಾಡಿತು.

114 ಎಸೆತಗಳನ್ನು ಎದುರಿಸಿ 85 ರನ್ ಗಳಿಸಿ ರವೀಂದ್ರ ಜಡೇಜಾ ಶತಕದ ಅಂಚಿನಲ್ಲಿದ್ದರೆ, 110 ಎಸೆತಗಳಲ್ಲಿ 102ರನ್ ಗಳಿಸಿರುವ ಅಶ್ವಿನ್ ಬಾಂಗ್ಲಾ ಬೌಲರ್ ಗಳ ಮೇಲೆ ಸವಾರಿ ಮಾಡಿದರು. 2 ಸಿಕ್ಸರ್ ಮತ್ತು 10 ಬೌಂಡರಿಗಳ ಮೂಲಕ ಶತಕ ಸಿಡಿಸಿ ಅಶ್ವಿನ್ ಸಂಭ್ರಮಿಸಿದರು. ಅಂದಹಾಗೆ ಇದು ಆರ್ ಅಶ್ವಿನ್ ರ 6ನೇ ಅಂತಾರಾಷ್ಟ್ರೀಯ ಟೆಸ್ಟ್ ಶತಕವಾಗಿದೆ.

ಬಾಂಗ್ಲಾದೇಶ ಪರ ಹಸನ್ ಮಹಮೂದ್ 4 ವಿಕೆಟ್ ಪಡೆದರೆ, ನಹೀದ್ ರಾಣಾ, ಮೆಹ್ದಿ ಹಸನ್ ತಲಾ 1 ವಿಕೆಟ್ ಪಡೆದರು.

ದಿನದಾಟ ಮುಕ್ತಾಯ ಭಾರತ 339/6

ಇನ್ನು ದಿನದಾಟ ಮುಕ್ತಾಯದ ವೇಳೆಗೆ ಭಾರತ 6 ವಿಕೆಟ್ ನಷ್ಟಕ್ಕೆ 339 ರನ್ ಕಲೆಹಾಕಿದ್ದು, 86 ರನ್ ಗಳಿಸಿರುವ ರವೀಂದ್ರ ಜಡೇಜಾ ಮತ್ತು 102 ರನ್ ಗಳಿಸಿರುವ ಅಶ್ವಿನ್ 2ನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT