ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ 
ಕ್ರಿಕೆಟ್

ಕೈಕೊಟ್ಟ 'Rohit-Kohli'; ಆಸರೆಯಾದ ಜಡೇಜಾ; ಶತಕ ಸಿಡಿಸಿದ ಅಶ್ವಿನ್; ದಿನದಾಟ ಅಂತ್ಯಕ್ಕೆ ಭಾರತ 339/6

ಇಂದು ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ಅಕ್ಷರಶಃ ಬಾಂಗ್ಲಾ ಬೌಲರ್ ಗಳ ಎದುರು ಪರದಾಡಿತು.

ಚೆನ್ನೈ: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆಲ್ರೌಂಡರ್ ಆರ್ ಅಶ್ವಿನ್ ಭರ್ಜರಿ ಶತಕ ಸಿಡಿಸಿದ್ದು, ಭಾರತವನ್ನು ಅಪಾಯದಿಂದ ಮೇಲೆತ್ತಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ಅಕ್ಷರಶಃ ಬಾಂಗ್ಲಾ ಬೌಲರ್ ಗಳ ಎದುರು ಪರದಾಡಿತು.

ಕೇವಲ 96 ರನ್ ಗಳನ್ನು ಸೇರಿಸುವಷ್ಟರಲ್ಲಿ ಭಾರತದ ಪ್ರಮುಖ 4 ವಿಕೆಟ್ ಗಳು ಪತನವಾದವು. ನಾಯಕ ರೋಹಿತ್ ಶರ್ಮಾ 6 ರನ್ ಗಳಿಸಿ ಔಟಾದರೆ, ಶುಭಮನ್ ಗಿಲ್ ಶೂನ್ಯ ಸುತ್ತಿದರು. ವಿರಾಟ್ ಕೊಹ್ಲಿ ರನ್ ಗಳಿಕೆ ಕೂಡ 6 ರನ್ ಗೇ ಸೀಮಿತವಾಯಿತು. ಈ ಹಂತದಲ್ಲಿ ಜೊತೆಗೂಡಿದ ಜೈಸ್ವಾಲ್ ಮತ್ತು ರಿಷಬ್ ಪಂತ್ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತಿದರು.

ಜೈಸ್ವಾಲ್ 56 ರನ್ ಗಳಿಸಿದರೆ, ಪಂತ್ 39 ರನ್ ಗಳಿಸಿ ಔಟಾದರು. ಬಳಿಕ ಬಂದ ಕೆಎಲ್ ರಾಹುಲ್ 16 ರನ್ ಗಳಿಸಿ ಮೆಹ್ದಿ ಹಸನ್ ಗೆ ವಿಕೆಟ್ ಒಪ್ಪಿಸಿದರು. ಈ ವೇಳೆ ಭಾರತದ ಮಧ್ಯಮ ಕ್ರಮಾಂಕ ಕೂಡ ಅಪಾಯಕ್ಕೆ ಸಿಲುಕಿತ್ತು. ಆದರೆ 7 ವಿಕೆಟ್ ಗೆ ಜೊತೆಗೂಡಿದ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಜೋಡಿ ಬಾಂಗ್ಲಾ ಬೌಲರ್ ಗಳನ್ನು ಕ್ರಮೇಣ ಕಾಡಲು ಆರಂಭಿಸಿದರು. ಯಾವ ಹಂತದಲ್ಲೂ ವಿಕೆಟ್ ಬಿಟ್ಟುಕೊಡದ ಈ ಜೋಡಿ 192 ರನ್ ಗಳ ಅಮೋಘ ಜೊತೆಯಾಟವಾಡಿತು.

114 ಎಸೆತಗಳನ್ನು ಎದುರಿಸಿ 85 ರನ್ ಗಳಿಸಿ ರವೀಂದ್ರ ಜಡೇಜಾ ಶತಕದ ಅಂಚಿನಲ್ಲಿದ್ದರೆ, 110 ಎಸೆತಗಳಲ್ಲಿ 102ರನ್ ಗಳಿಸಿರುವ ಅಶ್ವಿನ್ ಬಾಂಗ್ಲಾ ಬೌಲರ್ ಗಳ ಮೇಲೆ ಸವಾರಿ ಮಾಡಿದರು. 2 ಸಿಕ್ಸರ್ ಮತ್ತು 10 ಬೌಂಡರಿಗಳ ಮೂಲಕ ಶತಕ ಸಿಡಿಸಿ ಅಶ್ವಿನ್ ಸಂಭ್ರಮಿಸಿದರು. ಅಂದಹಾಗೆ ಇದು ಆರ್ ಅಶ್ವಿನ್ ರ 6ನೇ ಅಂತಾರಾಷ್ಟ್ರೀಯ ಟೆಸ್ಟ್ ಶತಕವಾಗಿದೆ.

ಬಾಂಗ್ಲಾದೇಶ ಪರ ಹಸನ್ ಮಹಮೂದ್ 4 ವಿಕೆಟ್ ಪಡೆದರೆ, ನಹೀದ್ ರಾಣಾ, ಮೆಹ್ದಿ ಹಸನ್ ತಲಾ 1 ವಿಕೆಟ್ ಪಡೆದರು.

ದಿನದಾಟ ಮುಕ್ತಾಯ ಭಾರತ 339/6

ಇನ್ನು ದಿನದಾಟ ಮುಕ್ತಾಯದ ವೇಳೆಗೆ ಭಾರತ 6 ವಿಕೆಟ್ ನಷ್ಟಕ್ಕೆ 339 ರನ್ ಕಲೆಹಾಕಿದ್ದು, 86 ರನ್ ಗಳಿಸಿರುವ ರವೀಂದ್ರ ಜಡೇಜಾ ಮತ್ತು 102 ರನ್ ಗಳಿಸಿರುವ ಅಶ್ವಿನ್ 2ನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?