ರಿಷಬ್ ಪಂತ್ ಮತ್ತು ಶುಭ್ ಮನ್ ಗಿಲ್ 
ಕ್ರಿಕೆಟ್

Bangladesh vs India; 3ನೇ ದಿನ ಭೋಜನ ವಿರಾಮದ ವೇಳೆಗೆ 2ನೇ ಇನ್ನಿಂಗ್ಸ್ ನಲ್ಲಿ ಭಾರತ 205/3, 432ರನ್ ಮುನ್ನಡೆ

ನಿನ್ನೆ ಬಾಂಗ್ಲಾದೇಶವನ್ನು ಕೇವಲ 149 ರನ್ ಗಳಿಗೆ ಕಟ್ಟಿಹಾಕಿದ್ದ ಭಾರತ 237ರನ್ ಗಳ ಬೃಹತ್ ಮುನ್ನಡೆ ಪಡೆದಿತ್ತು. ಇಂದು ತನ್ನ ಪಾಲಿನ 2ನೇ ಇನ್ನಿಂಗ್ಸ್ ಬ್ಯಾಟಿಂಗ್ ಮುಂದುವರೆಸಿದ್ದು, 3ನೇ ದಿನದ ಭೋಜನ ವಿರಾಮದ ವೇಳೆ ಭಾರತ 3 ವಿಕೆಟ್ ನಷ್ಟಕ್ಕೆ 205 ರನ್ ಕಲೆಹಾಕಿದೆ.

ಚೆನ್ನೈ: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 3ನೇ ದಿನ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಭೋಜನ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ 205ರನ್ ಕಲೆಹಾಕಿದೆ.

ನಿನ್ನೆ ಬಾಂಗ್ಲಾದೇಶವನ್ನು ಕೇವಲ 149 ರನ್ ಗಳಿಗೆ ಕಟ್ಟಿಹಾಕಿದ್ದ ಭಾರತ 237ರನ್ ಗಳ ಬೃಹತ್ ಮುನ್ನಡೆ ಪಡೆದಿತ್ತು. ಇಂದು ತನ್ನ ಪಾಲಿನ 2ನೇ ಇನ್ನಿಂಗ್ಸ್ ಬ್ಯಾಟಿಂಗ್ ಮುಂದುವರೆಸಿದ್ದು, 3ನೇ ದಿನದ ಭೋಜನ ವಿರಾಮದ ವೇಳೆ ಭಾರತ 3 ವಿಕೆಟ್ ನಷ್ಟಕ್ಕೆ 205 ರನ್ ಕಲೆಹಾಕಿದೆ.

ಆ ಮೂಲಕ ಭಾರತ ಬರೊಬ್ಬರಿ 432ರನ್ ಮುನ್ನಡೆ ಪಡೆದುಕೊಂಡಿದೆ. 86 ರನ್ ಗಳಿಸಿರುವ ಶುಭ್ ಮನ್ ಗಿಲ್ ಮತ್ತು 82 ರನ್ ಗಳಿಸಿರುವ ರಿಷಬ್ ಪಂತ್ ಕ್ರೀಸ್ ಕಾಯ್ದುಕೊಂಡಿದ್ದಾರೆ. ಇಬ್ಬರೂ ಆಟಗಾರರು ಶತಕದಂಚಿನಲ್ಲಿದ್ದು ಇಬ್ಬರೂ ಶತಕ ಸಿಡಿಸಲೆಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಮತ್ತೆ ಕೈಕೊಟ್ಟ Rohit-Kohli

ಇನ್ನು ಮೊದಲ ಇನ್ನಿಂಗ್ಸ್ ನಲ್ಲಿ ತಲಾ 6 ರನ್ ಗಳಿಸಿ ಔಟಾಗಿ ನಿರಾಶೆ ಮೂಡಿಸಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ 2ನೇ ಇನ್ನಿಂಗ್ಸ್ ನಲ್ಲಿ ಕಡಿಮೆ ಮೊತ್ತಕ್ಕೆ ಔಟಾಗಿ ಮತ್ತೆ ಅಭಿಮಾನಿಗಳ ನಿರಾಶೆಗೆ ಕಾರಣರಾದರು.

ರೋಹಿತ್ ಕೇವಲ 5 ರನ್ ಗಳಿಸಿ ಟಸ್ಕಿನ್ ಅಹ್ಮದ್ ಗೆ ವಿಕೆಟ್ ಒಪ್ಪಿಸಿದರೆ, ವಿರಾಟ್ ಕೊಹ್ಲಿ 17ರನ್ ಗಳಿಸಿ ಮೆಹ್ದಿ ಹಸನ್ ಮಿರಾಜ್ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಕೂಡ ಕೇವಲ 10ರನ್ ಗೆ ಔಟಾದರು.

ಅತ್ತ ಬಾಂಗ್ಲಾದೇಶ ಪರ ಟಸ್ಕಿನ್ ಅಹ್ಮದ್, ಮೆಹ್ದಿ ಹಸನ್ ಮಿರಾಜ್ ಮತ್ತು ಶಕೀಬ್ ಅಲ್ ಹಸನ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT