ರಿಷಬ್ ಪಂತ್ ಮತ್ತು ಶುಭ್ ಮನ್ ಗಿಲ್ 
ಕ್ರಿಕೆಟ್

Bangladesh vs India; 3ನೇ ದಿನ ಭೋಜನ ವಿರಾಮದ ವೇಳೆಗೆ 2ನೇ ಇನ್ನಿಂಗ್ಸ್ ನಲ್ಲಿ ಭಾರತ 205/3, 432ರನ್ ಮುನ್ನಡೆ

ನಿನ್ನೆ ಬಾಂಗ್ಲಾದೇಶವನ್ನು ಕೇವಲ 149 ರನ್ ಗಳಿಗೆ ಕಟ್ಟಿಹಾಕಿದ್ದ ಭಾರತ 237ರನ್ ಗಳ ಬೃಹತ್ ಮುನ್ನಡೆ ಪಡೆದಿತ್ತು. ಇಂದು ತನ್ನ ಪಾಲಿನ 2ನೇ ಇನ್ನಿಂಗ್ಸ್ ಬ್ಯಾಟಿಂಗ್ ಮುಂದುವರೆಸಿದ್ದು, 3ನೇ ದಿನದ ಭೋಜನ ವಿರಾಮದ ವೇಳೆ ಭಾರತ 3 ವಿಕೆಟ್ ನಷ್ಟಕ್ಕೆ 205 ರನ್ ಕಲೆಹಾಕಿದೆ.

ಚೆನ್ನೈ: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 3ನೇ ದಿನ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಭೋಜನ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ 205ರನ್ ಕಲೆಹಾಕಿದೆ.

ನಿನ್ನೆ ಬಾಂಗ್ಲಾದೇಶವನ್ನು ಕೇವಲ 149 ರನ್ ಗಳಿಗೆ ಕಟ್ಟಿಹಾಕಿದ್ದ ಭಾರತ 237ರನ್ ಗಳ ಬೃಹತ್ ಮುನ್ನಡೆ ಪಡೆದಿತ್ತು. ಇಂದು ತನ್ನ ಪಾಲಿನ 2ನೇ ಇನ್ನಿಂಗ್ಸ್ ಬ್ಯಾಟಿಂಗ್ ಮುಂದುವರೆಸಿದ್ದು, 3ನೇ ದಿನದ ಭೋಜನ ವಿರಾಮದ ವೇಳೆ ಭಾರತ 3 ವಿಕೆಟ್ ನಷ್ಟಕ್ಕೆ 205 ರನ್ ಕಲೆಹಾಕಿದೆ.

ಆ ಮೂಲಕ ಭಾರತ ಬರೊಬ್ಬರಿ 432ರನ್ ಮುನ್ನಡೆ ಪಡೆದುಕೊಂಡಿದೆ. 86 ರನ್ ಗಳಿಸಿರುವ ಶುಭ್ ಮನ್ ಗಿಲ್ ಮತ್ತು 82 ರನ್ ಗಳಿಸಿರುವ ರಿಷಬ್ ಪಂತ್ ಕ್ರೀಸ್ ಕಾಯ್ದುಕೊಂಡಿದ್ದಾರೆ. ಇಬ್ಬರೂ ಆಟಗಾರರು ಶತಕದಂಚಿನಲ್ಲಿದ್ದು ಇಬ್ಬರೂ ಶತಕ ಸಿಡಿಸಲೆಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಮತ್ತೆ ಕೈಕೊಟ್ಟ Rohit-Kohli

ಇನ್ನು ಮೊದಲ ಇನ್ನಿಂಗ್ಸ್ ನಲ್ಲಿ ತಲಾ 6 ರನ್ ಗಳಿಸಿ ಔಟಾಗಿ ನಿರಾಶೆ ಮೂಡಿಸಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ 2ನೇ ಇನ್ನಿಂಗ್ಸ್ ನಲ್ಲಿ ಕಡಿಮೆ ಮೊತ್ತಕ್ಕೆ ಔಟಾಗಿ ಮತ್ತೆ ಅಭಿಮಾನಿಗಳ ನಿರಾಶೆಗೆ ಕಾರಣರಾದರು.

ರೋಹಿತ್ ಕೇವಲ 5 ರನ್ ಗಳಿಸಿ ಟಸ್ಕಿನ್ ಅಹ್ಮದ್ ಗೆ ವಿಕೆಟ್ ಒಪ್ಪಿಸಿದರೆ, ವಿರಾಟ್ ಕೊಹ್ಲಿ 17ರನ್ ಗಳಿಸಿ ಮೆಹ್ದಿ ಹಸನ್ ಮಿರಾಜ್ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಕೂಡ ಕೇವಲ 10ರನ್ ಗೆ ಔಟಾದರು.

ಅತ್ತ ಬಾಂಗ್ಲಾದೇಶ ಪರ ಟಸ್ಕಿನ್ ಅಹ್ಮದ್, ಮೆಹ್ದಿ ಹಸನ್ ಮಿರಾಜ್ ಮತ್ತು ಶಕೀಬ್ ಅಲ್ ಹಸನ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?